AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯ ಚೆಂಬು ಗ್ರಾಮದಲ್ಲಿ ಮತ್ತೆ ಲಘು ಭೂಕಂಪ; ಒಂದೇ ದಿನ 2 ಬಾರಿ ಕಂಪಿಸಿದ ಭೂಮಿ

ಕೊಡಗು: ಜಿಲ್ಲೆಯ ಮಡಿಕೇರಿ ತಾಲೂಕು ಚೆಂಬು ಗ್ರಾಮದಲ್ಲಿ ಮತ್ತೆ ಲಘು ಭೂಕಂಪನದ ಅನುಭವವಾಗಿದೆ. ಗ್ರಾಮದಲ್ಲಿ ಇಂದು ಒಂದೇ ದಿನ 2 ಬಾರಿ ಭೂಮಿ ಕಂಪಿಸಿದೆ.

ಮಡಿಕೇರಿಯ ಚೆಂಬು ಗ್ರಾಮದಲ್ಲಿ ಮತ್ತೆ ಲಘು ಭೂಕಂಪ; ಒಂದೇ ದಿನ 2 ಬಾರಿ ಕಂಪಿಸಿದ ಭೂಮಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 28, 2022 | 11:15 PM

Share

ಕೊಡಗು: ಜಿಲ್ಲೆಯ ಮಡಿಕೇರಿ (Madikeri) ತಾಲೂಕು ಚೆಂಬು ಗ್ರಾಮದಲ್ಲಿ ಇಂದು (ಜೂನ್​ 28)  ಮತ್ತೆ ಲಘು ಭೂಕಂಪನದ (Earthquake) ಅನುಭವವಾಗಿದೆ. ಗ್ರಾಮದಲ್ಲಿ ಇಂದು ಒಂದೇ ದಿನ 2 ಬಾರಿ ಭೂಮಿ ಕಂಪಿಸಿದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಜಿಲ್ಲೆಯ ಹಲವೆಡೆ ಇಂದು ಬೆಳಿಗ್ಗೆ ಭೂಕಂಪನದ ಅನುಭವವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿತ್ತು. ಬೆಳಗ್ಗೆ 7.45ರ ಸುಮಾರಿಗೆ ಮಡಿಕೇರಿ ತಾಲೂಕಿನ ಕರಿಕೆ, ಪೆರಾಜೆ ಭಾಗಮಂಡಲ ಹಾಗೂ ಸಂಪಾಜೆ ಕರ್ಣಂಗೇರಿ ಸೇರಿ ಹಲವೆಡೆ ಭೂಕಂಪನ ಅನುಭವಾಗಿದೆ. ಇನ್ನು ಮಡಿಕೇರಿ ನಗರದಲ್ಲೂ ಲಘು ಭೂಕಂಪನ ಆಗಿದೆ ಎಂದು ತಿಳಿದುಬಂದಿದೆ. ಕಳೆದ ಮೂರು ದಿನಗಳ ಹಿಂದೆಯೂ ಜಿಲ್ಲೆಯಲ್ಲಿ ಭೂಮಿ ಕಂಪಿಸಿತ್ತು. ಇದಕ್ಕೂ ಮೊದಲು 2018ರಲ್ಲಿ ಇದೇ ರೀತಿ ಕಂಪಿಸಿತ್ತು. ಅದೇ ವರ್ಷ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿತ್ತು.

ಇದನ್ನು ಓದಿ: ಕೊಡಗಿನಲ್ಲಿ ಯೋಧನ ಕುಟುಂಬಕ್ಕೆ ಬಹಿಷ್ಕಾರ! ಸೇನಾಧಿಕಾರಿಗಳಿಂದ ಡಿಸಿ, ಎಸ್​ಪಿಗೆ ಪತ್ರ

ಸುಳ್ಯ ಪೇಟೆಯಲ್ಲೂ ಇಂದು ಭೂಕಂಪನ ಅನುಭವ ಆಗಿದ್ದು, ಜನರು ಭಯದಲ್ಲಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸುಮಾರು 4-5 ಸೆಕೆಂಡ್​ಗಳ ಕಾಲ ಕಂಪನ ಆಗಿದೆ. ಕಳೆದ ಬಾರಿಗಿಂತ ಹೆಚ್ಚಿನ ತೀವ್ರತೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

ಇದನ್ನು ಓದಿ: ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶಿಸುವ ಮುನ್ನವೆ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಿದ NDRF ತಂಡ

ಮೂರು ದಿನಗಳ ಹಿಂದೆ ಜಿಲ್ಲೆಯಲ್ಲಿ ಆಗಿದ್ದ ಭೂಕಂಪನ ದೃಢವಾಗಿದೆ. ಈ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಕೋಶ ದೃಢಪಡಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪನದಿಂದಾಗಿ ಕೊಡಗು-ದಕ್ಷಿಣ ಕನ್ನಡ ಜಿಲ್ಲೆ ಗಡಿಭಾಗವಾದ ಸಂಪಾಜೆಯಲ್ಲಿ ಮನೆ ಗೋಡೆಗಳು ಬಿರುಕು ಬಿಟ್ಟಿದ್ದವು.

ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ಸುತ್ತಮುತ್ತ ಭೂಕಂಪನ ರಾತ್ರಿ 7.45ರ ಸಮಯದಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.8ರಷ್ಟು ದಾಖಲಾಗಿದೆ.

Published On - 6:53 pm, Tue, 28 June 22

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ