AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿಗೆ ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನೆಲೆ – ಕೇಸರಿ ಬ್ಯಾನರ್ ತೆರವಿಗೆ ಪುರಸಭೆ ಆಡಳಿತಾಧಿಕಾರಿ ವಿವಾದಿತ ಆದೇಶ

ಸಿಎಂ ಸಿದ್ದರಾಮಯ್ಯ ನಾಳಿದ್ದು ಗುರುವಾರ ಕೊಡಗು ಜಿಲ್ಲೆ ಪ್ರವಾಸ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿರಾಜಪೇಟೆ ಆಡಳಿತಾಧಿಕಾರಿ ನಗರದಲ್ಲಿ ಹಾಕಲಾಗಿರೋ ಶ್ರೀ ರಾಮನ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಮತ್ತು ಕೇಸರಿ ಧ್ವಜಗಳನ್ನು ತೆರವುಗೊಳಿಸುವಂತೆ ಆದೇಶ ಮಾಡಿದ್ದಾರೆ. ಈ ಆದೇಶ ವಿವಾದ ಸೃಷ್ಟಿಸಿದೆ.

ಕೊಡಗಿಗೆ ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನೆಲೆ - ಕೇಸರಿ ಬ್ಯಾನರ್ ತೆರವಿಗೆ  ಪುರಸಭೆ ಆಡಳಿತಾಧಿಕಾರಿ ವಿವಾದಿತ ಆದೇಶ
ಕೇಸರಿ ಬ್ಯಾನರ್ ತೆರವಿಗೆ ವಿರಾಜಪೇಟೆ ಪುರಸಭೆ ಆಡಳಿತಾಧಿಕಾರಿ ವಿವಾದಿತ ಆದೇಶ
Gopal AS
| Edited By: |

Updated on: Jan 23, 2024 | 1:20 PM

Share

ವಿರಾಜಪೇಟೆ,  ಜನವರಿ 23: ಕೊಡಗು ಜಿಲ್ಲೆಗೆ ಇದೇ ಜನವರಿ 25 ರಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ. ಜಿಲ್ಲೆಯ ವಿರಾಜಪೇಟೆ ಹಾಗೂ ಮಡಿಕೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸುವುದಲ್ಲದೆ, ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ವಿರಾಜಪೇಟೆ ಆಡಳಿತಾಧಿಕಾರಿ ನೀಡಿರೋ ಒಂದು ಆದೇಶ ವಿವಾದ ಸೃಷ್ಟಿಸಿದೆ. ವಿರಾಜಪೇಟೆ ನಗರದಲ್ಲಿ ಹಾಕಲಾಗಿರೋ ಶ್ರೀ ರಾಮನ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಮತ್ತು ಕೇಸರಿ ಧ್ವಜಗಳನ್ನು ಜ. 23 ರ ಸಂಜೆಯ ಒಳಗೆ ತೆರವುಗೊಳಿಸುವಂತೆ ಆದೇಶ ಮಾಡಿದ್ದಾರೆ. ಈ ಆದೇಶದ ವಿರುದ್ಧ ಹಿಂದೂ ಪರ ಸಂಘಟನೆಗಳು ಮತ್ತು ಬಿಜೆಪಿ ತೀವ್ರ ಪ್ರತಿಭಟನೆ ನಡೆಸಿದೆ.

ವಿರಾಜಪೇಟೆ ಪುರಸಭೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸರ್ಕಾರ, ಕಾಂಗ್ರೆಸ್ ಹಾಗೂ ಪುರಸಭೆ ಆಡಳಿತಾಧಿಕಾರಿ ವಿರುದ್ಧ ಧಿಕ್ಕಾರ ಕೂಗಿದರು. ಪ್ರೊಟೊಕಾಲ್ ಮತ್ತು ಸಾರ್ವಜನಿಕ ಶಾಂತಿ ಭಂಗವಾಗದಂತೆ ತಡೆಯಲು ಬಂಟಿಂಗ್ಸ್ ತೆರವುಗೊಳಿಸಲು ಆದೇಶ ನೀಡಲಾಗಿದೆ ಎಂದು ಪುರಸಭೆ ಆಡಳಿತಾಧಿಕಾರಿ ಚಂದ್ರ ಕುಮಾರ್ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಮಂದಿರ ಉದ್ಘಾಟನೆ ವೇಳೆ ಶಾಂತಿ ಕದಡುವ ಫೇಸ್ ಬುಕ್ ಪೋಸ್ಟ್​: ಕೊಪ್ಪಳ ಪೊಲೀಸರಿಂದ FIR ದಾಖಲು

ಆದ್ರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು. ಆಡಳಿತಾಧಿಕಾರಿ ಹಾಗೂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಮಾಜಿ ಸ್ಪೀಕರ್ ಕೆಜಿ ಬೋಪಯ್ಯ ಆಡಳಿತಾಧಿಕಾರಿಯನ್ನ ತೀವ್ರ ತರಾಟೆಗೆ ತೆಗೆದುಕೊಂಡರು. ಯಾವುದೇ ಕಾರಣಕ್ಕೂ ಕೇಸರಿ ಬ್ಯಾನರ್ ಗಳನ್ನು ತೆಗೆಯುವುದಿಲ್ಲ, ಒಂದು ವೇಳೆ ಪುರಸಭೆ ಅದನ್ನು ತೆರವುಗೊಳಿಸಿದರೆ ಆಗುವ ಅನಾಹುತಗಳಿಗೆ ಅವರೇ ಜವಾಬ್ದಾರಿ ಎಂದು ಎಚ್ಚರಿಕೆ ನೀಡಿದರು. ಕೊನೆಗೂ ಪ್ರತಿಭಟನೆಗೆ ಬಗ್ಗಿದ ಆಡಳಿತಾಧಿಕಾರಿ ಚಂದ್ರಕುಮಾರ್ ತಮ್ಮ ಆದೇಶ ಹಿಂಪಡೆದರು. ಹಾಗಾಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಹಿಂಪಡೆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ