ಕೊಡಗು ದಸರಾ ಉತ್ಸವದಲ್ಲಿ ಆಕರ್ಷಣೆಯ ಕೇಂದ್ರವಾದ ಕಾಫಿ

ಕೊಡಗಿನಲ್ಲಿ ಈ ಬಾರಿ ವಿಶಿಷ್ಟವಾಗಿ ದಸರಾ ಉತ್ಸವ ಆಯೋಜಿಸಲಾಗಿದೆ. ಮಡಿಕೇರಿ ನಗರ ದಸರಾ ಸಮಿತಿವತಿಯಿಂದ ಈ ಬಾರಿ ಮಡಿಕೇರಿ ನಗರದ ಗಾಂಧಿ ಮೈದಾನದಲ್ಲಿ ಕಾಫಿ ದಸರಾ ಆಯೋಜಿಸಲಾಗಿದೆ. ಈ ಕಾಫಿ ದಸರಾಗೆ ಸಾಕಷ್ಟು ಜನರು ಬಂದಿದ್ದರು. ಕಾಫಿ ದಸರಾದ ವಿಶೇಷತೆ ಏನು? ಇಲ್ಲಿದೆ ಮಾಹಿತಿ

ಕೊಡಗು ದಸರಾ ಉತ್ಸವದಲ್ಲಿ ಆಕರ್ಷಣೆಯ ಕೇಂದ್ರವಾದ ಕಾಫಿ
ಕಾಫಿ ದಸರಾ
Follow us
| Updated By: ವಿವೇಕ ಬಿರಾದಾರ

Updated on: Oct 07, 2024 | 7:25 AM

ಕೊಡಗು, ಅಕ್ಟೋಬರ್​ 7: ಕಾಫಿ (Coffee) ಕೊಡಗು (Kodagu) ಜಿಲ್ಲೆಯ ಪ್ರಮುಖ ಬೆಳೆಯಾಗಿದೆ. ಮಡಿಕೇರಿ ನಗರ ದಸರಾ ಸಮಿತಿವತಿಯಿಂದ ಈ ಬಾರಿ ಮಡಿಕೇರಿ ನಗರದ ಗಾಂಧಿ ಮೈದಾನದಲ್ಲಿ ಕಾಫಿ ದಸರಾ ಆಯೋಜಿಸಲಾಗಿದೆ. ಕಾಫಿ ದಸರಾದಲ್ಲಿ 20ಕ್ಕೂ ಅಧಿಕ ಬಗೆಯ ಕಾಫಿ ಪುಡಿಗಳು, ಕಾಫಿಯಿಂದ ತಯಾರಿಸಲಾಗಿರುವ ಚಾಕಲೇಟ್​ಗಳು, ಕಾಫಿ ಹಣ್ಣಿನ ವೈನ್​, ಐಸ್​ಕ್ರೀಂ ಹೀಗೆ ಹತ್ತು ಹಲವು ಬಗೆಯ ವೆರೈಟಿ ಉತ್ಪನ್ನಗಳು ಪ್ರದರ್ಶನಕ್ಕಿದ್ದವು.

ಇವುಗಳನ್ನು ಕಂಡ ಜನರು ಕಾಫಿಯಿಂದ ಇಷ್ಟೆಲ್ಲ ಪದಾರ್ಥ ತಯಾರಿಸಬಹುದಾ ಎಂದು ಅಚ್ಚರಿಪಟ್ಟರು. ಕಾಫಿ ಮೇಳ ಉದ್ಘಾಟಿಸಿ, ಬಳಿಕ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ, ಜಿಲ್ಲೆಯ ಕಾಫಿ ಉತ್ಪನ್ನಕ್ಕೆ ಉತ್ತಮ ಬೆಲೆ ಇದ್ದು ಕಾಫಿಯನ್ನು ವೈಜ್ಞಾನಿಕವಾಗಿ ಬೆಳೆಸಲು ತರೆಬೇತಿ ನಿಡಲಾಗುತ್ತದೆ ಎಂದರು.

ಇದನ್ನೂ ಓದಿ: ತಲೆ ಎತ್ತಿರುವ ಗ್ಲಾಸ್​ ಬ್ರಿಡ್ಜ್​ಗಳನ್ನು ಮುಚ್ಚುವಂತೆ ಆಗ್ರಹ, ಮಾಲೀಕರಿಗೆ ಸಂಕಷ್ಟ

ಕಾಫಿ ದಸರಾದಲ್ಲಿ ಜಿಲ್ಲೆಯ ನೂರಾರು ಕಾಫಿ ಬೆಳೆಗಾರರು ಭಾಗಿಯಾಗಿದ್ದರು. ತಮ್ಮ ವೈವಿಧ್ಯಮಯ ಕಾಫಿ ಉತ್ಪ್ಪನಗಳನ್ನು ಪ್ರದರ್ಶಿಸಿ ಮಾರಾಟ ಮಾಡಿದರು. ಮಹಿಳಾ ಕಾಫಿ ಉದ್ಯಮಿಗಳು ಕಾಫಿ ಬೀಜದಿಂದ ಉತ್ಪಾದಿಸಬಹುದಾದ ಹೊಸ ಹೊಸ ಉತ್ಪನ್ನಗಳನ್ನು ಪ್ರದರ್ಶಿಸಿದರು. ಕಾಫಿ ಐಸ್​ಕ್ರೀಂಗಳು ಪ್ರಮುಖ ಆಕರ್ಷೆಯಾಗಿದ್ದವು.

ಜೊತೆಗೆ ಕಾಫಿ ತೋಟದಲ್ಲಿ ಬಳಸುವ ಹತ್ತು ಹಲವು ಪರಿಕರಗಳನ್ನೂ ಕೂಡ ಪ್ರದರ್ಶನಕ್ಕೆ ಇಡಲಾಗಿತ್ತು. ಕಾಫಿಗಿಡದ ಕಾಂಡದಿಂದ ತಯಾರಿಸಲಾಗಿದ್ದ ವಿವಿಧ ಬಗೆಯ ಪಕ್ಷಿಗಳ ಕಲಾಕೃತಿಗಳು ಗಮನ ಸೆಳೆದವು. ಅಲ್ಲದೆ ಕಾಫಿ ಮೇಳಕ್ಕೆ ಆಗಮಿಸಿದವರಿಗೆ ದಿನವಿಡೀ ಬಿಸಿ ಬಿಸಿ ಕಾಫಿಯನ್ನು ಉಚಿತವಾಗಿ ವಿತರಿಸಲಾಯಿತು. ಸಂಜೆ ವೇಳೆಗೆ ಗಾಂಧಿ ಮೈದಾನದಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು