ಕೊಡಗು: ಎಸ್​ಎಸ್​​ಎಲ್​ಸಿಯಲ್ಲಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ

ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೂರ್ಲಬಿ ಗ್ರಾಮದಲ್ಲಿ ಗುರುವಾರ (ಮೇ 09) ರಾಜ್ಯವೇ ಬೆಚ್ಚಿಬೀಳುವ ಘಟನೆಯೊಂದು ನಡೆದಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ಮಾಡಲಾಗಿದೆ.

ಕೊಡಗು: ಎಸ್​ಎಸ್​​ಎಲ್​ಸಿಯಲ್ಲಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ
ಮೃತ ಮೀನಾ
Follow us
|

Updated on:May 10, 2024 | 12:54 PM

ಕೊಡಗು, ಮೇ 10: ಗುರುವಾರ (ಮೇ 09) ಎಸ್​ಎಸ್​ಎಲ್​​ಸಿ ಫಲಿತಾಂಶ (SSLC Result) ಪ್ರಕಟಗೊಂಡಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಡಗಿನ (Kodagu) ಸೋಮವಾರಪೇಟೆಯ (Somwarpet) ಸೂರ್ಲಬ್ಬಿ ಗ್ರಮಾದಲ್ಲಿ ಘಟನೆ ನಡೆದಿದೆ. ಓಂಕಾರಾಪ್ಪ ಕೊಲೆ ಆರೋಪಿ. ಮೀನಾ ಮೃತ ವಿದ್ಯಾರ್ಥಿನಿ. ಮೀನಾ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಗುರುವಾರ ಎಸ್ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮೀನಾ ಉತ್ತಮ ಅಂಕ ಪಡೆದು ಪಾಸಾಗಿದ್ದಳು. ​ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಪಾಸಾದ ಖುಷಿಯಲ್ಲಿ ಮೀನಾ ಮತ್ತು ಆಕೆಯ ಪೋಷಕರು ಇದ್ದರು. ಆದರೆ ಈ ಖುಷಿ ಹೆಚ್ಚು ಹೊತ್ತು ಇರಲಿಲ್ಲ.

ಸೂರ್ಯ ಮುಳುಗುತ್ತಿದ್ದ ಹಾಗೇ ವಿದ್ಯಾರ್ಥಿನಿಯ ಜೀವ ಕೂಡ ಅಂತ್ಯವಾಗಿದೆ. ಹೌದು ಆರೋಪಿ ಓಂಕಾರಪ್ಪ ಸಾಯಂಕಾಲ ಸಮಯದಲ್ಲಿ ಮೀನಾಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಮಚ್ಚಿನಿಂದ ವಿದ್ಯಾರ್ಥಿನಿಯ ತಲೆ ಕತ್ತರಿಸಿ ರುಂಡ-ಮುಂಡ ಬೇರ್ಪಡಿಸಿ ವಿಕೃತಿ ಮೆರೆದಿದ್ದಾನೆ.

ಇದನ್ನೂ ಓದಿ: ಜಿಂದಾಲ್​ ಕಾರ್ಖಾನೆಯಲ್ಲಿನ ನೀರಿನ ಹೊಂಡಕ್ಕೆ ಬಿದ್ದು 3 ಸಾವು

ಓಂಕಾರಪ್ಪನೊಂದಿಗೆ ಮೀನಾಳ ನಿಶ್ಚಿತಾರ್ಥ ನಿನ್ನೆ ಫಿಕ್ಸ್​ ಮಾಡಲಾಗಿತ್ತು. ಈ ವಿಚಾರ ತಿಳಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ನಿಶ್ಚಿತಾರ್ಥ ನಿಲ್ಲಿಸಿದ್ದಾರೆ. ಬಳಿಕ ಎರಡೂ ಕುಟುಂಬದವರು ತಮ್ಮ ತಮ್ಮ ಮನೆಗೆ ತೆರಳಿದ್ದಾರೆ. ಆರೋಪಿ ಕೂಡ ಮನೆಗೆ ವಾಪಸ್​ ಆಗಿದ್ದನಂತೆ. ಇದೇ ಸಿಟ್ಟಿನಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ಕೊಲೆ ನಡೆದ ಸ್ಥಳಕ್ಕೆ ಶ್ವಾನ ದಳ, ವಿಧಿ ವಿಜ್ಞಾನ ತಂಡ‌ ಭೇಟಿ ನೀಡಿದೆ. ಹಾಗೂ ಕೊಡಗು ಹೆಚ್ಚುವರಿ ಎಸ್ಪಿ ಸುಂದರ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಿಂದ‌ ಅನತಿ ದೂರದಲ್ಲಿ ಮಚ್ಚು ಪತ್ತೆಯಾಗಿದೆ. ಪೊಲೀಸರು ಆರೋಪಿಗಾಗಿ ತಿವ್ರ ಶೋಧ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:21 am, Fri, 10 May 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ