AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಮಗು; ಕೇವಲ 4 ಗಂಟೆಯಲ್ಲಿ ಕೇರಳದಿಂದ ಬೆಂಗಳೂರಿಗೆ ಕರೆತಂದ ಆಂಬ್ಯುಲೆನ್ಸ್ ಚಾಲಕ

9 ತಿಂಗಳ ಇನಾರ ಮರಿಯಂಗೆ ಅಪರೂಪದ‌ ಖಾಯಿಲೆ ಇದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರವಾನಿಸಬೇಕಿತ್ತು. ಕೇರಳದ ಕಣ್ಣೂರಿನಿಂದ ಕೇವಲ 6 ಗಂಟೆಯಲ್ಲಿ ಬೆಂಗಳೂರಿಗೆ ತಲುಪುವ ಅನಿವಾರ್ಯವಿತ್ತು.

ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಮಗು; ಕೇವಲ 4 ಗಂಟೆಯಲ್ಲಿ ಕೇರಳದಿಂದ ಬೆಂಗಳೂರಿಗೆ ಕರೆತಂದ ಆಂಬ್ಯುಲೆನ್ಸ್ ಚಾಲಕ
ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಮಗು; ಕೇವಲ 6 ಗಂಟೆಯಲ್ಲಿ ಕೇರಳದಿಂದ ಬೆಂಗಳೂರಿಗೆ ಕರೆತಂದ ಆಂಬುಲೆನ್ಸ್ ಚಾಲಕ
TV9 Web
| Edited By: |

Updated on:Oct 13, 2021 | 5:36 PM

Share

ಮಡಿಕೇರಿ: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ವಿಶೇಷ ಆಂಬ್ಯುಲೆನ್ಸ್ ಮೂಲಕ ಝೀರೋ ಟ್ರಾಫಿಕ್ನಲ್ಲಿ ರವಾನಿಸಲಾಗಿದೆ. ಕೇರಳದ ಕಣ್ಣೂರಿನಿಂದ ಬೆಂಗಳೂರಿಗೆ ಗೋಣಿಕೊಪ್ಪ, ಮೈಸೂರು ಮೂಲಕ ಮಣಿಪಾಲ್ ಆಸ್ಪತ್ರೆಗೆ 9 ತಿಂಗಳ ಮಗುವನ್ನು ರವಾನಿಸಲಾಗಿದೆ.

9 ತಿಂಗಳ ಇನಾರ ಮರಿಯಂಗೆ ಅಪರೂಪದ‌ ಖಾಯಿಲೆ ಇದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರವಾನಿಸಬೇಕಿತ್ತು. ಕೇರಳದ ಕಣ್ಣೂರಿನಿಂದ ಕೇವಲ 6 ಗಂಟೆಯಲ್ಲಿ ಬೆಂಗಳೂರಿಗೆ ತಲುಪುವ ಅನಿವಾರ್ಯವಿತ್ತು. ಟ್ರಾಫಿಕ್ ಸಮಸ್ಯೆಯ ನಡುವೆ ಮಗುವನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ರೀಚ್ ಮಾಡುವುದು ಅಸಾಧ್ಯದ ಮಾತಾಗಿತ್ತು. ಆದ್ರೆ ಮಗುವಿನ ಜೀವ ಉಳಿಸಲು ಸಾರ್ವಜನಿಕರೇ ಸಾಥ್ ನೀಡಿದ್ದಾರೆ.

ಕೇರಳಿದಿಂದ ಮೈಸೂರು ಮೂಲಕ ಬೆಂಗಳೂರಿಗೆ ಹೊರಟಿದ್ದ ವಿಶೇಷ ಆಂಬ್ಯುಲೆನ್ಸ್ ಹೋಗುವುದಕ್ಕೆ ರಸ್ತೆಯುದ್ದಕ್ಕೂ ಜನರಿಂದಲೇ ಝೀರೋ ಟ್ರಾಫಿಕ್ ವ್ಯವಸ್ಥೆಯಾಗಿದ್ದು ಆಂಬ್ಯುಲೆನ್ಸ್ ತೆರಳಲು ಸಾರ್ವಜನಿಕರ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಇದರಿಂದ 6 ಗಂಟೆಯಲ್ಲಿ ತಲುಪ ಬೇಕಿದ್ದ ಆಂಬ್ಯುಲೆನ್ಸ್  ಕೇವಲ 4 ಗಂಟೆಯಲ್ಲಿ  ಮಣಿಪಾಲ್ ಆಸ್ಪತ್ರೆಗೆ ರೀಚ್ ಆಗಿದೆ. ಈಗ ಇನಾರ ಮರಿಯಂ ಸರಿಯಾದ ಸಮಯಕ್ಕೆ ಆಸ್ಪತ್ರೆ ಸೇರಿದ್ದಾಳೆ. ಹೃದಯ ಗಟ್ಟಿ ಮಾಡಿ ಯಮನನ್ನೇ ಎದುರು ಹಾಕಿಕೊಂಡು ಸರಿಯಾದ ಸಮಯಕ್ಕೆ ಮಗುವನ್ನು ಆಸ್ಪತ್ರೆಗೆ ರವಾನಿಸಿದ ಆಂಬ್ಯುಲೆನ್ಸ್ ಚಾಲಕ ಹನೀಫ್ ಸಹಾಯ್ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು ಸನ್ಮಾನ ಮಾಡಿದ್ದಾರೆ.

ಇದನ್ನೂ ಓದಿ: Bengaluru: ರಾಜಸ್ಥಾನ ಮೂಲದ ಡ್ರಗ್ ಪೆಡ್ಲರ್ ಬಂಧನ; 35 ಲಕ್ಷ ಮೌಲ್ಯದ ಹೆರಾಯಿನ್ ಜಪ್ತಿ

ಅ.16ರಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಮತ್ತೆ ಆರಂಭ: ನ್ಯಾಮತಿಯಲ್ಲಿ ಮುಖ್ಯಮಂತ್ರಿ ಚಾಲನೆ

Published On - 5:05 pm, Wed, 13 October 21

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್