AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ನೀರಿಗಾಗಿ ಹಾಹಾಕಾರ; ಗ್ರಾಮ ಪಂಚಾಯತಿ ವಿರುದ್ಧ ಪ್ರವಾಹ ಸಂತ್ರಸ್ತರ ಆಕ್ರೋಶ

ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರಿನ 340 ಮನೆಗಳಿಗೆ 5 ದಿನದಿಂದ ನೀರು ಪೂರೈಕೆ ಆಗುತ್ತಿಲ್ಲ. ಹೀಗಾಗಿ ಯಂಗ್ ಇಂಡಿಯಾ ಸದಸ್ಯರು ಸಂತ್ರಸ್ತರ ನೆರವಿಗೆ ನಿಂತಿದ್ದಾರೆ. ಯಂಗ್ ಇಂಡಿಯಾ ಸದಸ್ಯರು ಟ್ಯಾಂಕರ್​ನಲ್ಲಿ ನೀರು ಪೂರೈಸುತ್ತಿದ್ದಾರೆ.

ಕೊಡಗಿನಲ್ಲಿ ನೀರಿಗಾಗಿ ಹಾಹಾಕಾರ; ಗ್ರಾಮ ಪಂಚಾಯತಿ ವಿರುದ್ಧ ಪ್ರವಾಹ ಸಂತ್ರಸ್ತರ ಆಕ್ರೋಶ
ಪ್ರಾತಿನಿಧಿಕ ಚಿತ್ರ
sandhya thejappa
sandhya thejappa|

Updated on:May 12, 2021 | 11:42 AM

Share

ಮಡಿಕೇರಿ: ಒಂದು ಕಡೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನೊಂದು ಕಡೆ ಕೊಡಗಿನ ಜನ ನೀರಿಗಾಗಿ ಪರದಾಟಪಡುತ್ತಿದ್ದಾರೆ. ಕೊಡಗು ಪ್ರವಾಹ ಸಂತ್ರಸ್ತರು ಕುಡಿಯುವುದಕ್ಕೆ ಮತ್ತು ಅಡುಗೆ ಮಾಡಲೂ ನೀರಿಲ್ಲದೆ ಸಂಕಷ್ಟ ಅನುಭವಿಸುವಂತಾಗಿದೆ. ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರಿನ 340 ಮನೆಗಳಿಗೆ 5 ದಿನದಿಂದ ನೀರು ಪೂರೈಕೆ ಆಗುತ್ತಿಲ್ಲ. ಹೀಗಾಗಿ ಯಂಗ್ ಇಂಡಿಯಾ ಸದಸ್ಯರು ಸಂತ್ರಸ್ತರ ನೆರವಿಗೆ ನಿಂತಿದ್ದಾರೆ. ಯಂಗ್ ಇಂಡಿಯಾ ಸದಸ್ಯರು ಟ್ಯಾಂಕರ್​ನಲ್ಲಿ ನೀರು ಪೂರೈಸುತ್ತಿದ್ದಾರೆ.

ಪ್ರವಾಹ ಸಂತ್ರಸ್ತರಿಗೆ ಸರ್ಕಾರ ಸುಮಾರು 340 ಮನೆ ನಿರ್ಮಿಸಿಕೊಟ್ಟಿತ್ತು. ಆದರೆ 5 ದಿನಗಳಿಂದ ಈ 340 ಮನೆಗಳಿಗೆ ನೀರು ಬರುತ್ತಿಲ್ಲ. ಬೋರ್ ವೆಲ್ ಮೋಟಾರ್ ಕೆಟ್ಟು ನಿಂತಿರುವ ಕಾರಣ ಸ್ನಾನ, ಅಡುಗೆಗೂ ನೀರಿಲ್ಲದೆ ಸಂತಸ್ತರು ಪರದಾಟ ಪಡುತ್ತಿದ್ದಾರೆ. ಇದರಿಂದ ಯಂಗ್ ಇಂಡಿಯಾ ಸದಸ್ಯರು ನೀರನ್ನು ಪೂರೈಸುತ್ತಿದ್ದು, ಸಂತ್ರಸ್ತರು ನೀರಿಗಾಗಿ ಸಾಮಾಜಿಕ ಅಂತರ ಮರೆತಿದ್ದಾರೆ. 5 ದಿನಗಳಿಂದ ನೀರು ಪೂರೈಕೆ ಆಗುತ್ತಿಲ್ಲ ಎಂದು ಸಂತ್ರಸ್ತರು ಮಾದಾಪುರ ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೈಹಿಕ ಅಂತರ ಕಾಪಾಡದ ಜನ ನೆಲಮಂಗಲ: ದಾಸರಹಳ್ಳಿಯ ಮಲ್ಲಸಂದ್ರದಲ್ಲಿ ನೀರಿನ ಘಟಕಗಳ ಮುಂದೆ ದೈಹಿಕ ಅಂತರವಿಲ್ಲದೆ ಜನ ಸೇರಿದ್ದಾರೆ. ಕ್ಯಾಮರ ಕಂಡು ಸರದಿ ಸಾಲಿನಲ್ಲಿ ನಿಲ್ಲಲ್ಲು ಜನರು ಯತ್ನಸಿದ್ದು, ಕೊರೊನ ಲಾಕ್​ಡೌನ್ ಮಧ್ಯೆಯೂ ಅವಶ್ಯ ನೀರನ್ನು ತುಂಬಿಸಿಕೊಳ್ಳಲು ಬಂದಿದ್ದರು. ದೈಹಿಕ ಅಂತರ ಇಲ್ಲದೆ ಇರುವುದರಿಂದ ಕೊರೊನಾ ಹರಡುವ ಭೀತಿ ಎದುರಾಗಿದೆ.

ಇದನ್ನೂ ಓದಿ

ಇನ್ನೂ 3 ದಿನ ರಾಜ್ಯದಲ್ಲಿ ಕೊರೊನಾ ಲಸಿಕೆ ಸಿಗೋದು ಅನುಮಾನ; ಕೇಂದ್ರ ಸರ್ಕಾರ ಹೇಳಿದಷ್ಟೇ ಪೂರೈಕೆ ಸಾಧ್ಯ ಎನ್ನುತ್ತಿವೆ ಸಂಸ್ಥೆಗಳು

ಡಿಸಿಎಂ ಗೋವಿಂದ ಕಾರಜೋಳ ಕ್ಷೇತ್ರದಲ್ಲಿ ಬೆಡ್ ಸಿಗದೇ ಕೋವಿಡ್ ಸೋಂಕಿತ ಬಾರ್ ಮ್ಯಾನೇಜರ್ ನರಳಾಡಿ ಸಾವು…

(Kodagu Flood victims are struggling for water and are outraged against gram panchayat)

Published On - 10:29 am, Wed, 12 May 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ