AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ನೆಟ್ವರ್ಕ್ ಸಮಸ್ಯೆಯ ಪರಿಹಾರಕ್ಕಾಗಿ 20 ಅಡಿ ಎತ್ತರದ ಅಟ್ಟಣಿಗೆ ನಿರ್ಮಿಸಿದ ಶಿಕ್ಷಕ

ಸೋಮವಾರಪೇಟೆ ತಾಲ್ಲೂಕಿನ ಮಳ್ಳೂರು ಗ್ರಾಮದ ಶಿಕ್ಷಕ ಸಿ.ಎಸ್ ಸತೀಶ್ ನೆಟ್ವರ್ಕ್​ಗಾಗಿಯೇ 20 ಅಡಿ ಎತ್ತರದ ಅಟ್ಟಣಿಗೆ ನಿರ್ಮಿಸಿಕೊಂಡಿದ್ದಾರೆ. ಬಿದಿರು, ಮತ್ತು ಇನ್ನಿತರ ಜಾತಿಯ ಮರಗಳನ್ನು ಬಳಸಿ ಆಕರ್ಷಕ ಅಟ್ಟಣಿಗೆ ನಿರ್ಮಾಣ ಮಾಡಿದ್ದು, ಅಟ್ಟಣಿಗೆಯಲ್ಲಿ ಆನ್​ಲೈನ್ ಕ್ಲಾಸ್ ನಡೆಸಲು ಬೇಕಾದ, ಸ್ಟ್ಯಾಂಡ್, ಕಪ್ಪು ಬೋರ್ಡ್​ಗಳನ್ನು ಅಳವಡಿಸಿಕೊಂಡಿದ್ದಾರೆ.

ಕೊಡಗಿನಲ್ಲಿ ನೆಟ್ವರ್ಕ್ ಸಮಸ್ಯೆಯ ಪರಿಹಾರಕ್ಕಾಗಿ 20 ಅಡಿ ಎತ್ತರದ ಅಟ್ಟಣಿಗೆ ನಿರ್ಮಿಸಿದ ಶಿಕ್ಷಕ
20 ಅಡಿ ಎತ್ತರದ ಅಟ್ಟಣಿಗೆ ನಿರ್ಮಿಸಿದ ಶಿಕ್ಷಕ
TV9 Web
| Edited By: |

Updated on: Jul 04, 2021 | 3:52 PM

Share

ಕೊಡಗು: ಬೆಟ್ಟ ಗುಡ್ಡಗಳಿಂದಲೇ ಕೂಡಿರುವ ಕೊಡಗು ಜಿಲ್ಲೆಯಲ್ಲಿ ಮೊಬೈಲ್ ನೆಟ್ವರ್ಕ್ ಇನ್ನು ಕೂಡ ಕನಸಿನ‌ಮಾತೇ ಆಗಿದೆ. ಕೇವಲ ಪಟ್ಟಣ ಪ್ರದೇಶಗಳಲ್ಲಿ ಮಾತ್ರ ನೆಟ್ವರ್ಕ್ ಸಿಗುತ್ತದೆ ಬಿಟ್ಟರೆ, ಗ್ರಾಮೀಣ ಭಾಗದಲ್ಲಿ ನೆಟ್ವರ್ಕ್​ ಸಿಗುವುದೇ ಇಲ್ಲ. ಹಾಗಾಗಿ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ನೆಟ್ವರ್ಕ್ ಇಲ್ಲದೆ ಪರದಾಡುವಂತಾಗಿದೆ. ಅದರಲ್ಲೂ ಕೊರೊನಾ ಪ್ರಾರಂಭವಾದ ದಿನದಿಂದ ಆನ್​ಲೈನ್​ ತರಗತಿ ಪ್ರಾರಂಭವಾಗಿದ್ದು, ಮಕ್ಕಳು ಪಾಠ ಕೇಳುವುದಕ್ಕಾಗಿ ಮರ ಹತ್ತಿರುವುದು ಮತ್ತು ಪಾಠದಿಂದ ವಂಚಿತರಾಗಿರುವ ಬಗ್ಗೆ ನಾವು ಓದಿದ್ದೇವೆ. ಎಷ್ಟೋ ಗ್ರಾಮಗಳಲ್ಲಿ ಆನ್​ಲೈನ್ ಕ್ಲಾಸ್​ಗಳೇ ನಡೆಯುತ್ತಿಲ್ಲ. ಶಿಕ್ಷಕರು ಕೂಡ ಕೈಚೆಲ್ಲಿ ಕುಳಿತಿದ್ದಾರೆ. ಆದರೆ ಕೊಡಗು ಜಿಲ್ಲೆಯಲ್ಲಿನ ಶಿಕ್ಷಕರೊಬ್ಬರು ನೆಟ್ವರ್ಕ್​ಗಾಗಿ ಹೊಸದಾರಿ ಕಂಡುಕೊಂಡಿದ್ದು, ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ.

ಸೋಮವಾರಪೇಟೆ ತಾಲ್ಲೂಕಿನ ಮಳ್ಳೂರು ಗ್ರಾಮದ ಶಿಕ್ಷಕ ಸಿ.ಎಸ್ ಸತೀಶ್ ನೆಟ್ವರ್ಕ್​ಗಾಗಿಯೇ 20 ಅಡಿ ಎತ್ತರದ ಅಟ್ಟಣಿಗೆ ನಿರ್ಮಿಸಿಕೊಂಡಿದ್ದಾರೆ. ಬಿದಿರು, ಮತ್ತು ಇನ್ನಿತರ ಜಾತಿಯ ಮರಗಳನ್ನು ಬಳಸಿ ಆಕರ್ಷಕ ಅಟ್ಟಣಿಗೆ ನಿರ್ಮಾಣ ಮಾಡಿದ್ದು, ಅಟ್ಟಣಿಗೆಯಲ್ಲಿ ಆನ್​ಲೈನ್ ಕ್ಲಾಸ್ ನಡೆಸಲು ಬೇಕಾದ, ಸ್ಟ್ಯಾಂಡ್, ಕಪ್ಪು ಬೋರ್ಡ್​ಗಳನ್ನು ಅಳವಡಿಸಿಕೊಂಡಿದ್ದಾರೆ. ಮಕ್ಕಳಿಗೆ ಪಾಠದ ಜೊತೆ ಯೋಗಾಸನ, ಕಥೆ, ಕವನ, ಸಾಂಸ್ಕೃತಿಕ ಚಟುವಟಿಕೆಗಳನ್ನೂ ಹೇಳಿಕೊಡುತ್ತಿದ್ದಾರೆ.

37 ವರ್ಷದ ಸತೀಶ್ ಮುಲ್ಲೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿದ್ದು, 20 ಅಡಿ ಎತ್ತರದ ಅಟ್ಟಣಿಗೆ ನಿರ್ಮಿಸಲು 2 ತಿಂಗಳು ತೆಗೆದುಕೊಂಡಿದ್ದಾರೆ. ಈ ಅಟ್ಟಣಿಗೆ ತಯಾರಿಸಲು 10000ರೂಪಾಯಿ ಖರ್ಚಾಗಿದೆ. ಈ ಅಟ್ಟಣಿಗೆಯಲ್ಲಿ ವಿದ್ಯುತ್​ ವ್ಯವಸ್ಥೆ ಕೂಡ ಇದೆ. ಅಟ್ಟಣಿಗೆಗೆ ಅಗತ್ಯವಿರುವ ಬಿದಿರು, ಹುಲ್ಲು, ಗೋಣಿ ಚೀಲಗಳನ್ನು ಸ್ನೇಹಿತರು ನೀಡಿ ಸಹಾಯ ನೀಡಿದ್ದಾರೆ ಎಂದು ಶಿಕ್ಷಕ ಸತೀಶ್ ತಿಳಿಸಿದ್ದಾರೆ.

ನಮ್ಮ ಶಿಕ್ಷಕರ ಈ ಅದ್ಭುತ ಕಾರ್ಯದಿಂದ ನಾವು ಒಂದೇ ಒಂದು ಕ್ಲಾಸ್​ ಅನ್ನು ಕೂಡ ತಪ್ಪಿಸಿಕೊಂಡಿಲ್ಲ. ನಿಜಕ್ಕೂ ಇದು ನಮ್ಮ ಕಲಿಕೆಗೆ ಸಹಾಯವಾಗುತ್ತಿದೆ ಎಂದು ನಾಲ್ಕನೆ ತರಗತಿ ವಿದ್ಯಾರ್ಥಿ ಪುನ್ಯಾ ಹೇಳಿದ್ದಾರೆ.

ಬಹಳಷ್ಟು ಶಿಕ್ಷಕರು ನೆಟ್ವರ್ಕ್ ಸಮಸ್ಯೆ ಇದೆ ಎನ್ನುವ ಕಾರಣಕ್ಕೆ ಆನ್​ಲೈನ್ ತರಗತಿಗಳನ್ನೇ ಮಾಡುವುದಿಲ್ಲ. ಆದರೆ ಸತೀಶ್ ಅವರು ಈ ಹೊಸ ಪ್ರಯತ್ನದ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಸತೀಶ್ ಅವರ ಅಟ್ಟಣಿಗೆ ಕ್ಲಾಸ್ ಇದೀಗ ಜಿಲ್ಲೆಯಲ್ಲಿ‌ ಮನೆ ಮಾತಾಗಿದೆ.

ಇದನ್ನೂ ಓದಿ: ಆನ್​ಲೈನ್​​ ಕ್ಲಾಸ್​ ಸಂಕಟಗಳು: ಮೊಬೈಲ್ ಒಡೆದಿದೆ, ಅಪ್ಪನ ಬಳಿ ದುಡ್ಡಿಲ್ಲ, ಅಣ್ಣ ಫೋನ್ ಕೊಡಲ್ಲ- ಟೀಚರ್​ ತೆರೆದಿಟ್ಟ ಕಟು ವಾಸ್ತವ

ಶಿಕ್ಷಣ ಇಲಾಖೆ ಆದೇಶವಿಲ್ಲದೆ ಪ್ರಥಮ ಪಿಯು ದಾಖಲಾತಿ ಮಾಡುವಂತಿಲ್ಲ; ಆನ್​ಲೈನ್​ ತರಗತಿ ನಡೆಸುವಂತಿಲ್ಲ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ