AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಚೆಂಬು ಗ್ರಾಮಕ್ಕೆ ಸಚಿವ ಆರ್​. ಅಶೋಕ್​ ಭೇಟಿ; ಭೂಕುಸಿತದಿಂದ‌ ಹಾನಿಗೊಳಗಾದ ಕುಟುಂಬಗಳಿಗೆ 3 ಲಕ್ಷ ಪರಿಹಾರ ನೀಡುವ ಭರವಸೆ

ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಭೂಕುಸಿತ ಸಂಭವಿಸಿದ್ದು,  ಭೂಕುಸಿತದಿಂದ‌ ಹಾನಿಗೊಳಗಾದ ಮನೆಗಳಿಗೆ ಸಚಿವ ಆರ್​.ಅಶೋಕ್ ಭೇಟಿ ನೀಡಿದ್ದಾರೆ.

ಕೊಡಗು: ಚೆಂಬು ಗ್ರಾಮಕ್ಕೆ ಸಚಿವ ಆರ್​. ಅಶೋಕ್​ ಭೇಟಿ; ಭೂಕುಸಿತದಿಂದ‌ ಹಾನಿಗೊಳಗಾದ ಕುಟುಂಬಗಳಿಗೆ 3 ಲಕ್ಷ ಪರಿಹಾರ ನೀಡುವ ಭರವಸೆ
ಕಂದಾಯ ಸಚಿವ ಆರ್.ಅಶೋಕ
TV9 Web
| Edited By: |

Updated on:Jul 07, 2022 | 5:30 PM

Share

ಕೊಡಗು: ಮಡಿಕೇರಿ (Madikeri) ತಾಲೂಕಿನ ಚೆಂಬು (Chembu Village) ಗ್ರಾಮದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಭೂಕುಸಿತ (Land Slide) ಸಂಭವಿಸಿದ್ದು,  ಭೂಕುಸಿತದಿಂದ‌ ಹಾನಿಗೊಳಗಾದ ಮನೆಗಳಿಗೆ ಸಚಿವ ಆರ್​. ಅಶೋಕ್ (R Ashok) ಭೇಟಿ ನೀಡಿದ್ದಾರೆ. ಈ ವೇಳೆ ಸಂತ್ರಸ್ತ ಕುಟುಂಬಕ್ಕೆ 3 ಲಕ್ಷ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಸಂತ್ರಸ್ತೆ ಅಕ್ಕಮ್ಮ ಎಂಬುವರಿಗೆ ಆರ್​.ಅಶೋಕ್ ಸ್ಥಳದಲ್ಲೇ 24 ಸಾವಿರ ರೂ. ಪರಿಹಾರ ನೀಡಿದ್ದಾರೆ. ಉಳಿದ‌ 2.76 ಲಕ್ಷ ಮುಂದಿನ ದಿನಗಳಲ್ಲಿ ನೀಡುವ ಭರವಸೆ ನೀಡಿದ್ದಾರೆ.

ಮಂಗಳೂರಿನ ಕಡಲ್ಕೊರೆತ ಪ್ರದೇಶಗಳಿಗೆ ಸಚಿವರ ಭೇಟಿ

ದಕ್ಷಿಣ ಕನ್ನಡ: ಮಂಗಳೂರಿನ ಉಚ್ಚಿಲ ಬಟ್ಟಪಾಡಿ ಕಡಲ ತೀರಕ್ಕೆ ಕಂದಾಯ ಸಚಿವ ಆರ್.ಅಶೋಕ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಬಂದರು ಸಚಿವ ಎಸ್.ಅಂಗಾರ ಭೇಟಿ ನೀಡಿದ್ದಾರೆ.  ಕಡಲ್ಕೊ ರೆತದಿಂದ  ಹಾನಿಗೊಳಗಾದ ಉಚ್ಚಿಲದ ಪ್ರದೇಶಗಳನ್ನು ಸಚಿವರು ವೀಕ್ಷಿಸಿ, ಕಡಲ್ಕೊರೆತ ಸಂತ್ರಸ್ತರ ಜೊತೆ ಮಾತುಕತೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಈ ವೇಳೆ ಸಚಿವ ಸುನೀಲ್ ಕುಮಾರ್ ಅವರಿಗೆ ಸಮುದ್ರಕ್ಕೆ ಕಲ್ಲು ಹಾಕಿ ಕಡಲ್ಕೊರೆತ ನಿಯಂತ್ರಿಸಲು ಮೀನುಗಾರರು ಮನವಿ ಮಾಡಿದ್ದಾರೆ. ಆದರೆ ಕೇವಲ ರೆಸಾರ್ಟ್​​ಗಳನ್ನು ರಕ್ಷಿಸಲು ಕಲ್ಲು ಹಾಕಿತ್ತಿದ್ದಾರೆ ಅಂತ ಆಕ್ರೋಶ ವ್ಯಕ್ತಪಡಿಸಿದರು. ಅತೀ ಹೆಚ್ಚು ಕಡಲ್ಕೊರೆತ ಪೀಡಿತ ಜಾಗಗಳಲ್ಲಿ ತಡೆಗೋಡೆ ಕಾಮಗಾರಿ ನಡೆಸಿಲ್ಲ ಎಂದು ಸಚಿವ ಸುನೀಲ್ ಕುಮಾರ್ ಮತ್ತು ಅಂಗಾರ ಬಳಿ ಮೀನುಗಾರರು ಅಳಲು ತೋಡಿಕೊಂಡರು.

Published On - 4:58 pm, Thu, 7 July 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ