AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಲ ಆರಂಭಕ್ಕೂ ಮುನ್ನವೇ ಅಪಾಯಕಾರಿ ಸ್ಥಳಗಳ ಗುರುತಿಸುವ ಪ್ರಕ್ರಿಯೆ ನಡೆದಿದೆ: ಡಿಸಿ ಚಾರುಲತಾ ಸೋಮಲ್

ತೌಕ್ತೆ ಚಂಡ ಮಾರುತ ಅಪಾಯ ತಂದೊಡ್ಡಬಹುದು ಎನ್ನುವ ಕಾರಣಕ್ಕೆ ಮುಂಜಾಗೃತಾ ಕ್ರಮವಾಗಿ ಮೊದಲೇ ಎನ್​ಡಿಆರ್​ಎಫ್ ತಂಡ ಮಡಿಕೇರಿಗೆ ಬಂದಿಳಿದಿದ್ದು, ವಿಜಯವಾಡದ 20 ಸದಸ್ಯರ ತಂಡ ಮಡಿಕೇರಿಯಲ್ಲಿ ಬೀಡುಬಿಟ್ಟಿದೆ.

ಮಳೆಗಾಲ ಆರಂಭಕ್ಕೂ ಮುನ್ನವೇ ಅಪಾಯಕಾರಿ ಸ್ಥಳಗಳ ಗುರುತಿಸುವ ಪ್ರಕ್ರಿಯೆ ನಡೆದಿದೆ: ಡಿಸಿ ಚಾರುಲತಾ ಸೋಮಲ್
ಎನ್​ಡಿಆರ್​ಎಫ್ ತಂಡದ ಕಾರ್ಯಾಚರಣೆ
preethi shettigar
|

Updated on:May 17, 2021 | 4:33 PM

Share

ಕೊಡಗು: ಕೊರೊನಾ ಸಂಕಷ್ಟದಲ್ಲಿ ಇಡೀ ದೇಶವೇ ನಲುಗಿದ್ದು, ಕೊಡಗು ಕೂಡ ಇದರಿಂದ ಹೊರತಾಗಿಲ್ಲ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಿರುವಾಗ ಕೊಡಗು ಜಿಲ್ಲೆಗೆ ಮಳೆಯ ಆತಂಕ ಸೃಷ್ಟಿಯಾಗಿದೆ. ಈ ಹಿಂದೆ ಕೊಡಗು ಜಿಲ್ಲೆಗೆ ಮಳೆಯೇ ಜೀವಾಳವಾಗಿತ್ತು. ಆದರೆ ಇದೀಗ ಅದೇ ಮಳೆ ಜಿಲ್ಲೆಯ ಜನತೆ ಪಾಲಿಗೆ ಕಂಟಕವಾಗಿದೆ. ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಮಳೆ ಸೃಷ್ಟಿಸಿರುವ ಅನಾಹುತಕ್ಕೆ ಜನ ಜೀವನ ತತ್ತರಿಸಿಹೋಗಿದೆ. ಇದೀಗ ನಾಲ್ಕನೇ ವರ್ಷದ ಮಳೆಗಾಲ ಆರಂಭವಾಗಿದ್ದು, ಹಿಂದಿನ ನಷ್ಟ ಮತ್ತೆ ಜಿಲ್ಲೆಯಲ್ಲಿ ಸಂಭವಿಸದಂತೆ ಜಿಲ್ಲಾಡಳಿತ ಮುಂಜಾಗೃತಾ ಕ್ರಮವನ್ನು ತೆಗೆದುಕೊಂಡಿದೆ.

ಇನ್ನೇನು ಎರಡು ವಾರದಲ್ಲಿ ಮಳೆಗಾಲ ಆರಂಭವಾಗುತ್ತದೆ. ಇದೀಗ ಮೇ ಮೊದಲ ವಾರದಲ್ಲೇ ಮುಂಗಾರು ಶುರುವಾಗಿದ್ದು, ಜೂನ್​ನಿಂದ ಸೆಪ್ಟೆಂಬರ್ ಅಂತ್ಯದವರೆಗೂ ಭೀಕರ ಮಳೆಗಾಲದ ಅವಧಿ ಇರಲಿದೆ. ಹಾಗಾಗಿ ಜಿಲ್ಲಾಡಳಿತ ಈಗಲೇ ಅಗತ್ಯ ಮುಂಜಾಗೃತಾ ಕ್ರಮಗಳಿಗೆ ಮುಂದಾಗಿದೆ. ಮಳೆಗಾಲ ಆರಂಭಕ್ಕೂ ಮುನ್ನವೇ ಜಿಲ್ಲೆಯಲ್ಲಿ ಅಪಾಯಕಾರಿ ಸ್ಥಳಗಳ ಗುರುತಿಸುವ ಪ್ರಕ್ರಿಯೆ ನಡೆದಿದೆ. ಸ್ಥಳಗಳನ್ನು ಗುರುತಿಸಿದ ಬಳಿಕ ಅಲ್ಲಿಂದ ಜನರನ್ನ ಸ್ಥಳಾಂತರ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ಒಂದು ವೇಳೆ ಅನಾಹುತಗಳು ಸಂಭವಿಸಿದರೆ ಅದನ್ನ ನಿಭಾಯಿಸಲು ರಕ್ಷಣಾ ಪಡೆಗಳನ್ನ ಕರೆಸುವುದಕ್ಕೂ ಜಿಲ್ಲಾಡಳಿತ ಸಜ್ಜಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಈ ಮಧ್ಯೆ ಜಿಲ್ಲೆಯಲ್ಲಿ ತೌಕ್ತೆ ಚಂಡ ಮಾರುತ ಅಪಾಯ ತಂದೊಡ್ಡಬಹುದು ಎನ್ನುವ ಕಾರಣಕ್ಕೆ ಮುಂಜಾಗೃತಾ ಕ್ರಮವಾಗಿ ಮೊದಲೇ ಎನ್​ಡಿಆರ್​ಎಫ್ ತಂಡ ಮಡಿಕೇರಿಗೆ ಬಂದಿಳಿದಿದ್ದು, ವಿಜಯವಾಡದ 20 ಸದಸ್ಯರ ತಂಡ ಮಡಿಕೇರಿಯಲ್ಲಿ ಬೀಡುಬಿಟ್ಟಿದೆ. ಕಳೆದ ವರ್ಷ ದುರ್ಘಟನೆ ಸಂಭವಿಸಿದ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಲಿದೆ. ಮಾತ್ರವಲ್ಲ ಅಲ್ಲಿ ಅಣಕು ಕಾರ್ಯಾಚರಣೆ ನಡೆಸಿ ಪೂರ್ವಸಿದ್ಧತೆ ನಡೆಸಲು ಸಜ್ಜಾಗಿದೆ.

ಮಳೆಗಾಲ ಆರಂಭವಾಗುತ್ತಲೇ ಎನ್​ಡಿಆರ್​ಎಫ್​ನ ಹೆಚ್ಚುವರಿ ಪಡೆಗಳು ಮತ್ತು ಇತರ ರಕ್ಷಣಾ ಪಡೆಗಳು ಕೂಡ ಜಿಲ್ಲೆಗೆ ಆಗಮಿಸಲಿವೆ. ಇವೆಲ್ಲದರ ಮಧ್ಯೆ ಜಿಲ್ಲೆಯ ಜನರು ಆತಂಕದಿಂದಲೇ ದಿನ ದೂಡುತ್ತಿದ್ದಾರೆ. ಆದರೆ ಜಿಲ್ಲಾಡಳಿತದ ಈ ಮುಂಜಾಗೃತ ಕ್ರಮ ಸದ್ಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಇದನ್ನೂ ಓದಿ:

ತೌಕ್ತೆ ಚಂಡಮಾರುತದ ಪ್ರಭಾವ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೂ ವ್ಯಾಪಿಸುವ ಸಾಧ್ಯತೆ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಹೆಚ್ಚುತ್ತಿರುವ ಕೊರೊನಾ ಸೋಂಕು; ಕೊಡಗು ಜಿಲ್ಲೆಯಲ್ಲಿ ಮತ್ತಷ್ಟು ಕಠಿಣ ನಿಯಮ ಜಾರಿಗೊಳಿಸಿದ ಜಿಲ್ಲಾಧಿಕಾರಿ

Published On - 4:29 pm, Mon, 17 May 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?