AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಕೋವಿ ಹಬ್ಬದ ಸಂಭ್ರಮ: ಬಂದೂಕಿಗೆ ಪೂಜೆ ಸಲ್ಲಿಸಿ, ನೃತ್ಯ ಪ್ರದರ್ಶಿಸಿ ಫುಲ್ ಮಸ್ತಿ..

ನಿಸರ್ಗದೊಂದಿಗೆ ಬೆರೆತ ಕೊಡಗಿನ ಜನರ ಆಚಾರ ವಿಚಾರಗಳು ಎಲ್ಲರನ್ನ ಸೆಳೆಯುವಂತಾದ್ದು. ಕೋವಿಯನ್ನ ಶ್ರದ್ಧಾ ಭಕ್ತಿಯಿಂದ ಪೂಜೆ ಮಾಡೋ ಇಲ್ಲಿನ ಜನರು ಕೋವಿಗೂ ಹಬ್ಬ ಮಾಡ್ತಾರೆ. ಕೊಡಗಿನ ಜನರ ಪರಂಪರೆಯೊಂದಿಗೆ ಬೆರೆತಿರುವ ಇಲ್ಲಿನ ಕೋವಿ ಹಬ್ಬದ ಝಲಕ್ ಇಲ್ಲಿದೆ ಓದಿ.

ಕೊಡಗಿನಲ್ಲಿ ಕೋವಿ ಹಬ್ಬದ ಸಂಭ್ರಮ: ಬಂದೂಕಿಗೆ ಪೂಜೆ ಸಲ್ಲಿಸಿ, ನೃತ್ಯ ಪ್ರದರ್ಶಿಸಿ ಫುಲ್ ಮಸ್ತಿ..
ಕೋವಿ ಹಬ್ಬ ಸಂಭ್ರಮ
ಆಯೇಷಾ ಬಾನು
ಆಯೇಷಾ ಬಾನು|

Updated on: Dec 19, 2020 | 8:01 AM

Share

ಮಡಿಕೇರಿ: ಹಸಿರಿನ ನಡುವೆ ಕೊಡವರ ಶ್ರೀಮಂತರ ಸಂಸ್ಕೃತಿಯ ಅನಾವರಣ. ವೀರರ ನಾಡು ಕೊಡಗಿನಲ್ಲಿ ಕೋವಿಹಬ್ಬದ ಸಂಭ್ರಮ ಮನೆ ಮಾಡಿದೆ. ಕೊಡವರಿಗೂ ಕೋವಿಗೂ ಅವಿನಾಭಾವ ಸಂಬಂಧವಿದೆ. ಇಲ್ಲಿ ಇದು ಕೇವಲ ಒಂದು ಆಯುಧ ಮಾತ್ರವಲ್ಲ, ಪೂಜಿಸೋ ದೇವರು. ಇದೇ ಕಾರಣಕ್ಕೆ ದೇಶದ ಯಾವುದೇ ಭಾಗದ ಜನರಿಗೆ ಇಲ್ಲದ ವಿಶೇಷ ಸೌಲಭ್ಯ ಕೊಡಗಿನ ಜನರಿಗಿದೆ.

ಇಂಡಿಯನ್ ಆರ್ಮ್ಸ್‌ ಌಕ್ಟ್ ಸೆಕ್ಷನ್ ಮೂರರ ಪ್ರಕಾರ ಇಲ್ಲಿನ ಜನರಿಗೆ ಕೋವಿ ಬಳಸಲು ವಿನಾಯಿತಿ ನೀಡಲಾಗಿದೆ. ಹೀಗಾಗಿಯೇ ಪ್ರತಿಮನೆಯಲ್ಲೂ ಕೋವಿ ಇಟ್ಟುಕೊಂಡಿರುತ್ತಾರೆ. ಮುಂದಿನ ಪೀಳಿಗೆಗೂ ಈ ಸಂಸ್ಕೃತಿ ಉಳಿಸಿಕೊಂಡು ಹೋಗೋ ನಿಟ್ಟಿನಲ್ಲಿ ನಿನ್ನೆ ಕೋವಿ ಹಬ್ಬ ಆಯೋಜಿಸಲಾಗಿತ್ತು. ಕೋವಿ ಹಬ್ಬದಲ್ಲಿ ಪುರುಷರು ಮಹಿಳೆಯರು ಸೇರಿದಂತೆ ನೂರಾರು ಕೊಡವರು ಭಾಗಿಯಾಗಿದ್ದರು.

ತೆಂಗಿನಕಾಯಿಗೆ ಗುಂಡು ಹಾರಿ ಹಬ್ಬ ಆಚರಣೆ: ಇನ್ನು ಕಳೆದ 10 ವರ್ಷದಿಂದ ಕೊಡವಾ ನ್ಯಾಷನಲ್ ಕೌನ್ಸಿಲ್ ಈ ವಿಶಿಷ್ಟ ಕೋವಿ ಹಬ್ಬವನ್ನ ಶುರುಮಾಡಿದೆ ಮುಂದಿನ ತಲೆಮಾರಿನವರೆಗೂ ಇದು ಉಳಿಯಲಿ ಅಂತಾ ಕೊಡವರು ಇದಕ್ಕೆ ಹಬ್ಬದ ರೂಪ ಕೊಟ್ಟಿದ್ದಾರೆ. ಈ ವೇಳೆ ಕೋವಿಗಳಿಗೆ ವಿಶೇಷ ಪೂಜೆ ಸಲ್ಲಿಸಿ, ತೆಂಗಿನಕಾಯಿಗೆ ಗುಂಡು ಹಾರಿಸೋ ಮೂಲಕ ಹಬ್ಬ ಆಚರಿಸುತ್ತಾರೆ. ಪುರುಷರು, ಮಹಿಳೆಯರು ಎನ್ನದೇ ಎಲ್ಲರೂ ಬೆರೆತು ಎಂಜಾಯ್‌ ಮಾಡ್ತಾರೆ. ಯುವತಿಯರೂ ಸ್ಟೆಪ್‌ ಹಾಕಿ ಸಂಭ್ರಮಿಸುತ್ತಾರೆ.

ಡಿಸೆಂಬರ್ 18 ವಿಶ್ವ ಅಲ್ಪ ಸಂಖ್ಯಾತ ಹಕ್ಕುಗಳ ದಿನಾಚರಣೆ. ಹೀಗಾಗಿ ಕಳೆದ ಹತ್ತು ವರ್ಷಗಳಿಂದ ಈ ದಿನದಂದು ಸಿ.ಎನ್.ಸಿ ಕೋವಿ ಉತ್ಸವ ಆಚರಿಸಲಾಗುತ್ತೆ. ಹಾಗೇ ಕೋವಿ ಬಳಸೋದು ಪ್ರಾಣ ರಕ್ಷಣೆಗಾಗಿ ಅಲ್ಲ ಬದಲಾಗಿ ಕೋವಿಗೆ ಕೊಡವರಲ್ಲಿ ಪೂಜ್ಯಭಾವನೆ ಇದೆ ಅನ್ನೋದನ್ನ ಸಾರೋದು ಈ ಹಬ್ಬದ ಸ್ಪೇಷಲ್.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು