AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿಗೆ ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನೆಲೆ – ಕೇಸರಿ ಬ್ಯಾನರ್ ತೆರವಿಗೆ ಪುರಸಭೆ ಆಡಳಿತಾಧಿಕಾರಿ ವಿವಾದಿತ ಆದೇಶ

ಸಿಎಂ ಸಿದ್ದರಾಮಯ್ಯ ನಾಳಿದ್ದು ಗುರುವಾರ ಕೊಡಗು ಜಿಲ್ಲೆ ಪ್ರವಾಸ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿರಾಜಪೇಟೆ ಆಡಳಿತಾಧಿಕಾರಿ ನಗರದಲ್ಲಿ ಹಾಕಲಾಗಿರೋ ಶ್ರೀ ರಾಮನ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಮತ್ತು ಕೇಸರಿ ಧ್ವಜಗಳನ್ನು ತೆರವುಗೊಳಿಸುವಂತೆ ಆದೇಶ ಮಾಡಿದ್ದಾರೆ. ಈ ಆದೇಶ ವಿವಾದ ಸೃಷ್ಟಿಸಿದೆ.

ಕೊಡಗಿಗೆ ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನೆಲೆ - ಕೇಸರಿ ಬ್ಯಾನರ್ ತೆರವಿಗೆ  ಪುರಸಭೆ ಆಡಳಿತಾಧಿಕಾರಿ ವಿವಾದಿತ ಆದೇಶ
ಕೇಸರಿ ಬ್ಯಾನರ್ ತೆರವಿಗೆ ವಿರಾಜಪೇಟೆ ಪುರಸಭೆ ಆಡಳಿತಾಧಿಕಾರಿ ವಿವಾದಿತ ಆದೇಶ
ಗೋಪಾಲ್​ ಸೋಮಯ್ಯ
| Edited By: ಸಾಧು ಶ್ರೀನಾಥ್​|

Updated on: Jan 23, 2024 | 1:20 PM

Share

ವಿರಾಜಪೇಟೆ,  ಜನವರಿ 23: ಕೊಡಗು ಜಿಲ್ಲೆಗೆ ಇದೇ ಜನವರಿ 25 ರಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ. ಜಿಲ್ಲೆಯ ವಿರಾಜಪೇಟೆ ಹಾಗೂ ಮಡಿಕೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸುವುದಲ್ಲದೆ, ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ವಿರಾಜಪೇಟೆ ಆಡಳಿತಾಧಿಕಾರಿ ನೀಡಿರೋ ಒಂದು ಆದೇಶ ವಿವಾದ ಸೃಷ್ಟಿಸಿದೆ. ವಿರಾಜಪೇಟೆ ನಗರದಲ್ಲಿ ಹಾಕಲಾಗಿರೋ ಶ್ರೀ ರಾಮನ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಮತ್ತು ಕೇಸರಿ ಧ್ವಜಗಳನ್ನು ಜ. 23 ರ ಸಂಜೆಯ ಒಳಗೆ ತೆರವುಗೊಳಿಸುವಂತೆ ಆದೇಶ ಮಾಡಿದ್ದಾರೆ. ಈ ಆದೇಶದ ವಿರುದ್ಧ ಹಿಂದೂ ಪರ ಸಂಘಟನೆಗಳು ಮತ್ತು ಬಿಜೆಪಿ ತೀವ್ರ ಪ್ರತಿಭಟನೆ ನಡೆಸಿದೆ.

ವಿರಾಜಪೇಟೆ ಪುರಸಭೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸರ್ಕಾರ, ಕಾಂಗ್ರೆಸ್ ಹಾಗೂ ಪುರಸಭೆ ಆಡಳಿತಾಧಿಕಾರಿ ವಿರುದ್ಧ ಧಿಕ್ಕಾರ ಕೂಗಿದರು. ಪ್ರೊಟೊಕಾಲ್ ಮತ್ತು ಸಾರ್ವಜನಿಕ ಶಾಂತಿ ಭಂಗವಾಗದಂತೆ ತಡೆಯಲು ಬಂಟಿಂಗ್ಸ್ ತೆರವುಗೊಳಿಸಲು ಆದೇಶ ನೀಡಲಾಗಿದೆ ಎಂದು ಪುರಸಭೆ ಆಡಳಿತಾಧಿಕಾರಿ ಚಂದ್ರ ಕುಮಾರ್ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಮಂದಿರ ಉದ್ಘಾಟನೆ ವೇಳೆ ಶಾಂತಿ ಕದಡುವ ಫೇಸ್ ಬುಕ್ ಪೋಸ್ಟ್​: ಕೊಪ್ಪಳ ಪೊಲೀಸರಿಂದ FIR ದಾಖಲು

ಆದ್ರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು. ಆಡಳಿತಾಧಿಕಾರಿ ಹಾಗೂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಮಾಜಿ ಸ್ಪೀಕರ್ ಕೆಜಿ ಬೋಪಯ್ಯ ಆಡಳಿತಾಧಿಕಾರಿಯನ್ನ ತೀವ್ರ ತರಾಟೆಗೆ ತೆಗೆದುಕೊಂಡರು. ಯಾವುದೇ ಕಾರಣಕ್ಕೂ ಕೇಸರಿ ಬ್ಯಾನರ್ ಗಳನ್ನು ತೆಗೆಯುವುದಿಲ್ಲ, ಒಂದು ವೇಳೆ ಪುರಸಭೆ ಅದನ್ನು ತೆರವುಗೊಳಿಸಿದರೆ ಆಗುವ ಅನಾಹುತಗಳಿಗೆ ಅವರೇ ಜವಾಬ್ದಾರಿ ಎಂದು ಎಚ್ಚರಿಕೆ ನೀಡಿದರು. ಕೊನೆಗೂ ಪ್ರತಿಭಟನೆಗೆ ಬಗ್ಗಿದ ಆಡಳಿತಾಧಿಕಾರಿ ಚಂದ್ರಕುಮಾರ್ ತಮ್ಮ ಆದೇಶ ಹಿಂಪಡೆದರು. ಹಾಗಾಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಹಿಂಪಡೆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ