AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮನ ಮಡಿಲು ಸೇರಲು ಒದ್ದಾಡಿದ ಕಂದಮ್ಮ: ಕಾಫಿ ತೋಟದಲ್ಲಿ ನವಜಾತ ಶಿಶು ಪತ್ತೆ!

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದ ಕಾಫಿ ತೋಟದಲ್ಲಿ ಅಡಿಕೆ ಹಾಳೆಯಲ್ಲಿ ಸುತ್ತಿಡಲಾಗಿದ್ದ ನವಜಾತ ಹೆಣ್ಣು ಶಿಶುವನ್ನು ಸ್ಥಳೀಯರು ಮತ್ತು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರಕ್ಷಿಸಿದ್ದಾರೆ. ಅಸ್ವಸ್ಥಗೊಂಡಿದ್ದ ಮಗುವಿಗೆ ಮಡಿಕೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಾಯದಿಂದ ಪಾರಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮಗುವನ್ನು ಬಿಟ್ಟು ಹೋದ ಪೋಷಕರಿಗಾಗಿ ತನಿಖೆ ನಡೆಸುತ್ತಿದ್ದಾರೆ.

ಅಮ್ಮನ ಮಡಿಲು ಸೇರಲು ಒದ್ದಾಡಿದ ಕಂದಮ್ಮ: ಕಾಫಿ ತೋಟದಲ್ಲಿ ನವಜಾತ ಶಿಶು ಪತ್ತೆ!
ನವಜಾತ ಶಿಶು ಪತ್ತೆ
ಗೋಪಾಲ್​ ಸೋಮಯ್ಯ
| Edited By: |

Updated on: Apr 11, 2026 | 5:50 PM

Share

ಮಡಿಕೇರಿ, ಏ.11: ಜನ್ಮ ನೀಡಿದ ಹೆತ್ತವರೇ ಮಗುವನ್ನು ಅನಾಥವಾಗಿ ಬಿಟ್ಟು ಹೋಗಿರುವ ಕರುಣಾಜನಕ ಘಟನೆಯೊಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟವೊಂದರಲ್ಲಿ ಅಡಿಕೆ ಹಾಳೆಯಲ್ಲಿ ಸುತ್ತಿ ಮಲಗಿಸಲಾಗಿದ್ದ ನವಜಾತ ಹೆಣ್ಣು ಶಿಶುವನ್ನು ಸ್ಥಳೀಯರು ಮತ್ತು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರಕ್ಷಿಸಿದ್ದಾರೆ.

ಇಂದು (ಏಪ್ರಿಲ್ 11) ಬೇತ್ರಿ ಗ್ರಾಮದ ಕಾಫಿ ತೋಟದಲ್ಲಿ ಮಗುವಿನ ಅಳುವಿನ ಶಬ್ದ ಕೇಳಿದ ಸ್ಥಳೀಯರು ಹೋಗಿ ನೋಡಿದಾಗ, ಅಡಿಕೆ ಹಾಳೆಯಲ್ಲಿ ಸುತ್ತಿ ಮಲಗಿಸಲಾಗಿದ್ದ ನವಜಾತ ಶಿಶು ಕಂಡುಬಂದಿದೆ. ತಕ್ಷಣವೇ ಎಚ್ಚೆತ್ತ ಗ್ರಾಮಸ್ಥರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಘಟಕದ ಸಿಬ್ಬಂದಿ ಮಗುವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಮಗುವು ಸ್ವಲ್ಪ ಅಸ್ವಸ್ಥಗೊಂಡಿದ್ದರಿಂದ ತಕ್ಷಣವೇ ಮಡಿಕೇರಿಯ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಗುವಿಗೆ ವೈದ್ಯರಿಂದ ಚಿಕಿತ್ಸೆ ಮತ್ತು ಆರೈಕೆ ನೀಡಲಾಗುತ್ತಿದ್ದು, ಶಿಶುವು ಪ್ರಾಣಾಪಾಯದಿಂದ ಪಾರಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕೊಪ್ಪಳದಲ್ಲೂ ಲವ್ ಜಿಹಾದ್: ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ; ಸಿಡಿದೆದ್ದ ಹಿಂದೂ ಯುವಕರು

ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪಾಪಿ ಪೋಷಕರು ಯಾರು? ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುತ್ತಮುತ್ತಲಿನ ಆಸ್ಪತ್ರೆಗಳಲ್ಲಿ ಇತ್ತೀಚೆಗೆ ಹೆರಿಗೆಯಾದವರ ಮಾಹಿತಿ ಹಾಗೂ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು