Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಡಳಿತ-ಇನ್ಪೋಸಿಸ್​ ಮಧ್ಯೆ ಇಲ್ಲ ಹೊಂದಾಣಿಕೆ: ಕೊಡಗು ಜಿಲ್ಲೆಗೆ ಮಳೆ ಬರುವ ಮುನ್ನ ಹಿಂದಿನ ನಿರಾಶ್ರಿತರಿಗೆ 250 ಮನೆ ವಿತರಿಸುತ್ತದಾ?

ಮೇಲ್ನೋಟಕ್ಕೆ ಜಿಲ್ಲಾಡಳಿತ, ಜನಪ್ರತಿನಿಧಿಗಳು ಮತ್ತು ಇನ್ಪೋಸಿಸ್​ ಮಧ್ಯೆ ಹೊಂದಾಣಿಕೆ ಇದ್ದಂತಿಲ್ಲ ಅಂತ ಸಂತ್ರಸ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಳೆಗಾಲ ಆರಂಭ ವಾಗುವುದರ ಒಳಗಾಗಿಯಾದ್ರೂ ಮನೆ ಕೊಡಿ ಅಂತ ಕೇಳುತ್ತಿದ್ದಾರೆ.

ಜಿಲ್ಲಾಡಳಿತ-ಇನ್ಪೋಸಿಸ್​ ಮಧ್ಯೆ ಇಲ್ಲ ಹೊಂದಾಣಿಕೆ: ಕೊಡಗು ಜಿಲ್ಲೆಗೆ ಮಳೆ ಬರುವ ಮುನ್ನ ಹಿಂದಿನ ನಿರಾಶ್ರಿತರಿಗೆ 250 ಮನೆ ವಿತರಿಸುತ್ತದಾ?
ಕೊಡಗು ಜಿಲ್ಲೆಗೆ ಮಳೆ ಬರುವ ಮುನ್ನ ಹಿಂದಿನ ನಿರಾಶ್ರಿತರಿಗೆ 250 ಮನೆ ವಿತರಿಸುತ್ತದಾ?
Follow us
ಸಾಧು ಶ್ರೀನಾಥ್​
|

Updated on: May 22, 2023 | 12:20 PM

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಭೂ ಕುಸಿತ ಮತ್ತು ಪ್ರವಾಹ ಸಂಭವಿಸಿ ಸಾವಿರಾರು ಮಂದಿ ನಿರಾಶ್ರಿತರಾಗಿರುವುದು ಗೊತ್ತೇ ಇದೆ. ಈ ನಿರಾಶ್ರಿತರಿಗಾಗಿ ನೂರಾರು ಕೋಟಿ ರೂ ಅನುದಾನ ಹರಿದು ಬಂದಿದೆ. ಅದ್ರಲ್ಲೂ ಇನ್ಫೋಸಿಸ್ ಫೌಂಡೇಷನ್ 250 ಮನೆಗಳನ್ನ ನಿರ್ಮಾಣ ಮಾಡಿಕೊಟ್ಟಿದೆ. ಆದ್ರೆ ನಿರ್ಮಾಣ ಕಾರ್ಯ ಆರಂಭವಾಗಿ ಮೂರು ವರ್ಷಗಳೇ ಕಳೆದಿದ್ದರೂ ಅದು ಇನ್ನೂ ಸಂತ್ರಸ್ತರಿಗೆ ವಿತರಣೆಯಾಗಿಲ್ಲ.

2018 ಮತ್ತು 19ರಲ್ಲಿ ಕೊಡಗು ಜಿಲ್ಲೆಯಲ್ಲಿ ಭೀಕರ ಪ್ರವಾಹ ಮತ್ತು ಭೂ ಕುಸಿತ ಸಂಭವಿಸಿತ್ತು. ಸಾವಿರಾರು ಮಂದಿ ಮನೆ ಕಳೆದುಕೊಂಡಿದ್ದರು. ಇವರಲ್ಲಿ ಸುಮಾರು 750 ಮಂದಿಗೆ ಸರ್ಕಾರ ಈಗಾಗಲೇ ಕೊಡಗಿನ ವಿವಿಧೆಡೆ ಮನೆಗಳನ್ನು ನಿರ್ಮಾಣ ಮಾಡಿಕೊಟ್ಟಿದೆ. ಇದೇ ವೇಳೆ ಭೂ ಕುಸಿತ ಮತ್ತು ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಸರ್ಕಾರ ಅಲ್ಲದೆ ಇನ್ಫೋಸಿಸ್ ಪ್ರತಿಷ್ಠಾನ ವತಿಯಿಂದ ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ 250 ಮನೆಗಳನ್ನು ನಿರ್ಮಿಸಲಾಗಿದೆ. ಮನೆ ಕಾಮಗಾರಿ ಬಹುತೇಕ ಸಂಪೂರ್ಣವಾಗಿದೆ. ಒಂದು ಮನೆಗೆ ತಲಾ 11 ಲಕ್ಷ ರೂ ವೆಚ್ಚ ಮಾಡಲಾಗಿದೆ. ಎಲ್ಲವೂ ಯೋಜನೆ ಪ್ರಕಾರ ನಡೆದಿದ್ದಲ್ಲಿ ಈಗಾಗಲೇ ಸಂತ್ರಸ್ತರು ನೆಮ್ಮದಿಯಿಂದ ಹೊಸ ಮನೆ ಪ್ರವೇಶ ಮಾಡಬೇಕಾಗಿತ್ತು. ಆದ್ರೆ ಮನೆಗಳನ್ನು ಐದು ವರ್ಷವಾದ್ರೂ ಇನ್ನೂ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗಿಲ್ಲ.

ಇತ್ತ ಇನ್ನು ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದೆ. ಜಿಲ್ಲೆಯ ಬಹಳಷ್ಟು ಪ್ರದೇಶವನ್ನ ಅಪಾಯಕಾರಿ ಅಂತ ಗುರುತಿಸಲಾಗಿದ್ದು, ಮಳೆಗಾಲದಲ್ಲಿ ಆ ಪ್ರದೇಶಗಳನ್ನ ತೊರೆಯಬೇಕಾಗಿದೆ. ಅದೂ ಅಲ್ಲದೆ ಇನ್ನೂ 400 ಕ್ಕೂ ಅಧಿಕ ಸಂತ್ರಸ್ತರಿಗೆ ಮನೆಗಳನ್ನು ವಿತರಿಸಬೇಕಾಗಿದೆ. ಕನಿಷ್ಟ ಇನ್ಫೋಸಿಸ್​ ನಿರ್ಮಾಣದ ಮನೆಗಳನ್ನ ಮಳೆಗಾಲ ಆರಂಬಕ್ಕೆ ಮೊದಲೇ ವಿತರಿಸಿದ್ರೆ ಎಲ್ಲರೂ ಸುರಕ್ಷಿತವಾಗಿರುತ್ತೇವೆ ಎನ್ನುವುದು ಸಂತ್ರಸ್ತರ ಬೇಡಿಕೆ. ಅತ್ತ ಮಡಿಕೇರಿ ತಾಲ್ಲೂಕಿನ ಕೆ ನಿಡುಗಣೆ ಗ್ರಾಮದಲ್ಲೂ ಸೂಮಾರು 70 ಮನೆಗಳನ್ನ ಇನ್ನೂ ಹಸ್ತಾಂತರ ಮಾಡಿಲ್ಲ.

ಮೇಲ್ನೋಟಕ್ಕೆ ಜಿಲ್ಲಾಡಳಿತ, ಜನಪ್ರತಿನಿಧಿಗಳು ಮತ್ತು ಇನ್ಪೋಸಿಸ್​ ಮಧ್ಯೆ ಹೊಂದಾಣಿಕೆ ಇದ್ದಂತಿಲ್ಲ ಅಂತ ಸಂತ್ರಸ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಳೆಗಾಲ ಆರಂಭ ವಾಗುವುದರ ಒಳಗಾಗಿಯಾದ್ರೂ ಮನೆ ಕೊಡಿ ಅಂತ ಕೇಳುತ್ತಿದ್ದಾರೆ. ಇನ್ನಾದ್ರೂ ಜಿಲ್ಲಾಡಳಿತ ಇನ್ಪೋಸಿಸ್​ನಿಂದ ಮನೆ ಪಡೆದು ಸಂತ್ರಸ್ತರಿಗೆ ಹಸ್ತಾಂತರಿಸುತ್ತದಾ ಕಾದು ನೋಡಬೇಕಿದೆ.

ವರದಿ: ಗೋಪಾಲ್ ಸೋಮಯ್ಯ, ಟಿವಿ9, ಕೊಡಗು

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!