AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಎಸ್​ಎಸ್​​ಎಲ್​ಸಿಯಲ್ಲಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ

ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೂರ್ಲಬಿ ಗ್ರಾಮದಲ್ಲಿ ಗುರುವಾರ (ಮೇ 09) ರಾಜ್ಯವೇ ಬೆಚ್ಚಿಬೀಳುವ ಘಟನೆಯೊಂದು ನಡೆದಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ಮಾಡಲಾಗಿದೆ.

ಕೊಡಗು: ಎಸ್​ಎಸ್​​ಎಲ್​ಸಿಯಲ್ಲಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ
ಮೃತ ಮೀನಾ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 10, 2024 | 12:54 PM

Share

ಕೊಡಗು, ಮೇ 10: ಗುರುವಾರ (ಮೇ 09) ಎಸ್​ಎಸ್​ಎಲ್​​ಸಿ ಫಲಿತಾಂಶ (SSLC Result) ಪ್ರಕಟಗೊಂಡಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಡಗಿನ (Kodagu) ಸೋಮವಾರಪೇಟೆಯ (Somwarpet) ಸೂರ್ಲಬ್ಬಿ ಗ್ರಮಾದಲ್ಲಿ ಘಟನೆ ನಡೆದಿದೆ. ಓಂಕಾರಾಪ್ಪ ಕೊಲೆ ಆರೋಪಿ. ಮೀನಾ ಮೃತ ವಿದ್ಯಾರ್ಥಿನಿ. ಮೀನಾ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಗುರುವಾರ ಎಸ್ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮೀನಾ ಉತ್ತಮ ಅಂಕ ಪಡೆದು ಪಾಸಾಗಿದ್ದಳು. ​ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಪಾಸಾದ ಖುಷಿಯಲ್ಲಿ ಮೀನಾ ಮತ್ತು ಆಕೆಯ ಪೋಷಕರು ಇದ್ದರು. ಆದರೆ ಈ ಖುಷಿ ಹೆಚ್ಚು ಹೊತ್ತು ಇರಲಿಲ್ಲ.

ಸೂರ್ಯ ಮುಳುಗುತ್ತಿದ್ದ ಹಾಗೇ ವಿದ್ಯಾರ್ಥಿನಿಯ ಜೀವ ಕೂಡ ಅಂತ್ಯವಾಗಿದೆ. ಹೌದು ಆರೋಪಿ ಓಂಕಾರಪ್ಪ ಸಾಯಂಕಾಲ ಸಮಯದಲ್ಲಿ ಮೀನಾಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಮಚ್ಚಿನಿಂದ ವಿದ್ಯಾರ್ಥಿನಿಯ ತಲೆ ಕತ್ತರಿಸಿ ರುಂಡ-ಮುಂಡ ಬೇರ್ಪಡಿಸಿ ವಿಕೃತಿ ಮೆರೆದಿದ್ದಾನೆ.

ಇದನ್ನೂ ಓದಿ: ಜಿಂದಾಲ್​ ಕಾರ್ಖಾನೆಯಲ್ಲಿನ ನೀರಿನ ಹೊಂಡಕ್ಕೆ ಬಿದ್ದು 3 ಸಾವು

ಓಂಕಾರಪ್ಪನೊಂದಿಗೆ ಮೀನಾಳ ನಿಶ್ಚಿತಾರ್ಥ ನಿನ್ನೆ ಫಿಕ್ಸ್​ ಮಾಡಲಾಗಿತ್ತು. ಈ ವಿಚಾರ ತಿಳಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನಿಶ್ಚಿತಾರ್ಥ ನಿಲ್ಲಿಸಿದ್ದಾರೆ. ಬಳಿಕ ಎರಡೂ ಕುಟುಂಬದವರು ತಮ್ಮ ತಮ್ಮ ಮನೆಗೆ ತೆರಳಿದ್ದಾರೆ. ಆರೋಪಿ ಕೂಡ ಮನೆಗೆ ವಾಪಸ್​ ಆಗಿದ್ದನಂತೆ. ಇದೇ ಸಿಟ್ಟಿನಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ಕೊಲೆ ನಡೆದ ಸ್ಥಳಕ್ಕೆ ಶ್ವಾನ ದಳ, ವಿಧಿ ವಿಜ್ಞಾನ ತಂಡ‌ ಭೇಟಿ ನೀಡಿದೆ. ಹಾಗೂ ಕೊಡಗು ಹೆಚ್ಚುವರಿ ಎಸ್ಪಿ ಸುಂದರ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ‌ ಅನತಿ ದೂರದಲ್ಲಿ ಮಚ್ಚು ಪತ್ತೆಯಾಗಿದೆ. ಪೊಲೀಸರು ಆರೋಪಿಗಾಗಿ ತಿವ್ರ ಶೋಧ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:21 am, Fri, 10 May 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು