AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಕಾಳಜಿ ಕೇಂದ್ರದ ಮೇಲೆ ಕುಸಿದು ಬಿದ್ದ ಗುಡ್ಡ! ದೃಶ್ಯ ಮೊಬೈಲ್​ನಲ್ಲಿ ಸೆರೆ

ಕಾಳಜಿ ಕೇಂದ್ರದ ಬಳಿಯೂ ಇದೀಗ ಗುಡ್ಡ ಕುಸಿದಿದ್ದು, ಆತಂಕ ಮನೆ ಮಾಡಿದೆ. ಇನ್ನು ಗುಡ್ಡ ಕುಸಿಯುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

ಕೊಡಗಿನಲ್ಲಿ ಕಾಳಜಿ ಕೇಂದ್ರದ ಮೇಲೆ ಕುಸಿದು ಬಿದ್ದ ಗುಡ್ಡ! ದೃಶ್ಯ ಮೊಬೈಲ್​ನಲ್ಲಿ ಸೆರೆ
ಕಾಳಜಿ ಕೇಂದ್ರದ ಮೇಲೆ ಗುಡ್ಡ ಕುಸಿದಿದೆ
TV9 Web
| Edited By: sandhya thejappa|

Updated on:Jul 10, 2022 | 1:14 PM

Share

ಕೊಡಗು: ಮಡಿಕೇರಿ (Madikeri) ತಾಲೂಕಿನ ಕೊಯನಾಡು ಗ್ರಾಮದ ಪ್ರಾಥಮಿಕ ಶಾಲೆಯ ಬಳಿ ಕಾಳಜಿ ಕೇಂದ್ರದ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಈ ಹಿನ್ನೆಲೆ ಕೊಯನಾಡು ಶಾಲೆಯಿಂದ ಪ್ರವಾಹ ಸಂತ್ರಸ್ತರನ್ನು ಗ್ರಾಮದ ಗಣಪತಿ ದೇಗುಲ ಬಳಿಯ ಹಾಲ್​ಗೆ ಸ್ಥಳಾಂತರ ಮಾಡಲಾಗಿದೆ. ಪಯಸ್ವಿನಿ ನದಿ ಪ್ರವಾಹದಿಂದ 7 ಮನೆಗಳು ಜಲಾವೃತವಾಗಿದ್ದವು. ಹೀಗಾಗಿ 7 ಕುಟುಂಬಗಳಿಗೆ ಗ್ರಾಮದ ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿತ್ತು. ಕಾಳಜಿ ಕೇಂದ್ರದ ಬಳಿಯೂ ಇದೀಗ ಗುಡ್ಡ ಕುಸಿದಿದ್ದು, ಆತಂಕ ಮನೆ ಮಾಡಿದೆ. ಇನ್ನು ಗುಡ್ಡ ಕುಸಿಯುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.

ಜನಪ್ರತಿನಿಧಿಗಳ ವಿರುದ್ಧ ಜನರ ಆಕ್ರೋಶ: ಘಟನಾ ಸ್ಥಳಕ್ಕೆ ತಹಶೀಲ್ದಾರ್, ಎಸಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳು ಸಂತ್ರಸ್ತರನ್ನ ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜನರು, ಕಿಂಡಿ‌ ಅಣೆಕಟ್ಟಿನಿಂದ‌ ಕೃತಕ‌ ಪ್ರವಾಹ ಸೃಷ್ಟಿಯಾಗಿದೆ. ಈ ಊರಿಗೆ ಅಣೆಕಟ್ಟಿನ ಅಗತ್ಯವೇ ಇರಲಿಲ್ಲ. ರಾಜಕಾರಣಿಗಳು ಸ್ವಾರ್ಥಕ್ಕಾಗಿ ಅಣೆಕಟ್ಟು ನಿರ್ಮಿಸಿದ್ದಾರೆ. ಇದರಿಂದಲೇ ಕೊಯನಾಡು ಗ್ರಾಮ ಜಲಾವೃತವಾಗಿದೆ ಎಂದು ಹೇಳುತ್ತಿದ್ದಾರೆ.

ಇದನ್ನೂ ಓದಿ: ಅಮರನಾಥ ಗುಹೆ ಬಳಿ ಮೇಘಸ್ಫೋಟ: ರಕ್ಷಣಾ ಕಾರ್ಯಾಚರಣೆಗೆ MEILನ ನೆರವು ಕೇಳಿದ ಸೇನೆ

ಇದನ್ನೂ ಓದಿ
Image
Amarnath Yatra: ಮೇಘಸ್ಫೋಟದ ನಂತರ ಯಾತ್ರೆಯ ಪುನರಾರಂಭಕ್ಕೆ ಕಾಯುತ್ತಿರುವ ಅಮರನಾಥ ಯಾತ್ರಿಕರು
Image
ಅಮರನಾಥ ಗುಹೆ ಬಳಿ ಮೇಘಸ್ಫೋಟ: ರಕ್ಷಣಾ ಕಾರ್ಯಾಚರಣೆಗೆ MEILನ ನೆರವು ಕೇಳಿದ ಸೇನೆ
Image
ಸಿದ್ದರಾಮಯ್ಯ, ಜಮೀರ್ ಹಣೆಗೆ ಕೇಸರಿ ಬೊಟ್ಟು ಹಚ್ಚಿದ ಪುರೋಹಿತರು; ವಿಡಿಯೋ ಇಲ್ಲಿದೆ
Image
ಹಾಡಹಗಲೆ ನಿವೃತ್ತ ಎಎಸ್ಐ ಮನೆಯಲ್ಲಿ ಕಳ್ಳತನ: 30 ಸಾವಿರ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿ

ಹಲವೆಡೆ ಜಲದಿಗ್ಬಂಧನ: ಮಡಿಕೇರಿ ತಾಲೂಕಿನ ಹಲವೆಡೆ ಜಲದಿಗ್ಬಂಧನ ಆಗಿದೆ. ಮುಕ್ಕೋಡ್ಲು ಗ್ರಾಮದ ಭದ್ರಕಾಳಿ ದೇವಸ್ಥಾನ ಜಲಾವೃತವಾಗಿದ್ದು, ಹೊದಕಾನ-ಮುಕ್ಕೋಡ್ಲು ರಸ್ತೆ ಸಂಪರ್ಕ‌ ಕಡಿತವಾಗಿದೆ. ಇನ್ನು ಮುಕ್ಕೋಡ್ಲು ಭದ್ರಕಾಳಿ‌ ದೇವಸ್ಥಾನದ ತೂಗು ಸೇತುವೆಗೆ ಹಾನಿಯಾಗಿದೆ.

ಹರಿಯುತ್ತಿರುವ ಕಾವೇರಿ ನದಿ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಬೊಳಿಬಾಣೆ ಸಮೀಪ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು-ಮೂರ್ನಾಡು ರಸ್ತೆ ಸಂಪರ್ಕ ಕಡಿತವಾಗಿ ವಾಹನ ಸವಾರರು ಪರದಾಡುವಂತಾಗಿದೆ.

4 ಮನೆಗಳು ಜಲಾವೃತ: ಕಿಂಡಿ ಅಣೆಕಟ್ಟಿನಿಂದ 4 ಮನೆಗಳು ಜಲಾವೃತವಾಗಿವೆ. ಅಲ್ಲದೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮುಳುಗಡೆಯಾಗುವ ಭೀತಿ ಶುರುವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹಾಡಹಗಲೇ ಜ್ಯೋತಿಷಿ ಮನೆಗೆ ನುಗ್ಗಿ ದರೋಡೆ! ಮನೆಯಲ್ಲಿದ್ದ ಚಿನ್ನಾಭರಣ, 5 ಲಕ್ಷ ಹಣ ದೋಚಿ ಪರಾರಿ

Published On - 1:05 pm, Sun, 10 July 22

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು