AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಮಳೆ ಆರ್ಭಟಕ್ಕೆ ಜಲ ದಿಗ್ಬಂಧನವಾದ ಕುಟುಂಬ; ಅಸಹಾಯಕರಾಗಿ ನಿಂತಿರೋ ದಂಪತಿ

ಕರ್ನಾಟಕ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಅದರಂತೆ ಕೊಡಗು ಜಿಲ್ಲೆಯಲ್ಲಿಯೂ ವರುಣಾರ್ಭಟಕ್ಕೆ ರಸ್ತೆಗಳು ಮುಳುಗಡೆ ಆಗಿದ್ದು, ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿತದ ಆತಂಕ ಶುರುವಾಗಿದೆ. ಈ ಮಧ್ಯೆ ಕೊಯನಾಡು ಗ್ರಾಮದಲ್ಲಿ ಕುಟುಂಬವೊಂದು ಜಲ ದಿಗ್ಬಂಧನಕ್ಕೆ ಒಳಗಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

ಕೊಡಗು: ಮಳೆ ಆರ್ಭಟಕ್ಕೆ ಜಲ ದಿಗ್ಬಂಧನವಾದ ಕುಟುಂಬ; ಅಸಹಾಯಕರಾಗಿ ನಿಂತಿರೋ ದಂಪತಿ
ಜಲ ದಿಗ್ಬಂಧನವಾದ ಕುಟುಂಬ
Gopal AS
| Edited By: |

Updated on: Jul 17, 2024 | 5:30 PM

Share

ಕೊಡಗು, ಜು.17: ಮಳೆಯ ಆರ್ಭಟಕ್ಕೆ ಅಕ್ಷರಶಃ ಕರುನಾಡು ನಲುಗಿದೆ. ಅದರಂತೆ ಮಡಿಕೇರಿ (Madikeri) ತಾಲ್ಲೂಕಿನ ಸಂಪಾಜೆ ಗ್ರಾಮದ ಬಂಡಡ್ಕ ಗ್ರಾಮದಲ್ಲಿ ನಾಲ್ಕು ಕುಟುಂಬ ವಾಸಿಸುತ್ತವೆ. ಇವರಿಗೆ ಮಳೆಗಾಲ ಬಂತೆಂದರೆ ‘ಪಯಸ್ವಿನಿ ನದಿ’ ದಾಟಲು ಶಾಶ್ವತ ಸೇತುವೆ ಇಲ್ಲ. ನದಿ ನೀರು ಕಡಿಮೆ ಇದ್ದಾಗ ನದಿಯನ್ನ ಕಾಲ್ನಡಿಗೆಯಲ್ಲೇ ದಾಟಿ ಬರುತ್ತಾರೆ. ಆದ್ರೆ, ಇದೀಗ ಪ್ರವಾಹ ಜಾಸ್ತಿ ಇರುವುದರಿಂದ ನದಿ ದಾಟಲಾಗುವುದಿಲ್ಲ. ಸಧ್ಯ ಇಲ್ಲಿ ಪ್ರವಾಹದ ಕಾರಣ ಮೂರು ಕುಟುಂಬಗಳು ಈಗಾಗಲೇ ಊರು ತ್ಯಜಿಸಿವೆ. ಆದ್ರೆ, ವಯಸ್ಸಾದ ತಾಯಿ ಇರುವ ಕಾರಣ ಲಿಂಗಪ್ಪ ದಂಪತಿ ಅಲ್ಲೇ ಉಳಿದುಕೊಂಡಿದ್ದಾರೆ. ಇವರಿಗಾಗಿ ಕೆಲ ದಿನಗಳ ಹಿಂದೆ ಕಾಲು ಸಂಕ ನಿರ್ಮಾಣ ಮಾಡಲು ಗ್ರಾಮಸ್ಥರು ಮುಂದಾಗಿದ್ದರು. ಆದ್ರೆ, ಕಾಲು ಸಂಕ ನದಿಯಲ್ಲಿ ಕೊಚ್ಚಿ ಹೋಗಿದ್ದು, ಸಧ್ಯ ಈ ಕುಟುಂಬಕ್ಕೆ ಜಲದಿಗ್ಬಂಧನ ಎದುರಾಗಿದೆ.

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭೂ ಕುಸಿತದ ಆತಂಕ

ಇತ್ತ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭೂ ಕುಸಿತದ ಆತಂಕ ಎದುರಾಗಿದೆ. ಹೌದು, ಮಡಿಕೇರಿ ತಾಲ್ಲೂಕಿನ ಮದೆನಾಡು ಸಮೀಪ 2018ರಲ್ಲಿ ಬೃಹತ್ ಭೂ ಕುಸಿತವಾಗಿತ್ತು. ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿ ಕೊಚ್ಚಿ ಹೋಗಿತ್ತು. ಇದೀಗ ಅದೇ ಸ್ಥಳದಲ್ಲಿ ಬೃಹತ್ ಬೆಟ್ಟ ನಿಧಾನಕ್ಕೆ ಜರಿಯಲಾರಂಭಿಸಿದೆ. ಗುಡ್ಡದ ಮೇಲಿನಿಂದ ಕಲ್ಲು ಮಣ್ಣು ರಸ್ತೆಗೆ ಉರುಳುತ್ತಿವೆ. ಯಾವುದೇ ಕ್ಷಣದಲ್ಲಿ ಗುಡ್ಡ ಕುಸಿದು ಹೆದ್ದಾರಿ ಸಂಪರ್ಕ ಕಡಿತವಾಗುವ ಆತಂಕವಿದೆ. ಹಾಗಾಗಿ ವಾಹನ ಸವಾರರು ಆತಂಕದಲ್ಲೇ ಹೆದ್ದಾರಿಯಲ್ಲಿ ಸಂಚರಿಸುವಂತಾಗಿದೆ.

ಇದನ್ನೂ ಓದಿ:ದಕ್ಷಿಣ ಕನ್ನಡದಲ್ಲಿ ಮಳೆ ಅವಾಂತರ; ಹಲವೆಡೆ ಜಲ ದಿಗ್ಬಂಧನ, ಗುಡ್ಡ ಕುಸಿತ

ಉಳಿದಂತೆ ಗ್ರಾಮೀಣ ಕೊಡಗು ಮಳೆಯಿಂದ ತತ್ತರಿಸಿಹೋಗಿದೆ. ಹತ್ತಾರು ಕಡೆ ಮರಗಳು ಧರೆಗುರುಳಿ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ನದಿಪಾತ್ರದ ಜನರಲ್ಲಿ ಪ್ರವಾಹದ ಆತಂಕ ತಲೆದೋರಿದೆ. ಇನ್ನೂ ಐದು ದಿನಗಳ ಕಾಲ ಜಿಲ್ಲೆಯಲ್ಲಿ ಮಳೆಯಾಗುವ ಸಂಭವವಿದೆ. ಹಾಗಾಗಿ ಜನಜೀವನ ಇನ್ನೂ ತತ್ತರವಾಗುವ ಸಂಭವವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ