AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಟೂರಿಸ್ಟ್ ಸೆಂಟರ್ ಅಕ್ರಮಗಳಿಗೆ ಸ್ಥಳೀಯ ಆಡಳಿತದಿಂದಲೇ ಅನುಮೋದನೆ; ಕಾವೇರಿ ನದಿಯ ಬುಡದಿಂದಲೇ ನಡೆಯುತ್ತಿದೆ ವಾಣಿಜ್ಯ ಚಟುವಟಿಕೆ

ನದಿ ಅತಿಕ್ರಮಣದ ಬಗ್ಗೆ ಈಗಾಗಲೇ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಈಗಾಗಲೆ ಸರ್ವೆ ನಡೆಸಲಾಗಿದೆ. ಕಾನೂನು ಎಲ್ಲರಿಗೂ ಒಂದೇ. ಒಂದು ವೇಳೆ ಅತಿಕ್ರಮಣವಾಗಿದ್ದರೆ ಅದನ್ನು ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಕೊಡಗು: ಟೂರಿಸ್ಟ್ ಸೆಂಟರ್ ಅಕ್ರಮಗಳಿಗೆ ಸ್ಥಳೀಯ ಆಡಳಿತದಿಂದಲೇ ಅನುಮೋದನೆ; ಕಾವೇರಿ ನದಿಯ ಬುಡದಿಂದಲೇ ನಡೆಯುತ್ತಿದೆ ವಾಣಿಜ್ಯ ಚಟುವಟಿಕೆ
ನಿಸರ್ಗಧಾಮ ಟೂರಿಸ್ಟ್​ ಸೆಂಟರ್​
TV9 Web
| Updated By: preethi shettigar|

Updated on:Jul 06, 2021 | 11:15 AM

Share

ಕೊಡಗು: ಪ್ರವಾಸೋದ್ಯಮದ ಹೆಸರಿನಲ್ಲಿ ಪಕೃತಿಯನ್ನು ನಾಶ ಮಾಡುತ್ತಿರುವ ಆರೋಪ ಸದ್ಯ ಕೊಡಗು ಜಿಲ್ಲೆಯಲ್ಲಿ ಕೇಳಿ ಬಂದಿದೆ. ಜಿಲ್ಲೆಯಲ್ಲಿ ಅತಿಯಾದ ಪ್ರವಾಸೋದ್ಯಮದಿಂದಾಗಿ ಪ್ರವಾಹ ಮತ್ತು ಭೂ ಕುಸಿತಗಳು ಸಂಬವಿಸುತ್ತಲೇ ಇವೆ. ಆದರೂ ಕೂಡ ಇಲ್ಲಿನ ಪ್ರವಾಸೋದ್ಯಮಿಗಳ ದುರಾಸೆ ಮಾತ್ರ ಕಡಿಮೆಯಾಗಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ವಿಶ್ವ ಪ್ರಸಿದ್ಧ ಕಾವೇರಿ ನಿಸರ್ಗಧಾಮದ ಬಳಿಯೇ ಕಾವೇರಿ ನದಿಯನ್ನು ಪ್ರವಾಸೋದ್ಯಮಿಯೊಬ್ಬರು ಅತಿಕ್ರಮಣ ಮಾಡಿರುವ ವಿಚಾರ ಸದ್ಯ ಬೆಳಕಿಗೆ ಬಂದಿದೆ. ಇದು ಸಹಜವಾಗಿಯೇ ಇಲ್ಲಿನ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕೊಡಗಿನ ವಿಶ್ವ ಪ್ರಸಿದ್ಧ ಕಾವೇರಿ ನಿಸರ್ಗಧಾಮ ಯಾರಿಗೆ ಗೊತ್ತಿಲ್ಲ ಹೇಳಿ. ಅರಣ್ಯ ಇಲಾಖೆ ನಡೆಸುತ್ತಿರುವ ನಿಸರ್ಗಧಾಮ ಪ್ರವಾಸಿ ಕೇಂದ್ರಕ್ಕೆ ಅದರಲ್ಲೂ, ಇಲ್ಲಿ ಹರಿಯುವ ಜುಳು ಜುಳು ನೀರಿನ ಸೌಂದರ್ಯವನ್ನು ಸವಿಯಲು ದೂರದ ಊರುಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಹೀಗೆ ಆಗಮಿಸುವ ಪ್ರವಾಸಿಗರ ಸಂತೋಷ ಇಮ್ಮಡಿಗೊಳಿಸಲು ಕಾವೇರಿ ತಟದಲ್ಲಿ ನಿಸರ್ಗಧಾಮ ಟೂರಿಸ್ಟ್​ ಸೆಂಟರ್​ಗಳು ಆರಂಭವಾಗಿದೆ. 2015 ರಿಂದ ಆರಂಭವಾದ ಈ ಟೂರಿಸ್ಟ್ ಸೆಂಟರ್​ಗಳಲ್ಲಿ ಫನ್ ಗೇಮ್​ಗಳು ಮತ್ತು ಶಾಪಿಂಗ್ ಸೆಂಟರ್​ಗಳು ಕೂಡ ಇದೆ. ಆದರೆ ಹೀಗೆ ಆರಂಭವಾದ ನಿಸರ್ಗಧಾಮ ಟೂರಿಸ್ಟ್ ಸೆಂಟರ್ ಮಾಲೀಕ ಸಲಾಂ ಎಂಬುವರು ಕಾವೇರಿ ನದಿಯನ್ನೇ ಅತಿಕ್ರಮಣ ಮಾಡಿ ತಮ್ಮ ಟೂರಿಸ್ಟ್ ಸೆಂಟರ್ ನಿರ್ಮಿಸಿದ್ದಾರೆ ಎಂಬ ಆರೋಪ ಸದ್ಯ ಕೇಳಿ ಬಂದಿದೆ.

ನಿಸರ್ಗಧಾಮ ಟೂರಿಸ್ಟ್ ಸೆಂಟರ್ ಮಾಲೀಕ ಸಲಾಂ ಎಂಬುವರು ನದಿಯನ್ನು ಅತಿಕ್ರಮಿಸಿ ಹಲವಾರು ಕಟ್ಟಡ, ತಡೆಗೋಡೆ, ಪಾರ್ಕ್, ಮತ್ತು ಡ್ರೈವಿಂಗ್ ಟ್ರ್ಯಾಕ್​ಗಳನ್ನ ನಿರ್ಮಾಣ ಮಾಡಿದ್ದಾರೆ. ಇದರಿಂದ ಕಾವೇರಿ ನದಿಯ ಹರಿಯುವಿಕೆಗೆ ತೀವ್ರ ಅಡಚಣೆಯಾಗಿದೆ. ಇದೇ ಕಾರಣದಿಂದಾಗಿ ಪ್ರತಿ ವರ್ಷ ಇಲ್ಲಿ ಅತಿಯಾದ ಪ್ರವಾಹ ಸಂಭವಿಸುತ್ತಿದ್ದು, ಮಡಿಕೇರಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮುಳಗಡೆಯಾಗುತ್ತಿದೆ. ನಿಯಮಗಳ ಪ್ರಕಾರ ಯಾವುದೇ ನದಿಯಿಂದ 100 ಮೀಟರ್ ದೂರದವರೆಗೆ ವಾಣಿಜ್ಯ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಆದರೆ ನಿಸರ್ಗಧಾಮದಲ್ಲಿ ಕಾವೇರಿ ನದಿ ದಂಡೆಯಲ್ಲೇ ಕೋಟಿ ಹಣ ಹೂಡಿಕೆ ಮಾಡಿ ವಾಣಿಜ್ಯ ಚಟುವಟಿಕೆ ನಡೆಸಲಾಗುತ್ತಿದೆ. ವಿಪರ್ಯಾಸ ಅಂದರೆ ಪ್ರವಾಸೋದ್ಯಮಿಯ ಅಕ್ರಮಗಳಿಗೆ ಸ್ಥಳೀಯ ಗ್ರಾಮ ಪಂಚಾಯತಿ ಮತ್ತು ಕಾವೇರಿ ನಿಗಮದ ಅಧಿಕಾರಿಗಳು ಅನುಮತಿ ನೀಡಿದ್ದಾರೆ. ಹಾಗಾಗಿ ಯಾವುದೇ ಅಧಿಕಾರಿಗಳು ಇಲ್ಲಿಗೆ ಭೇಟಿ ನೀಡಿದರೆ, ಸಲಾಂ ತಮ್ಮ ಬಳಿ ಇರುವ ಅಧಿಕೃತ ದಾಖಲೆಗಳನ್ನು ನೀಡಿ ಬಾಯಿ ಮುಚ್ಚಿಸುತ್ತಾರೆ ಎನ್ನುವುದು ಟಿವಿ9 ಡಿಜಿಟಲ್​ನ ರಿಯಾಲಿಟಿ ಚೆಕ್​ ವೇಳೆ ಬೆಳಕಿಗೆ ಬಂದಿದೆ.

notice

ತಹಿಶೀಲ್ದಾರ್ ನೋಟಿಸ್

ನದಿಯ ಬದಿಯಲ್ಲಿ ತಡೆಗೋಡೆ ಕಟ್ಟಲು, ಉದ್ಯಾನವನ ನಿರ್ಮಾಣ ಮಾಡಲು, ವಾಣಿಜ್ಯ ಚಟುವಟಿಕೆ ನಡೆಸಲು ನನಗೆ ಸಂಬಂಧಪಟ್ಟ ಪ್ರಾಧಿಕಾರ, ಕಾವೇರಿ ನಿಗಮ, ಸ್ಥಳೀಯ ಪಂಚಾಯಿತಿ ಹಾಗೂ ತಹಶಿಲ್ದಾರರಿಂದ ಅನುಮತಿ ದೊರೆತಿದೆ. ಇದು ಅಕ್ರಮ ಎಂದಾದಲ್ಲಿ ಅವರು ಅನುಮತಿ ಯಾಕೆ ಕೊಟ್ಟರು. ಸ್ಥಳೀಯ ಅರಣ್ಯ ಇಲಾಖೆ ಕೂಡ ಕಾವೇರಿ ನಿಸರ್ಗಧಾಮದಲ್ಲಿ ನದಿ ಪಕ್ಕ ಅತಿಕ್ರಮಿಸಿ ಕಾಟೇಜ್​ಗಳನ್ನು ನಿರ್ಮಿಸಿದೆ. ಅವರಿಗೆ ಒಂದು ಕಾನೂನು, ನನಗೆ ಒಂದು ಕಾನೂನಾ? ಎಂದು ಅತಿಕ್ರಮಣದಾರ ಸಲಾಂ ಪ್ರಶ್ನಿಸಿದ್ದಾರೆ.

ನದಿ ಅತಿಕ್ರಮಣದ ಬಗ್ಗೆ ಈಗಾಗಲೇ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಈಗಾಗಲೆ ಸರ್ವೆ ನಡೆಸಲಾಗಿದೆ. ಕಾನೂನು ಎಲ್ಲರಿಗೂ ಒಂದೇ. ಒಂದು ವೇಳೆ ಅತಿಕ್ರಮಣವಾಗಿದ್ದರೆ ಅದನ್ನು ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಟೂರಿಸ್ಟ್ ಸೆಂಟರ್​ನಲ್ಲಿ ನಿರ್ಮಾಣವಾಗಿರುವ ಪ್ರತಿಯೊಂದು ಕಟ್ಟಡಗಳಿಗೂ ಅನುಮತಿ ಪಡೆಯಲಾಗಿದೆ. ಆದರೆ ನದಿ ಪಕ್ಕದಲ್ಲಿ ಇಷ್ಟೊಂದು ಅಕ್ರಮಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳು ಹೇಗೆ ಅನುಮತಿ ನೀಡಿದ್ದಾರೆ ಎನ್ನುವುದು ನಾಗರಿಕರ ಪ್ರಶ್ನೆ. ಸದ್ಯ ಕಾವೇರಿ ಉಳಿಸುವ ನಿಟ್ಟಿನಲ್ಲಿ, ಈ ಅಕ್ರಮ ಟೂರಿಸ್ಟ್ ಸೆಂಟರ್​ ಅನ್ನು ಇಲ್ಲಿಂದ ತೆರವುಗೊಳಿಸಬೇಕಾದ ಅನಿರ್ವಾತೆ ಇದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿರುವ ಕೊಡಗು ಪ್ರವಾಸಿ ತಾಣ; ಪ್ರವಾಸೋದ್ಯಮಕ್ಕೆ 2 ಕೋಟಿ ರೂಪಾಯಿ ನಷ್ಟ

ಲಾಕ್​ಡೌನ್​ ಹಿನ್ನೆಲೆ ಕೊಡಗು ಜಿಲ್ಲೆಯೊಳಕ್ಕೆ ಯಾವುದೇ ಪ್ರವಾಸಿಗರು ಬರುವಂತಿಲ್ಲ: ಕಟ್ಟೆಚ್ಚರ

Published On - 9:56 am, Tue, 6 July 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ