AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ರೆಮ್​ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಪ್ರಕರಣ; ಬೆಳಕಿಗೆ ಬಂದ 3 ಲಕ್ಷ ವ್ಯವಹಾರ

ರೆಮ್​ಡಿಸಿವಿರ್  ಮಾರಾಟ ವಿಚಾರಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ. ರಾಧಾಕೃಷ್ಣ, ಅಭಿಷೇಕ್, ಮಣಿಕಂಠ, ಶಂಕರ್ ಮತ್ತು ಅಕ್ಷಯ್​ನ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ವೇಳೆ ಕೆ.ಎಸ್.ಆಸ್ಪತ್ರೆಯ ಪವನ್ ಕಿಂಗ್ಪಿನ್ ಬಗ್ಗೆ ಮಾಹಿತಿ ತಿಳಿದುಬಂದಿದೆ.

ಕೊಪ್ಪಳ: ರೆಮ್​ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಪ್ರಕರಣ; ಬೆಳಕಿಗೆ ಬಂದ 3 ಲಕ್ಷ ವ್ಯವಹಾರ
ರೆಮ್​ಡಿಸಿವಿರ್​​
sandhya thejappa
|

Updated on: May 10, 2021 | 4:36 PM

Share

ಕೊಪ್ಪಳ: ಜಿಲ್ಲೆಯಲ್ಲಿ ರೆಮ್​ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಸುಮಾರು 3 ಲಕ್ಷ ವ್ಯವಹಾರ ನಡೆದಿರುವುದು ಟಿವಿ9ಗೆ ಕೊಪ್ಪಳ ಜಿಲ್ಲಾಡಳಿತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಜಿಲ್ಲೆಯ ಗಂಗಾವತಿಯ ಎರಡು ಆಸ್ಪತ್ರೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದರು. ಗಂಗಾವತಿಯ ಸಿ.ಟಿ.ಆಸ್ಪತ್ರೆ ಮತ್ತು ಚಂದ್ರಪ್ಪ ಆಸ್ಪತ್ರೆ ಮೇಲೆ ಪೊಲೀಸರು ಮತ್ತು ಆರೋಗ್ಯ ಅಧಿಕಾರಿಗಳು ದಾಳಿ ಮಾಡಿದ್ದರು. ದಾಳಿ ವೇಳೆ ರೆಮ್​ಡಿಸಿವಿರ್ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದ್ದ ಮಾಹಿತಿ ಬಯಲಾಗಿತ್ತು.

ರೆಮ್​ಡಿಸಿವಿರ್  ಮಾರಾಟ ವಿಚಾರಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ. ರಾಧಾಕೃಷ್ಣ, ಅಭಿಷೇಕ್, ಮಣಿಕಂಠ, ಶಂಕರ್ ಮತ್ತು ಅಕ್ಷಯ್​ನ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ವೇಳೆ ಕೆ.ಎಸ್.ಆಸ್ಪತ್ರೆಯ ಪವನ್ ಕಿಂಗ್ಪಿನ್ ಬಗ್ಗೆ ಮಾಹಿತಿ ತಿಳಿದುಬಂದಿದೆ. ಪವನ್ ಫೋನ್ ಪರಿಶೀಲನೆ ವೇಳೆ ಸುಮಾರು 3 ಲಕ್ಷ ರೂ. ಹಣದ ವ್ಯವಹಾರ ಬಯಲಾಗಿದೆ. ಆರು ಜನರ ನಡುವೆ ಫೋನ್ ಪೇ, ಗೂಗಲ್ ಪೇ ಮೂಲಕ ಮೂರು ಲಕ್ಷದ ವ್ಯವಹಾರ ನಡೆದಿರುವುದು ಜಿಲ್ಲಾಡಳಿತದ ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

ರೆಮ್​ಡಿಸಿವಿರ್​ ಅಕ್ರಮ ಮಾರಾಟ; ಆರೋಪಿಗಳು ಅರೆಸ್ಟ್ ಬೆಂಗಳೂರು: ರೆಮ್​ಡಿಸಿವಿರ್ ಅನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅರೋಪಿಗಳನ್ನು ಬೆಂಗಳೂರಿನ ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾಲ್ತೇಶ್, ಷಣ್ಮುಖಯ್ಯ ಸ್ವಾಮಿ ಬಂಧಿತ ಆರೋಪಿಗಳು. ಹೆಣ್ಣೂರು ಬಳಿ ಅಧಿಕ ಬೆಲೆಗೆ ಮಾರಾಟ ಮಾಡುವಾಗ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸದ್ಯ ಈ ಪ್ರಕರಣ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ಅರೋಪಿಗಳಿಂದ ಹದಿನೇಳು ರೆಮ್​ಡಿಸಿವಿರ್ ಡೋಸ್​ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ

ಕೊವಿಡ್ ನಿರ್ವಹಣೆ: ತಾಂತ್ರಿಕ ಸಮಸ್ಯೆಯಿಂದಾಗಿ ವಿಚಾರಣೆ ಮೇ 13ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

ರೆಮ್​ಡಿಸಿವಿರ್ ಕೊರತೆ ನೀಗಿಸಿಲ್ಲ ನಿಜ, ಇನ್ನು ಮುಂದೆ ನಿತ್ಯ 35 ಸಾವಿರ ರೆಮ್​ಡಿಸಿವಿರ್ ಒದಗಿಸುತ್ತೇವೆ: ಅಶ್ವತ್ಥ್ ನಾರಾಯಣ ಹೇಳಿಕೆ

(known from the district administration sources that there is a sale of Remdesivir in 3 lakhs business at koppal)

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ