AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಕಾಳಜಿ ಕೇಂದ್ರದ ಮೇಲೆ ಕುಸಿದು ಬಿದ್ದ ಗುಡ್ಡ! ದೃಶ್ಯ ಮೊಬೈಲ್​ನಲ್ಲಿ ಸೆರೆ

ಕಾಳಜಿ ಕೇಂದ್ರದ ಬಳಿಯೂ ಇದೀಗ ಗುಡ್ಡ ಕುಸಿದಿದ್ದು, ಆತಂಕ ಮನೆ ಮಾಡಿದೆ. ಇನ್ನು ಗುಡ್ಡ ಕುಸಿಯುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

ಕೊಡಗಿನಲ್ಲಿ ಕಾಳಜಿ ಕೇಂದ್ರದ ಮೇಲೆ ಕುಸಿದು ಬಿದ್ದ ಗುಡ್ಡ! ದೃಶ್ಯ ಮೊಬೈಲ್​ನಲ್ಲಿ ಸೆರೆ
ಕಾಳಜಿ ಕೇಂದ್ರದ ಮೇಲೆ ಗುಡ್ಡ ಕುಸಿದಿದೆ
TV9 Web
| Edited By: |

Updated on:Jul 10, 2022 | 1:14 PM

Share

ಕೊಡಗು: ಮಡಿಕೇರಿ (Madikeri) ತಾಲೂಕಿನ ಕೊಯನಾಡು ಗ್ರಾಮದ ಪ್ರಾಥಮಿಕ ಶಾಲೆಯ ಬಳಿ ಕಾಳಜಿ ಕೇಂದ್ರದ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಈ ಹಿನ್ನೆಲೆ ಕೊಯನಾಡು ಶಾಲೆಯಿಂದ ಪ್ರವಾಹ ಸಂತ್ರಸ್ತರನ್ನು ಗ್ರಾಮದ ಗಣಪತಿ ದೇಗುಲ ಬಳಿಯ ಹಾಲ್​ಗೆ ಸ್ಥಳಾಂತರ ಮಾಡಲಾಗಿದೆ. ಪಯಸ್ವಿನಿ ನದಿ ಪ್ರವಾಹದಿಂದ 7 ಮನೆಗಳು ಜಲಾವೃತವಾಗಿದ್ದವು. ಹೀಗಾಗಿ 7 ಕುಟುಂಬಗಳಿಗೆ ಗ್ರಾಮದ ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿತ್ತು. ಕಾಳಜಿ ಕೇಂದ್ರದ ಬಳಿಯೂ ಇದೀಗ ಗುಡ್ಡ ಕುಸಿದಿದ್ದು, ಆತಂಕ ಮನೆ ಮಾಡಿದೆ. ಇನ್ನು ಗುಡ್ಡ ಕುಸಿಯುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.

ಜನಪ್ರತಿನಿಧಿಗಳ ವಿರುದ್ಧ ಜನರ ಆಕ್ರೋಶ: ಘಟನಾ ಸ್ಥಳಕ್ಕೆ ತಹಶೀಲ್ದಾರ್, ಎಸಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳು ಸಂತ್ರಸ್ತರನ್ನ ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜನರು, ಕಿಂಡಿ‌ ಅಣೆಕಟ್ಟಿನಿಂದ‌ ಕೃತಕ‌ ಪ್ರವಾಹ ಸೃಷ್ಟಿಯಾಗಿದೆ. ಈ ಊರಿಗೆ ಅಣೆಕಟ್ಟಿನ ಅಗತ್ಯವೇ ಇರಲಿಲ್ಲ. ರಾಜಕಾರಣಿಗಳು ಸ್ವಾರ್ಥಕ್ಕಾಗಿ ಅಣೆಕಟ್ಟು ನಿರ್ಮಿಸಿದ್ದಾರೆ. ಇದರಿಂದಲೇ ಕೊಯನಾಡು ಗ್ರಾಮ ಜಲಾವೃತವಾಗಿದೆ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: ಅಮರನಾಥ ಗುಹೆ ಬಳಿ ಮೇಘಸ್ಫೋಟ: ರಕ್ಷಣಾ ಕಾರ್ಯಾಚರಣೆಗೆ MEILನ ನೆರವು ಕೇಳಿದ ಸೇನೆ

ಇದನ್ನೂ ಓದಿ
Image
Amarnath Yatra: ಮೇಘಸ್ಫೋಟದ ನಂತರ ಯಾತ್ರೆಯ ಪುನರಾರಂಭಕ್ಕೆ ಕಾಯುತ್ತಿರುವ ಅಮರನಾಥ ಯಾತ್ರಿಕರು
Image
ಅಮರನಾಥ ಗುಹೆ ಬಳಿ ಮೇಘಸ್ಫೋಟ: ರಕ್ಷಣಾ ಕಾರ್ಯಾಚರಣೆಗೆ MEILನ ನೆರವು ಕೇಳಿದ ಸೇನೆ
Image
ಸಿದ್ದರಾಮಯ್ಯ, ಜಮೀರ್ ಹಣೆಗೆ ಕೇಸರಿ ಬೊಟ್ಟು ಹಚ್ಚಿದ ಪುರೋಹಿತರು; ವಿಡಿಯೋ ಇಲ್ಲಿದೆ
Image
ಹಾಡಹಗಲೆ ನಿವೃತ್ತ ಎಎಸ್ಐ ಮನೆಯಲ್ಲಿ ಕಳ್ಳತನ: 30 ಸಾವಿರ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿ

ಹಲವೆಡೆ ಜಲದಿಗ್ಬಂಧನ: ಮಡಿಕೇರಿ ತಾಲೂಕಿನ ಹಲವೆಡೆ ಜಲದಿಗ್ಬಂಧನ ಆಗಿದೆ. ಮುಕ್ಕೋಡ್ಲು ಗ್ರಾಮದ ಭದ್ರಕಾಳಿ ದೇವಸ್ಥಾನ ಜಲಾವೃತವಾಗಿದ್ದು, ಹೊದಕಾನ-ಮುಕ್ಕೋಡ್ಲು ರಸ್ತೆ ಸಂಪರ್ಕ‌ ಕಡಿತವಾಗಿದೆ. ಇನ್ನು ಮುಕ್ಕೋಡ್ಲು ಭದ್ರಕಾಳಿ‌ ದೇವಸ್ಥಾನದ ತೂಗು ಸೇತುವೆಗೆ ಹಾನಿಯಾಗಿದೆ.

ಹರಿಯುತ್ತಿರುವ ಕಾವೇರಿ ನದಿ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಬೊಳಿಬಾಣೆ ಸಮೀಪ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು-ಮೂರ್ನಾಡು ರಸ್ತೆ ಸಂಪರ್ಕ ಕಡಿತವಾಗಿ ವಾಹನ ಸವಾರರು ಪರದಾಡುವಂತಾಗಿದೆ.

4 ಮನೆಗಳು ಜಲಾವೃತ: ಕಿಂಡಿ ಅಣೆಕಟ್ಟಿನಿಂದ 4 ಮನೆಗಳು ಜಲಾವೃತವಾಗಿವೆ. ಅಲ್ಲದೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮುಳುಗಡೆಯಾಗುವ ಭೀತಿ ಶುರುವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹಾಡಹಗಲೇ ಜ್ಯೋತಿಷಿ ಮನೆಗೆ ನುಗ್ಗಿ ದರೋಡೆ! ಮನೆಯಲ್ಲಿದ್ದ ಚಿನ್ನಾಭರಣ, 5 ಲಕ್ಷ ಹಣ ದೋಚಿ ಪರಾರಿ

Published On - 1:05 pm, Sun, 10 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್