AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಸಾವಿರ ಕೋಟಿ ವೆಚ್ಚದ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್​ಲೈನ್​ ನಾಳೆ ಲೋಕಾರ್ಪಣೆ

ಕೈಗಾರಿಕಾ ಮತ್ತು ಜನಸಾಮಾನ್ಯರಿಗೆ ಅಗ್ಗದ ಮತ್ತು ಉತ್ತಮ ಇಂಧನವನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. 

3 ಸಾವಿರ ಕೋಟಿ ವೆಚ್ಚದ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್​ಲೈನ್​ ನಾಳೆ ಲೋಕಾರ್ಪಣೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 04, 2021 | 9:45 PM

Share

ಬೆಂಗಳೂರು: ಕೊಚ್ಚಿ-ಮಂಗಳೂರು ನಡುವಣ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಿಡಿಯೋ ಕಾನ್ಫರೆನ್ಸ್​ ಮೂಲಕ ಉದ್ಘಾಟನೆ ಮಾಡಲಿದ್ದಾರೆ.

ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರಿಂದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಒಂದು ರಾಷ್ಟ್ರ, ಒಂದು ಅನಿಲ ಗ್ರಿಡ್ ಸ್ಥಾಪನೆಗೆ ಈ ಯೋಜನೆ ಮೈಲಿಗಲ್ಲು ಎಂದು ಪ್ರಧಾನಿ ಕಾರ್ಯಾಲಯ ಅಭಿಪ್ರಾಯಪಟ್ಟಿದೆ. ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ, ಕೇರಳ ಸಿಎಂ ಪಿಣರಾಯಿ ವಿಜಯನ್​, ಎರಡೂ ರಾಜ್ಯಗಳ ರಾಜ್ಯಪಾಲರು, ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್​ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಾಮರ್ಥ್ಯ ಎಷ್ಟು? 450 ಕಿ.ಮೀ ಉದ್ದದ ಪೈಪ್​ ಲೈನ್​ ಅನ್ನು ಗೈಲ್​ (ಇಂಡಿಯಾ) ನಿರ್ಮಾಣ ಮಾಡಿದೆ. ದಿನಕ್ಕೆ 12 ಮಿಲಿಯನ್ ಮೆಟ್ರಿಕ್ ಸ್ಟ್ಯಾಂಡರ್ಡ್ ಘನ ಮೀಟರ್ ತೈಲ ಕೊಂಡೊಯ್ಯುವ ಸಾಮರ್ಥ್ಯ ಇದಕ್ಕೆ ಇದೆ. ಕೊಚ್ಚಿಯಿಂದ ಮಂಗಳೂರಿಗೆ ಎಲ್​ಪಿಜಿಯನ್ನು ದ್ರವ ರೂಪದಲ್ಲಿ ಸಾಗಿಸಲಾಗುತ್ತದೆ. ಈ ಪೈಪ್​ಲೈನ್ ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಳಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳ ಮೂಲ ಹಾದು ಹೋಗಿ ಮಂಗಳೂರನ್ನು ತಲುಪುತ್ತದೆ.

ವೆಚ್ಚ ಎಷ್ಟು? ಈ ಬೃಹತ್​ ಯೋಜನೆಗೆ ಕೇಂದ್ರ ಸರ್ಕಾರ ಬರೋಬ್ಬರಿ 3 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿದೆ. 12 ಲಕ್ಷ ಮಾನವ ದಿನಗಳ ಕೆಲಸ ಬಳಕೆ ಆಗಿದೆ. ಕೈಗಾರಿಕಾ ಮತ್ತು ಜನಸಾಮಾನ್ಯರಿಗೆ ಅಗ್ಗದ ಮತ್ತು ಉತ್ತಮ ಇಂಧನವನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

7 ವರ್ಷ ವಿಳಂಬ 2009ರಲ್ಲಿ ಈ ಯೋಜನೆಗೆ ಅಂದಿನ ಪ್ರಧಾನಿ ಮನಮೋಹನ್​ ಸಿಂಗ್​ ಸರ್ಕಾರ ಒಪ್ಪಿಗೆ ನೀಡಿತ್ತು. 2014ರಲ್ಲಿ ಯೋಜನೆ ಪೂರ್ಣಗೊಳ್ಳಬೇಕಿತ್ತು. ಆದರೆ, ಆರು ವರ್ಷ ತಡವಾಗಿ ಯೋಜನೆ ಅಂತ್ಯಗೊಂಡಿದೆ. ಪೈಪ್​ಲೈನ್ ನಿರ್ಮಾಣದ ವೇಳೆ ಸಾಕಷ್ಟು ಅಡೆ-ತಡೆ ಎದುರಾಗಿದ್ದು ಇದಕ್ಕೆ ಮುಖ್ಯ ಕಾರಣ. ಇನ್ನು, ಯೋಜನೆಯ ವೆಚ್ಚ ಅಂದುಕೊಂಡಿದ್ದಕ್ಕಿಂತ 85 ಕೋಟಿ ಹೆಚ್ಚುವರಿಯಾಗಿ ಖರ್ಚಾಗಿದೆ.

ಮಂಗಳೂರು-ಬೆಂಗಳೂರು ಶಿರಾಡಿ ಸುರಂಗ ಮಾರ್ಗಕ್ಕೆ ಯೋಜನೆ ಸಿದ್ಧ: ನಿತಿನ್ ಗಡ್ಕರಿ

Follow Us
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್