AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಸಾವಿರ ಕೋಟಿ ವೆಚ್ಚದ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್​ಲೈನ್​ ನಾಳೆ ಲೋಕಾರ್ಪಣೆ

ಕೈಗಾರಿಕಾ ಮತ್ತು ಜನಸಾಮಾನ್ಯರಿಗೆ ಅಗ್ಗದ ಮತ್ತು ಉತ್ತಮ ಇಂಧನವನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. 

3 ಸಾವಿರ ಕೋಟಿ ವೆಚ್ಚದ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್​ಲೈನ್​ ನಾಳೆ ಲೋಕಾರ್ಪಣೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 04, 2021 | 9:45 PM

Share

ಬೆಂಗಳೂರು: ಕೊಚ್ಚಿ-ಮಂಗಳೂರು ನಡುವಣ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಿಡಿಯೋ ಕಾನ್ಫರೆನ್ಸ್​ ಮೂಲಕ ಉದ್ಘಾಟನೆ ಮಾಡಲಿದ್ದಾರೆ.

ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರಿಂದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಒಂದು ರಾಷ್ಟ್ರ, ಒಂದು ಅನಿಲ ಗ್ರಿಡ್ ಸ್ಥಾಪನೆಗೆ ಈ ಯೋಜನೆ ಮೈಲಿಗಲ್ಲು ಎಂದು ಪ್ರಧಾನಿ ಕಾರ್ಯಾಲಯ ಅಭಿಪ್ರಾಯಪಟ್ಟಿದೆ. ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ, ಕೇರಳ ಸಿಎಂ ಪಿಣರಾಯಿ ವಿಜಯನ್​, ಎರಡೂ ರಾಜ್ಯಗಳ ರಾಜ್ಯಪಾಲರು, ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್​ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಾಮರ್ಥ್ಯ ಎಷ್ಟು? 450 ಕಿ.ಮೀ ಉದ್ದದ ಪೈಪ್​ ಲೈನ್​ ಅನ್ನು ಗೈಲ್​ (ಇಂಡಿಯಾ) ನಿರ್ಮಾಣ ಮಾಡಿದೆ. ದಿನಕ್ಕೆ 12 ಮಿಲಿಯನ್ ಮೆಟ್ರಿಕ್ ಸ್ಟ್ಯಾಂಡರ್ಡ್ ಘನ ಮೀಟರ್ ತೈಲ ಕೊಂಡೊಯ್ಯುವ ಸಾಮರ್ಥ್ಯ ಇದಕ್ಕೆ ಇದೆ. ಕೊಚ್ಚಿಯಿಂದ ಮಂಗಳೂರಿಗೆ ಎಲ್​ಪಿಜಿಯನ್ನು ದ್ರವ ರೂಪದಲ್ಲಿ ಸಾಗಿಸಲಾಗುತ್ತದೆ. ಈ ಪೈಪ್​ಲೈನ್ ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಳಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳ ಮೂಲ ಹಾದು ಹೋಗಿ ಮಂಗಳೂರನ್ನು ತಲುಪುತ್ತದೆ.

ವೆಚ್ಚ ಎಷ್ಟು? ಈ ಬೃಹತ್​ ಯೋಜನೆಗೆ ಕೇಂದ್ರ ಸರ್ಕಾರ ಬರೋಬ್ಬರಿ 3 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿದೆ. 12 ಲಕ್ಷ ಮಾನವ ದಿನಗಳ ಕೆಲಸ ಬಳಕೆ ಆಗಿದೆ. ಕೈಗಾರಿಕಾ ಮತ್ತು ಜನಸಾಮಾನ್ಯರಿಗೆ ಅಗ್ಗದ ಮತ್ತು ಉತ್ತಮ ಇಂಧನವನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

7 ವರ್ಷ ವಿಳಂಬ 2009ರಲ್ಲಿ ಈ ಯೋಜನೆಗೆ ಅಂದಿನ ಪ್ರಧಾನಿ ಮನಮೋಹನ್​ ಸಿಂಗ್​ ಸರ್ಕಾರ ಒಪ್ಪಿಗೆ ನೀಡಿತ್ತು. 2014ರಲ್ಲಿ ಯೋಜನೆ ಪೂರ್ಣಗೊಳ್ಳಬೇಕಿತ್ತು. ಆದರೆ, ಆರು ವರ್ಷ ತಡವಾಗಿ ಯೋಜನೆ ಅಂತ್ಯಗೊಂಡಿದೆ. ಪೈಪ್​ಲೈನ್ ನಿರ್ಮಾಣದ ವೇಳೆ ಸಾಕಷ್ಟು ಅಡೆ-ತಡೆ ಎದುರಾಗಿದ್ದು ಇದಕ್ಕೆ ಮುಖ್ಯ ಕಾರಣ. ಇನ್ನು, ಯೋಜನೆಯ ವೆಚ್ಚ ಅಂದುಕೊಂಡಿದ್ದಕ್ಕಿಂತ 85 ಕೋಟಿ ಹೆಚ್ಚುವರಿಯಾಗಿ ಖರ್ಚಾಗಿದೆ.

ಮಂಗಳೂರು-ಬೆಂಗಳೂರು ಶಿರಾಡಿ ಸುರಂಗ ಮಾರ್ಗಕ್ಕೆ ಯೋಜನೆ ಸಿದ್ಧ: ನಿತಿನ್ ಗಡ್ಕರಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್