AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ, ಒಂದೇ ವಾರದಲ್ಲಿ 6 ಬಾರಿ ಕಂಪಿಸಿದ ಭೂಮಿ

ಕೊಡಗು ಜಿಲ್ಲೆಯ ಚೆಂಬು ಗ್ರಾಮದಲ್ಲಿ ಮಧ್ಯಾಹ್ನ 1.24ರ ಸುಮಾರಿಗೆ ಮತ್ತೆ ಭೂಕಂಪನ ಸಂಭವಿಸಿದೆ. ಕಳೆದ ಒಂದು ವಾರದಲ್ಲಿ 6 ಬಾರಿ ಭೂಮಿ ಕಂಪಿಸಿತ್ತು.

ಕೊಡಗು ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ, ಒಂದೇ ವಾರದಲ್ಲಿ 6 ಬಾರಿ ಕಂಪಿಸಿದ ಭೂಮಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 02, 2022 | 2:26 PM

Share

ಕೊಡಗು: ಜಿಲ್ಲೆಯ ಚೆಂಬು ಗ್ರಾಮದಲ್ಲಿ ಮಧ್ಯಾಹ್ನ 1.24ರ ಸುಮಾರಿಗೆ ಮತ್ತೆ ಭೂಕಂಪನ (Earthquake) ಸಂಭವಿಸಿದೆ. ಕಳೆದ ಒಂದು ವಾರದಲ್ಲಿ 6 ಬಾರಿ ಭೂಮಿ ಕಂಪಿಸಿತ್ತು.  ಮಡಿಕೇರಿ (Madikeri) ತಾಲ್ಲೂಕಿನ ಸಂಪಾಜೆ, ಚೆಂಬು, ದಕ್ಷಿಣ ಕನ್ನಡ (Dakshina kannada) ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಲುಗುಂಡಿ, ಗೂನಡ್ಕ ಭಾಗದಲ್ಲಿ ಕೂಡ ಭೂಮಿ ಕಂಪಿಸಿದ ಅನುಭವವಾಗಿದೆ.ಜಿಲ್ಲೆಯಲ್ಲಿ ನಿರಂತರವಾಗಿ ಭೂಕಂಪನ ಆಗುತ್ತಿದ್ದು, ಜನರಿಗೆ ಆತಂಕ ಹೆಚ್ಚಾಗುತ್ತಿದೆ.

ಇದನ್ನು ಓದಿ: ಕೊಡಗು ಭೂಕಂಪನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ; ವಿಡಿಯೋ ಇಲ್ಲಿದೆ

2018ರಲ್ಲಿ ಜಿಲ್ಲೆಯಲ್ಲಿ ಇದೇ ರೀತಿ ಭೂಕಂಪನ ಆಗಿತ್ತು. ಅದೇ ವರ್ಷ ಪ್ರಾಕೃತಿಕ ವಿಕೋಪ ಸಂಭವಿಸಿತ್ತು. ಈ ಬಾರಿಯೂ ಪ್ರಾಕೃತಿಕ ವಿಕೋಪ ಸಂಭವಿಸುವ ಬಗ್ಗೆ ಜನರಿಗೆ ಭಯ ಶುರುವಾಗಿದೆ. ಜೂನ್ 28ರಂದು ಬೆಳಗ್ಗೆ 7.45ರ ಸುಮಾರಿಗೆ ಮಡಿಕೇರಿ ತಾಲೂಕಿನ ಕರಿಕೆ, ಪೆರಾಜೆ ಭಾಗಮಂಡಲ ಹಾಗೂ ಸಂಪಾಜೆ ಕರ್ಣಂಗೇರಿ ಸೇರಿ ಹಲವೆಡೆ ಭೂಕಂಪನ ಅನುಭವವಾಗಿದೆ.

ಇದಕ್ಕೂ ಮೊದಲು ಅಂದರೆ ವಾರದ ಹಿಂದೆ ಜಿಲ್ಲೆಯಲ್ಲಿ ಆಗಿದ್ದ ಭೂಕಂಪನ ದೃಢವಾಗಿದೆ. ಈ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಕೋಶ ದೃಢಪಡಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪನದಿಂದಾಗಿ ಕೊಡಗು-ದಕ್ಷಿಣ ಕನ್ನಡ ಜಿಲ್ಲೆ ಗಡಿಭಾಗವಾದ ಸಂಪಾಜೆಯಲ್ಲಿ ಮನೆ ಗೋಡೆಗಳು ಬಿರುಕು ಬಿಟ್ಟಿದ್ದವು. ಜೂನ್ 28 ರ ಬೆಳಗ್ಗೆ 7.45 ಕ್ಕೆ ಭೂಮಿ ಕಂಪಿಸಿತ್ತು. ಕಂಪನದ ತೀವ್ರತೆಗೆ ಮನೆಯ ಕಂಬಗಳು ಅಲುಗಾಡಿವೆ. ಜೂನ್ 28 ರಂದು ಮಡಿಕೇರಿ ಲೂಕಿನ ಕರಿಕೆ, ಪೆರಾಜೆ ಭಾಗಮಂಡಲ ಹಾಗೂ ಸಂಪಾಜೆ ಕರ್ಣಂಗೇರಿ ಸೇರಿ ಹಲವೆಡೆ ಭೂಕಂಪನ ಅನುಭವಾಗಿದೆ. ಇನ್ನು ಮಡಿಕೇರಿ ನಗರದಲ್ಲೂ ಲಘು ಭೂಕಂಪನ ಆಗಿತ್ತು

ಇದನ್ನು ಓದಿ: ಕೊಡಗಿನಲ್ಲಿ ಹಲವೆಡೆ ಮತ್ತೆ ಭೂಕಂಪನ ಅನುಭವ! ಪ್ರಕೃತಿ ವಿಕೋಪ ಆತಂಕದಲ್ಲಿ ಜನರು

ಜೂನ್ 23ಕ್ಕೆ ಮಂಡ್ಯ ಜಿಲ್ಲೆಯ ಕೆಲವೆಡೆಯೂ ಜನರಿಗೆ ಮುಂಜಾನೆ 4.40ರ ಸುಮಾರಿಗೆ ಲಘು ಭೂಕಂಪನದ ಅನುಭವವಾಗಿತ್ತು. ಕೆ.ಆರ್.ಪೇಟೆ ತಾಲೂಕಿನ ಐಕನಹಳ್ಳಿ, ಚಿನ್ನೇನಹಳ್ಳಿ, ಮಾದಾಪುರ, ಗೊಂದಿಹಳ್ಳಿ, ಬಿದರಹಳ್ಳಿ, ಗೊಡೇಹೊಸಹಳ್ಳಿಯ ಗ್ರಾಮಗಳ ಜನರು ಭೂಕಂಪದಿಂದ ಆತಂಕಗೊಂಡಿದ್ದರು. ಹಾಸನ ಜಿಲ್ಲೆಯ, ಅರಕಲಗೂಡು, ಹೊಳೆನರಸೀಪುರ ತಾಲೂಕಿನ ಹಲವು ಗ್ರಾಮಗಳಲ್ಲಿ ನಸುಕಿನ 4.30ರಿಂದ 5 ಗಂಟೆಯ ಅವಧಿಯಲ್ಲಿ ಭೂಮಿಯು ಕಂಪಿಸಿತ್ತು

Published On - 2:17 pm, Sat, 2 July 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ