Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಅಪ್ಪ-ಅಮ್ಮನ ಹೆಸರಿನಲ್ಲಿ ನಕಲಿ ಮರಣ‌ ಪ್ರಮಾಣ‌ಪತ್ರ ಸೃಷ್ಟಿ, ಆರೋಪಿಯ ವಿರುದ್ಧ FIR ದಾಖಲು: ಏನಿದು ಪ್ರಕರಣ?

ಆರೋಪಿಯ ತಂದೆ ಅಪ್ಪಯ್ಯ, 1971ರಲ್ಲಿ ಮೃತಪಟ್ಟಿದ್ದರೆ, ತಾಯಿ ಮಾಯಮ್ಮ 2016ರಲ್ಲಿ ಮೃತಪಟ್ಟಿದ್ದಾರೆ. ಇವರುಗಳ ಹೆಸರಿನಲ್ಲಿಯೇ ನಕಲಿ ಮರಣ ಪ್ರಮಾಣ ಪತ್ರ ತಯಾರಿಸಲಾಗಿದೆ. ಆರೋಪಿ ಮುತ್ತಪ್ಪ ವಿರುದ್ಧ ಚಂಗಪ್ಪ ಎಂಬುವರಿಂದ ತಹಶೀಲ್ದಾರ್​ಗೆ ದೂರು ಸಲ್ಲಿಸಲಾಗಿತ್ತು.

ಮೃತ ಅಪ್ಪ-ಅಮ್ಮನ ಹೆಸರಿನಲ್ಲಿ ನಕಲಿ ಮರಣ‌ ಪ್ರಮಾಣ‌ಪತ್ರ ಸೃಷ್ಟಿ, ಆರೋಪಿಯ ವಿರುದ್ಧ FIR ದಾಖಲು: ಏನಿದು ಪ್ರಕರಣ?
ನಕಲಿ ಮರಣ‌ ಪ್ರಮಾಣ‌ಪತ್ರ ಸೃಷ್ಟಿ, ಆರೋಪಿಯ ವಿರುದ್ಧ FIR ದಾಖಲು
Follow us
Gopal AS
| Updated By: ಸಾಧು ಶ್ರೀನಾಥ್​

Updated on:Nov 17, 2023 | 2:35 PM

ಮಡಿಕೇರಿ, ನವೆಂಬರ್​ 17: ಆಸ್ತಿ ಕಬಳಿಸಲು ನಕಲಿ ಮರಣ‌ ಪ್ರಮಾಣ‌ಪತ್ರ ( fake death certificate) ಸೃಷ್ಟಿಸಿದ್ದ ಆರೋಪಿಯ ವಿರುದ್ಧ ಪೊಲೀಸರು FIR ದಾಖಲಿಸಿದ್ದಾರೆ. ಮಡಿಕೇರಿ ತಾಲೂಕಿನ ಹೆಚ್.ಎ. ಮುತ್ತಪ್ಪ ಎಂಬಾತನ ವಿರುದ್ಧ ಎಫ್​ಐಆರ್ ದಾಖಲಾಗಿದ್ದು (madikeri police), ಮೃತಪಟ್ಟ ತಂದೆ ಮತ್ತು ತಾಯಿಯ ಹೆಸರಲ್ಲಿ ನಕಲಿ ಮರಣ ಪ್ರಮಾಣ ಪತ್ರ ಸೃಷ್ಟಿಸಿದ್ದ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ಆಸ್ತಿ ಕಬಳಿಸುವ ಉದ್ದೇಶದಿಂದ ನಕಲಿ ಮರಣ‌ ಪ್ರಮಾಣ‌ಪತ್ರ ಸೃಷ್ಟಿಸಲಾಗಿದ್ದು, ಅದನ್ನು ದೃಢೀಕರಿಸಲು ತಹಶೀಲ್ದಾರ್ ಸಹಿಯನ್ನು ಆರೋಪಿ ನಕಲು ಮಾಡಿದ್ದಾನೆ ಎನ್ನಲಾಗಿದೆ.

ಆರೋಪಿಯ ತಂದೆ ಅಪ್ಪಯ್ಯ, 1971ರಲ್ಲಿ ಮೃತಪಟ್ಟಿದ್ದರೆ, ತಾಯಿ ಮಾಯಮ್ಮ 2016ರಲ್ಲಿ ಮೃತಪಟ್ಟಿದ್ದಾರೆ. ಇವರುಗಳ ಹೆಸರಿನಲ್ಲಿಯೇ ನಕಲಿ ಮರಣ ಪ್ರಮಾಣ ಪತ್ರ ತಯಾರಿಸಲಾಗಿದೆ.

ಇದನ್ನೂ ಓದಿ: ಹಾಸನ -ಆಸ್ತಿ ಕಬಳಿಸಲು ಬದುಕಿದ ವೃದ್ಧೆ ಮರಣ ಪ್ರಮಾಣ ಪತ್ರ ಮಾಡಿಸಿದ ಸಂಬಂಧಿಕರು, ದೂರು ದಾಖಲಿಸಿದ ಮಗ

ಆರೋಪಿ ಮುತ್ತಪ್ಪ ವಿರುದ್ಧ ಚಂಗಪ್ಪ ಎಂಬುವರಿಂದ ತಹಶೀಲ್ದಾರ್​ಗೆ ದೂರು ಸಲ್ಲಿಸಲಾಗಿತ್ತು. ಅದರನ್ವಯ ಮಡಿಕೇರಿ ನಗರ ಠಾಣೆಗೆ ದೂರು ನೀಡಿದ ತಹಶೀಲ್ದಾರ್ ಪ್ರವೀಣ್ ಅವರು ಮುತ್ತಪ್ಪ ವಿರುದ್ಧ ಎಫ್​​ಐಆರ್​​ ದಾಖಲಿಸಿಕೊಂಡು, ತನಿಖೆ ನಡೆಸುವಂತೆ ಮಡಿಕೇರಿ ಪೊಲೀಸರಿಗೆ ಸೂಚಿಸಿದ್ದಾರೆ.

ನಕಲಿ ಬ್ಯಾಂಕ್ ಖಾತೆ ಸೃಷ್ಟಿಸಿ ವಹಿವಾಟು ನಡೆಸುತ್ತಿದ್ದ ಜಾಲ ಭೇದಿಸಿದ ಸಿಸಿಬಿ

ಎಲ್ಲೆಂದರಲ್ಲಿ ಆಧಾರ್, ಪಾನ್ ಕಾರ್ಡ್ ಕೊಡುವ ಜನರೇ ಎಚ್ಚರವಾಗಿರಿ. ಇಲ್ಲವಾದರೆ, ನಿಮ್ಮ ದಾಖಲೆಗಳಲ್ಲಿ ಬೇನಾಮಿ (ನಕಲಿ) ಬ್ಯಾಂಕ್ ಖಾತೆಗಳು ಸೃಷ್ಟಿಯಾಗುತ್ತದೆ. ಬೆಂಗಳೂರಿನಲ್ಲಿ ಇಂತಹ ನಕಲಿ ಖಾತೆಗಳನ್ನು ಸೃಷ್ಟಿ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಪತ್ತೆಹಚ್ಚಿ ಆರು ಮಂದಿಯನ್ನು ಬಂಧಿಸಿದ್ದಾರೆ.

ಕೇರಳ‌ ಮೂಲದ ಆರೋಪಿಗಳಾದ ಸಮೀರ್, ಮಹಮ್ಮದ್ ಹಸನ್, ಅಮೂಲ್ ಬಾಬು, ಮಹಮ್ಮದ್ ಇರ್ಫಾನ್, ತಂಝೀಲ್, ಮಂಜುನಾಥ ಬಂಧಿತರು. ಜನರ ಕೆವೈಸಿ ಪಡೆದು ಬಳಿಕ ಬ್ಯಾಂಕ್ ಖಾತೆ ತೆರೆದು ವಹಿವಾಟು ನಡೆಸುತ್ತಿದ್ದರು.

5 ಸಾವಿರದಿಂದ 10,000 ರೂ. ಕೊಟ್ಟು ಕೆವೈಸಿ ಪಡೆಯುತ್ತಿದ್ದ ಆರೋಪಿಗಳು, ಆಧಾರ್, ಪಾನ್ ಕಾರ್ಡ್, ಒಂದು ಸಹಿಗೆ 10,000 ರೂ. ರೇಟ್ ಫಿಕ್ಸ್ ಮಾಡಿದ್ದರು. ಪ್ರತಿ ದಾಖಲಾತಿ​ಗೆ ಹೊಸ ಸಿಮ್ ಬಳಸಿ ಖಾತೆ ತೆರೆಯುತ್ತಿದ್ದರು. ವಿದೇಶದಲ್ಲಿ ಕುಳಿತುಕೊಂಡೇ ಬೆಂಗಳೂರಿನಲ್ಲಿ ಬೇನಾಮಿ ಖಾತೆ ತೆರೆದು ವಹಿವಾಟು ನಡೆಸುತ್ತಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:30 pm, Fri, 17 November 23

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ