AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಲ ಆರಂಭಕ್ಕೂ ಮುನ್ನವೇ ಅಪಾಯಕಾರಿ ಸ್ಥಳಗಳ ಗುರುತಿಸುವ ಪ್ರಕ್ರಿಯೆ ನಡೆದಿದೆ: ಡಿಸಿ ಚಾರುಲತಾ ಸೋಮಲ್

ತೌಕ್ತೆ ಚಂಡ ಮಾರುತ ಅಪಾಯ ತಂದೊಡ್ಡಬಹುದು ಎನ್ನುವ ಕಾರಣಕ್ಕೆ ಮುಂಜಾಗೃತಾ ಕ್ರಮವಾಗಿ ಮೊದಲೇ ಎನ್​ಡಿಆರ್​ಎಫ್ ತಂಡ ಮಡಿಕೇರಿಗೆ ಬಂದಿಳಿದಿದ್ದು, ವಿಜಯವಾಡದ 20 ಸದಸ್ಯರ ತಂಡ ಮಡಿಕೇರಿಯಲ್ಲಿ ಬೀಡುಬಿಟ್ಟಿದೆ.

ಮಳೆಗಾಲ ಆರಂಭಕ್ಕೂ ಮುನ್ನವೇ ಅಪಾಯಕಾರಿ ಸ್ಥಳಗಳ ಗುರುತಿಸುವ ಪ್ರಕ್ರಿಯೆ ನಡೆದಿದೆ: ಡಿಸಿ ಚಾರುಲತಾ ಸೋಮಲ್
ಎನ್​ಡಿಆರ್​ಎಫ್ ತಂಡದ ಕಾರ್ಯಾಚರಣೆ
preethi shettigar
|

Updated on:May 17, 2021 | 4:33 PM

Share

ಕೊಡಗು: ಕೊರೊನಾ ಸಂಕಷ್ಟದಲ್ಲಿ ಇಡೀ ದೇಶವೇ ನಲುಗಿದ್ದು, ಕೊಡಗು ಕೂಡ ಇದರಿಂದ ಹೊರತಾಗಿಲ್ಲ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಿರುವಾಗ ಕೊಡಗು ಜಿಲ್ಲೆಗೆ ಮಳೆಯ ಆತಂಕ ಸೃಷ್ಟಿಯಾಗಿದೆ. ಈ ಹಿಂದೆ ಕೊಡಗು ಜಿಲ್ಲೆಗೆ ಮಳೆಯೇ ಜೀವಾಳವಾಗಿತ್ತು. ಆದರೆ ಇದೀಗ ಅದೇ ಮಳೆ ಜಿಲ್ಲೆಯ ಜನತೆ ಪಾಲಿಗೆ ಕಂಟಕವಾಗಿದೆ. ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಮಳೆ ಸೃಷ್ಟಿಸಿರುವ ಅನಾಹುತಕ್ಕೆ ಜನ ಜೀವನ ತತ್ತರಿಸಿಹೋಗಿದೆ. ಇದೀಗ ನಾಲ್ಕನೇ ವರ್ಷದ ಮಳೆಗಾಲ ಆರಂಭವಾಗಿದ್ದು, ಹಿಂದಿನ ನಷ್ಟ ಮತ್ತೆ ಜಿಲ್ಲೆಯಲ್ಲಿ ಸಂಭವಿಸದಂತೆ ಜಿಲ್ಲಾಡಳಿತ ಮುಂಜಾಗೃತಾ ಕ್ರಮವನ್ನು ತೆಗೆದುಕೊಂಡಿದೆ.

ಇನ್ನೇನು ಎರಡು ವಾರದಲ್ಲಿ ಮಳೆಗಾಲ ಆರಂಭವಾಗುತ್ತದೆ. ಇದೀಗ ಮೇ ಮೊದಲ ವಾರದಲ್ಲೇ ಮುಂಗಾರು ಶುರುವಾಗಿದ್ದು, ಜೂನ್​ನಿಂದ ಸೆಪ್ಟೆಂಬರ್ ಅಂತ್ಯದವರೆಗೂ ಭೀಕರ ಮಳೆಗಾಲದ ಅವಧಿ ಇರಲಿದೆ. ಹಾಗಾಗಿ ಜಿಲ್ಲಾಡಳಿತ ಈಗಲೇ ಅಗತ್ಯ ಮುಂಜಾಗೃತಾ ಕ್ರಮಗಳಿಗೆ ಮುಂದಾಗಿದೆ. ಮಳೆಗಾಲ ಆರಂಭಕ್ಕೂ ಮುನ್ನವೇ ಜಿಲ್ಲೆಯಲ್ಲಿ ಅಪಾಯಕಾರಿ ಸ್ಥಳಗಳ ಗುರುತಿಸುವ ಪ್ರಕ್ರಿಯೆ ನಡೆದಿದೆ. ಸ್ಥಳಗಳನ್ನು ಗುರುತಿಸಿದ ಬಳಿಕ ಅಲ್ಲಿಂದ ಜನರನ್ನ ಸ್ಥಳಾಂತರ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ಒಂದು ವೇಳೆ ಅನಾಹುತಗಳು ಸಂಭವಿಸಿದರೆ ಅದನ್ನ ನಿಭಾಯಿಸಲು ರಕ್ಷಣಾ ಪಡೆಗಳನ್ನ ಕರೆಸುವುದಕ್ಕೂ ಜಿಲ್ಲಾಡಳಿತ ಸಜ್ಜಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಈ ಮಧ್ಯೆ ಜಿಲ್ಲೆಯಲ್ಲಿ ತೌಕ್ತೆ ಚಂಡ ಮಾರುತ ಅಪಾಯ ತಂದೊಡ್ಡಬಹುದು ಎನ್ನುವ ಕಾರಣಕ್ಕೆ ಮುಂಜಾಗೃತಾ ಕ್ರಮವಾಗಿ ಮೊದಲೇ ಎನ್​ಡಿಆರ್​ಎಫ್ ತಂಡ ಮಡಿಕೇರಿಗೆ ಬಂದಿಳಿದಿದ್ದು, ವಿಜಯವಾಡದ 20 ಸದಸ್ಯರ ತಂಡ ಮಡಿಕೇರಿಯಲ್ಲಿ ಬೀಡುಬಿಟ್ಟಿದೆ. ಕಳೆದ ವರ್ಷ ದುರ್ಘಟನೆ ಸಂಭವಿಸಿದ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಲಿದೆ. ಮಾತ್ರವಲ್ಲ ಅಲ್ಲಿ ಅಣಕು ಕಾರ್ಯಾಚರಣೆ ನಡೆಸಿ ಪೂರ್ವಸಿದ್ಧತೆ ನಡೆಸಲು ಸಜ್ಜಾಗಿದೆ.

ಮಳೆಗಾಲ ಆರಂಭವಾಗುತ್ತಲೇ ಎನ್​ಡಿಆರ್​ಎಫ್​ನ ಹೆಚ್ಚುವರಿ ಪಡೆಗಳು ಮತ್ತು ಇತರ ರಕ್ಷಣಾ ಪಡೆಗಳು ಕೂಡ ಜಿಲ್ಲೆಗೆ ಆಗಮಿಸಲಿವೆ. ಇವೆಲ್ಲದರ ಮಧ್ಯೆ ಜಿಲ್ಲೆಯ ಜನರು ಆತಂಕದಿಂದಲೇ ದಿನ ದೂಡುತ್ತಿದ್ದಾರೆ. ಆದರೆ ಜಿಲ್ಲಾಡಳಿತದ ಈ ಮುಂಜಾಗೃತ ಕ್ರಮ ಸದ್ಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ:

ತೌಕ್ತೆ ಚಂಡಮಾರುತದ ಪ್ರಭಾವ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೂ ವ್ಯಾಪಿಸುವ ಸಾಧ್ಯತೆ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಹೆಚ್ಚುತ್ತಿರುವ ಕೊರೊನಾ ಸೋಂಕು; ಕೊಡಗು ಜಿಲ್ಲೆಯಲ್ಲಿ ಮತ್ತಷ್ಟು ಕಠಿಣ ನಿಯಮ ಜಾರಿಗೊಳಿಸಿದ ಜಿಲ್ಲಾಧಿಕಾರಿ

Published On - 4:29 pm, Mon, 17 May 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ