AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ನೀರಿಗಾಗಿ ಹಾಹಾಕಾರ; ಗ್ರಾಮ ಪಂಚಾಯತಿ ವಿರುದ್ಧ ಪ್ರವಾಹ ಸಂತ್ರಸ್ತರ ಆಕ್ರೋಶ

ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರಿನ 340 ಮನೆಗಳಿಗೆ 5 ದಿನದಿಂದ ನೀರು ಪೂರೈಕೆ ಆಗುತ್ತಿಲ್ಲ. ಹೀಗಾಗಿ ಯಂಗ್ ಇಂಡಿಯಾ ಸದಸ್ಯರು ಸಂತ್ರಸ್ತರ ನೆರವಿಗೆ ನಿಂತಿದ್ದಾರೆ. ಯಂಗ್ ಇಂಡಿಯಾ ಸದಸ್ಯರು ಟ್ಯಾಂಕರ್​ನಲ್ಲಿ ನೀರು ಪೂರೈಸುತ್ತಿದ್ದಾರೆ.

ಕೊಡಗಿನಲ್ಲಿ ನೀರಿಗಾಗಿ ಹಾಹಾಕಾರ; ಗ್ರಾಮ ಪಂಚಾಯತಿ ವಿರುದ್ಧ ಪ್ರವಾಹ ಸಂತ್ರಸ್ತರ ಆಕ್ರೋಶ
ಪ್ರಾತಿನಿಧಿಕ ಚಿತ್ರ
sandhya thejappa
sandhya thejappa|

Updated on:May 12, 2021 | 11:42 AM

Share

ಮಡಿಕೇರಿ: ಒಂದು ಕಡೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನೊಂದು ಕಡೆ ಕೊಡಗಿನ ಜನ ನೀರಿಗಾಗಿ ಪರದಾಟಪಡುತ್ತಿದ್ದಾರೆ. ಕೊಡಗು ಪ್ರವಾಹ ಸಂತ್ರಸ್ತರು ಕುಡಿಯುವುದಕ್ಕೆ ಮತ್ತು ಅಡುಗೆ ಮಾಡಲೂ ನೀರಿಲ್ಲದೆ ಸಂಕಷ್ಟ ಅನುಭವಿಸುವಂತಾಗಿದೆ. ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರಿನ 340 ಮನೆಗಳಿಗೆ 5 ದಿನದಿಂದ ನೀರು ಪೂರೈಕೆ ಆಗುತ್ತಿಲ್ಲ. ಹೀಗಾಗಿ ಯಂಗ್ ಇಂಡಿಯಾ ಸದಸ್ಯರು ಸಂತ್ರಸ್ತರ ನೆರವಿಗೆ ನಿಂತಿದ್ದಾರೆ. ಯಂಗ್ ಇಂಡಿಯಾ ಸದಸ್ಯರು ಟ್ಯಾಂಕರ್​ನಲ್ಲಿ ನೀರು ಪೂರೈಸುತ್ತಿದ್ದಾರೆ.

ಪ್ರವಾಹ ಸಂತ್ರಸ್ತರಿಗೆ ಸರ್ಕಾರ ಸುಮಾರು 340 ಮನೆ ನಿರ್ಮಿಸಿಕೊಟ್ಟಿತ್ತು. ಆದರೆ 5 ದಿನಗಳಿಂದ ಈ 340 ಮನೆಗಳಿಗೆ ನೀರು ಬರುತ್ತಿಲ್ಲ. ಬೋರ್ ವೆಲ್ ಮೋಟಾರ್ ಕೆಟ್ಟು ನಿಂತಿರುವ ಕಾರಣ ಸ್ನಾನ, ಅಡುಗೆಗೂ ನೀರಿಲ್ಲದೆ ಸಂತಸ್ತರು ಪರದಾಟ ಪಡುತ್ತಿದ್ದಾರೆ. ಇದರಿಂದ ಯಂಗ್ ಇಂಡಿಯಾ ಸದಸ್ಯರು ನೀರನ್ನು ಪೂರೈಸುತ್ತಿದ್ದು, ಸಂತ್ರಸ್ತರು ನೀರಿಗಾಗಿ ಸಾಮಾಜಿಕ ಅಂತರ ಮರೆತಿದ್ದಾರೆ. 5 ದಿನಗಳಿಂದ ನೀರು ಪೂರೈಕೆ ಆಗುತ್ತಿಲ್ಲ ಎಂದು ಸಂತ್ರಸ್ತರು ಮಾದಾಪುರ ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೈಹಿಕ ಅಂತರ ಕಾಪಾಡದ ಜನ ನೆಲಮಂಗಲ: ದಾಸರಹಳ್ಳಿಯ ಮಲ್ಲಸಂದ್ರದಲ್ಲಿ ನೀರಿನ ಘಟಕಗಳ ಮುಂದೆ ದೈಹಿಕ ಅಂತರವಿಲ್ಲದೆ ಜನ ಸೇರಿದ್ದಾರೆ. ಕ್ಯಾಮರ ಕಂಡು ಸರದಿ ಸಾಲಿನಲ್ಲಿ ನಿಲ್ಲಲ್ಲು ಜನರು ಯತ್ನಸಿದ್ದು, ಕೊರೊನ ಲಾಕ್​ಡೌನ್ ಮಧ್ಯೆಯೂ ಅವಶ್ಯ ನೀರನ್ನು ತುಂಬಿಸಿಕೊಳ್ಳಲು ಬಂದಿದ್ದರು. ದೈಹಿಕ ಅಂತರ ಇಲ್ಲದೆ ಇರುವುದರಿಂದ ಕೊರೊನಾ ಹರಡುವ ಭೀತಿ ಎದುರಾಗಿದೆ.

ಇದನ್ನೂ ಓದಿ

ಇನ್ನೂ 3 ದಿನ ರಾಜ್ಯದಲ್ಲಿ ಕೊರೊನಾ ಲಸಿಕೆ ಸಿಗೋದು ಅನುಮಾನ; ಕೇಂದ್ರ ಸರ್ಕಾರ ಹೇಳಿದಷ್ಟೇ ಪೂರೈಕೆ ಸಾಧ್ಯ ಎನ್ನುತ್ತಿವೆ ಸಂಸ್ಥೆಗಳು

ಡಿಸಿಎಂ ಗೋವಿಂದ ಕಾರಜೋಳ ಕ್ಷೇತ್ರದಲ್ಲಿ ಬೆಡ್ ಸಿಗದೇ ಕೋವಿಡ್ ಸೋಂಕಿತ ಬಾರ್ ಮ್ಯಾನೇಜರ್ ನರಳಾಡಿ ಸಾವು…

(Kodagu Flood victims are struggling for water and are outraged against gram panchayat)

Published On - 10:29 am, Wed, 12 May 21

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು