AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯಲ್ಲಿ ಮತಾಂತರಕ್ಕೆ ಯತ್ನ ಆರೋಪ; ಪ್ರಥಮ ದರ್ಜೆ ಸಹಾಯಕನ ಬಂಧನ

ನಗರದ ಜ.ತಿಮ್ಮಯ್ಯ ವೃತ್ತದ ಬಸ್ ನಿಲ್ದಾಣ ಬಳಿ ಮತಾಂತರಕ್ಕೆ ಪ್ರಚೋದಿಸುತ್ತಿದ್ದ ಆರೋಪದ ಮೇಲೆ ಆರೋಗ್ಯ ಮತ್ತು ಕುಟುಂಬ‌ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ(FDA) ನಿಶಾಂತ್ ಹೆಚ್.ಬಿ ಎನ್ನುವವರನ್ನು ಬಂಧಿಸಲಾಗಿದೆ.

ಮಡಿಕೇರಿಯಲ್ಲಿ ಮತಾಂತರಕ್ಕೆ ಯತ್ನ ಆರೋಪ; ಪ್ರಥಮ ದರ್ಜೆ ಸಹಾಯಕನ ಬಂಧನ
ಆರೋಪಿ ನಿಶಾಂತ್ ಹೆಚ್.ಬಿ
TV9 Web
| Edited By: |

Updated on:Jan 08, 2023 | 1:13 PM

Share

ಮಡಿಕೇರಿ: ಜಿಲ್ಲೆಯಲ್ಲಿ ಮತಾಂತರ (Conversion) ಸುದ್ದು ಮಾಡುತ್ತಿದ್ದು, ನಗರದ ಜ.ತಿಮ್ಮಯ್ಯ ವೃತ್ತದ ಬಸ್ ನಿಲ್ದಾಣದ ಬಳಿ ಮತಾಂತರಕ್ಕೆ ಪ್ರಚೋದಿಸುತ್ತಿದ್ದ ಸರ್ಕಾರಿ ನೌಕರರನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕರು ನೀಡಿದ ದೂರಿನಂತೆ ಸ್ಥಳಕ್ಕೆ ಆಗಮಿಸಿದ ನಗರ ಠಾಣೆ ಪೊಲೀಸರು ಆರೋಗ್ಯ ಮತ್ತು ಕುಟುಂಬ‌ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ (FDA) ನಿಶಾಂತ್ ಹೆಚ್.ಬಿ ಎಂಬಾತನನ್ನು ಬಂಧಿಸಿದ್ದಾರೆ. ಮತಾಂತರಕ್ಕೆ ಪ್ರಚೋದನೆ (Incitement to conversion) ನೀಡಲು ಜೊತೆಗೆ ಇಟ್ಟುಕೊಂಡಿದ್ದ ಕ್ರೈಸ್ತ ಮಿಷನರಿ (Christian Missionary) ಪುಸ್ತಕಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಹಿಂದೆ ಪತ್ತೆಯಾದ ಹಿಂದೂಗಳ ಮತಾಂತರ ಪ್ರಕರಣದಲ್ಲಿ ಕ್ರಿಶ್ಚಿಯನ್ ಮತಾಂತರಿಗೆಳು ಹಿಂದೂ ದೇವಾನು ದೇವತೆಗಳನ್ನು ನಿಂದಿಸಿ ಅವರದ್ದೇ ದೇವರು ಶ್ರೇಷ್ಠ ಎಂಬಂತೆ ಬಿಂಬಿಸುವುದು ಕಂಡುಬಂದಿದ್ದವು. ಸದ್ಯ ಬಂಧಿತನಾಗಿರುವ ನಿಶಾಂತ್ ಕೂಡ ಇದೇ ರೀತಿ ಮಾಡುತ್ತಿದ್ದನು. ಮತಾಂತರಕ್ಕೆ ಆಮಿಷವೊಡ್ಡುವುದರ ಜೊತೆಗೆ ಹಿಂದೂ ದೇವರುಗಳನ್ನು ನಿಂದಿಸುತ್ತಿದ್ದನು ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಮತಾಂತರ ನಿಷೇಧದ ಬಗ್ಗೆ ಸರ್ಕಾರ ಅನೇಕ ಕಾನೂನುಗಳನ್ನು ತಂದರು ಆಗಾಗ ಈ ರೀತಿಯ ಘಟನೆಗಳು ಸಂಭವಿಸುತ್ತಿದೆ. ಬಲವಂತ, ವಂಚನೆ,  ಒತ್ತಾಯ ಹಾಗೂ ಆಮಿಷದ ಮೂಲಕ ನಡೆಸುವ ಮತಾಂತರ ಮತ್ತು ಮದುವೆಯಾಗುವ ಭರವಸೆಯ  ಮೂಲಕ ನಡೆಸುವ ಮತಾಂತರಕ್ಕೆ ನಿಷೇಧವಿದೆ.‌ ಸುಪ್ರೀಕೋರ್ಟ್​ ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಐದು ವರ್ಷಗಳವರೆಗೆ  ಜೈಲು ಶಿಕ್ಷೆ ಹಾಗೂ ಇಪ್ಪತ್ತೈದು ಸಾವಿರ ರೂಪಾಯಿಗಳ ದಂಡ‌ ವಸೂಲಾತಿಗೆ ಅವಕಾಶವಿದೆ ಎಂದು ಹೇಳಿದೆ. ಇಷ್ಟೋಂದು ನಿಯಮಗಳಿದ್ದರು ಇಂತಹ ಘಟನೆಗಳು ನಡೆಯುತ್ತಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Sun, 8 January 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್