AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಮಳೆ ಆರ್ಭಟಕ್ಕೆ ಜಲ ದಿಗ್ಬಂಧನವಾದ ಕುಟುಂಬ; ಅಸಹಾಯಕರಾಗಿ ನಿಂತಿರೋ ದಂಪತಿ

ಕರ್ನಾಟಕ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಅದರಂತೆ ಕೊಡಗು ಜಿಲ್ಲೆಯಲ್ಲಿಯೂ ವರುಣಾರ್ಭಟಕ್ಕೆ ರಸ್ತೆಗಳು ಮುಳುಗಡೆ ಆಗಿದ್ದು, ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿತದ ಆತಂಕ ಶುರುವಾಗಿದೆ. ಈ ಮಧ್ಯೆ ಕೊಯನಾಡು ಗ್ರಾಮದಲ್ಲಿ ಕುಟುಂಬವೊಂದು ಜಲ ದಿಗ್ಬಂಧನಕ್ಕೆ ಒಳಗಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

ಕೊಡಗು: ಮಳೆ ಆರ್ಭಟಕ್ಕೆ ಜಲ ದಿಗ್ಬಂಧನವಾದ ಕುಟುಂಬ; ಅಸಹಾಯಕರಾಗಿ ನಿಂತಿರೋ ದಂಪತಿ
ಜಲ ದಿಗ್ಬಂಧನವಾದ ಕುಟುಂಬ
Gopal AS
| Edited By: |

Updated on: Jul 17, 2024 | 5:30 PM

Share

ಕೊಡಗು, ಜು.17: ಮಳೆಯ ಆರ್ಭಟಕ್ಕೆ ಅಕ್ಷರಶಃ ಕರುನಾಡು ನಲುಗಿದೆ. ಅದರಂತೆ ಮಡಿಕೇರಿ (Madikeri) ತಾಲ್ಲೂಕಿನ ಸಂಪಾಜೆ ಗ್ರಾಮದ ಬಂಡಡ್ಕ ಗ್ರಾಮದಲ್ಲಿ ನಾಲ್ಕು ಕುಟುಂಬ ವಾಸಿಸುತ್ತವೆ. ಇವರಿಗೆ ಮಳೆಗಾಲ ಬಂತೆಂದರೆ ‘ಪಯಸ್ವಿನಿ ನದಿ’ ದಾಟಲು ಶಾಶ್ವತ ಸೇತುವೆ ಇಲ್ಲ. ನದಿ ನೀರು ಕಡಿಮೆ ಇದ್ದಾಗ ನದಿಯನ್ನ ಕಾಲ್ನಡಿಗೆಯಲ್ಲೇ ದಾಟಿ ಬರುತ್ತಾರೆ. ಆದ್ರೆ, ಇದೀಗ ಪ್ರವಾಹ ಜಾಸ್ತಿ ಇರುವುದರಿಂದ ನದಿ ದಾಟಲಾಗುವುದಿಲ್ಲ. ಸಧ್ಯ ಇಲ್ಲಿ ಪ್ರವಾಹದ ಕಾರಣ ಮೂರು ಕುಟುಂಬಗಳು ಈಗಾಗಲೇ ಊರು ತ್ಯಜಿಸಿವೆ. ಆದ್ರೆ, ವಯಸ್ಸಾದ ತಾಯಿ ಇರುವ ಕಾರಣ ಲಿಂಗಪ್ಪ ದಂಪತಿ ಅಲ್ಲೇ ಉಳಿದುಕೊಂಡಿದ್ದಾರೆ. ಇವರಿಗಾಗಿ ಕೆಲ ದಿನಗಳ ಹಿಂದೆ ಕಾಲು ಸಂಕ ನಿರ್ಮಾಣ ಮಾಡಲು ಗ್ರಾಮಸ್ಥರು ಮುಂದಾಗಿದ್ದರು. ಆದ್ರೆ, ಕಾಲು ಸಂಕ ನದಿಯಲ್ಲಿ ಕೊಚ್ಚಿ ಹೋಗಿದ್ದು, ಸಧ್ಯ ಈ ಕುಟುಂಬಕ್ಕೆ ಜಲದಿಗ್ಬಂಧನ ಎದುರಾಗಿದೆ.

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭೂ ಕುಸಿತದ ಆತಂಕ

ಇತ್ತ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭೂ ಕುಸಿತದ ಆತಂಕ ಎದುರಾಗಿದೆ. ಹೌದು, ಮಡಿಕೇರಿ ತಾಲ್ಲೂಕಿನ ಮದೆನಾಡು ಸಮೀಪ 2018ರಲ್ಲಿ ಬೃಹತ್ ಭೂ ಕುಸಿತವಾಗಿತ್ತು. ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿ ಕೊಚ್ಚಿ ಹೋಗಿತ್ತು. ಇದೀಗ ಅದೇ ಸ್ಥಳದಲ್ಲಿ ಬೃಹತ್ ಬೆಟ್ಟ ನಿಧಾನಕ್ಕೆ ಜರಿಯಲಾರಂಭಿಸಿದೆ. ಗುಡ್ಡದ ಮೇಲಿನಿಂದ ಕಲ್ಲು ಮಣ್ಣು ರಸ್ತೆಗೆ ಉರುಳುತ್ತಿವೆ. ಯಾವುದೇ ಕ್ಷಣದಲ್ಲಿ ಗುಡ್ಡ ಕುಸಿದು ಹೆದ್ದಾರಿ ಸಂಪರ್ಕ ಕಡಿತವಾಗುವ ಆತಂಕವಿದೆ. ಹಾಗಾಗಿ ವಾಹನ ಸವಾರರು ಆತಂಕದಲ್ಲೇ ಹೆದ್ದಾರಿಯಲ್ಲಿ ಸಂಚರಿಸುವಂತಾಗಿದೆ.

ಇದನ್ನೂ ಓದಿ:ದಕ್ಷಿಣ ಕನ್ನಡದಲ್ಲಿ ಮಳೆ ಅವಾಂತರ; ಹಲವೆಡೆ ಜಲ ದಿಗ್ಬಂಧನ, ಗುಡ್ಡ ಕುಸಿತ

ಉಳಿದಂತೆ ಗ್ರಾಮೀಣ ಕೊಡಗು ಮಳೆಯಿಂದ ತತ್ತರಿಸಿಹೋಗಿದೆ. ಹತ್ತಾರು ಕಡೆ ಮರಗಳು ಧರೆಗುರುಳಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ನದಿಪಾತ್ರದ ಜನರಲ್ಲಿ ಪ್ರವಾಹದ ಆತಂಕ ತಲೆದೋರಿದೆ. ಇನ್ನೂ ಐದು ದಿನಗಳ ಕಾಲ ಜಿಲ್ಲೆಯಲ್ಲಿ ಮಳೆಯಾಗುವ ಸಂಭವವಿದೆ. ಹಾಗಾಗಿ ಜನಜೀವನ ಇನ್ನೂ ತತ್ತರವಾಗುವ ಸಂಭವವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?