Sign In

By signing in or creating an account, you agree with Associated Broadcasting Company's Terms & Conditions and Privacy Policy.

Kodagu: ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಆಸ್ಪತ್ರೆಗೆ ದಾಖಲು

ಕಾಡಾನೆ ದಾಳಿಯಿಂದ ಕಾರ್ಮಿಕ ಗಂಭೀರ ಗಾಯಗೊಂಡಿರುವಂತಹ ಘಟನೆ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮದ ಮಸ್ಕಲ್ ಕಾಫಿತೋಟದಲ್ಲಿ ಘಟನೆ ನಡೆದಿದೆ.

Kodagu: ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಆಸ್ಪತ್ರೆಗೆ ದಾಖಲು
ಕಾಡಾನೆ (ಸಂಗ್ರಹ ಚಿತ್ರ)
Follow us
ಗಂಗಾಧರ​ ಬ. ಸಾಬೋಜಿ
|

Updated on:May 16, 2023 | 4:12 PM

ಕೊಡಗು: ಕಾಡಾನೆ ದಾಳಿಯಿಂದ (Elephant Attack) ಕಾರ್ಮಿಕ ಗಂಭೀರ ಗಾಯಗೊಂಡಿರುವಂತಹ ಘಟನೆ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮದ ಮಸ್ಕಲ್ ಕಾಫಿತೋಟದಲ್ಲಿ ಘಟನೆ ನಡೆದಿದೆ. ಬಾಬಿ(40) ಗಾಯಗೊಂಡ ಕಾರ್ಮಿಕ. ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಅಮ್ಮತ್ತಿ ಆಸ್ಪತ್ರೆಯಲ್ಲಿ ಗಾಯಾಳು ಬಾಬಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನೆ ಮಾಡಲಾಗಿದೆ. ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಕೂಡ ಮುಂದುವರೆದಿದ್ದು, ಸಕಲೇಶಪುರ ತಾಲ್ಲೂಕಿನ ಗುಳಗಳಲೆ ಹಾಗೂ ಹೆಬ್ಬನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಕಾಡಾನೆ ದಾಳಿಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದರು.

ಈ ಘಟನೆಯ ಬೆನ್ನಲ್ಲೇ ಹೆಬ್ಬನಹಳ್ಳಿ ಗ್ರಾಮದಲ್ಲಿ ಯುವಕನ ಮೇಲೆ ಒಂಟಿಸಲಗ ದಾಳಿ ಮಾಡಿತ್ತು. ಅಸ್ಸಾಂ ಮೂಲದ ಕಾರ್ಮಿಕ ಹಬೀದ್ (26) ಮೇಲೆ ಏಕಾಏಕಿ ಸಲಗ ದಾಳಿ ಮಾಡಿದ್ದು, ಅವರಿಗೆ ಗಂಭೀರ ಸ್ವರೂಪದ ಗಾಯಗೊಂಡಿದ್ದರು. ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಇದನ್ನೂ ಓದಿ: ಹಾಸನ: ಸಕಲೇಶಪುರದ ಗುಳಗಳಲೆಯಲ್ಲಿ ಕಾಡಾನೆ ದಾಳಿ, ಇಬ್ಬರಿಗೆ ಗಾಯ

ರೇಡಿಯೋ ಕಾಲರ್​ ಅಳವಡಿಕೆ

ಕಾಡಾನೆಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಹನಿ ಟ್ಯ್ರಾಪ್​​ ಮೊರೆ ಹೋಗಿದೆ. ಮೂರು ಹೆಣ್ಣಾನೆಗಳಿಗೆ ರೇಡಿಯೋ ಕಾಲರ್​ ಅಳವಡಿಸಲು ಅರಣ್ಯ ಇಲಾಖೆ ಮುಂದಾಗಿದೆ. ಹೆಣ್ಣಾನೆ ಮೋಹಕ್ಕೆ ಬಿದ್ದು, ಕಾಡಾನೆಗಳು ಸೆರೆ ಸಿಗುವ ಸಾಧ್ಯತೆ ಇದೆ. ಹೀಗಾಗಿ ಇಂದಿನಿಂದ ಮೇ.25 ರವರೆಗೆ ಸಕಲೇಶಪುರ, ಬೇಲೂರು ವಲಯಗಳಲ್ಲಿ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ನಡೆಯಲಿದೆ.

ರೇಡಿಯೋ ಕಾಲರ್ ಅಳವಡಿಕೆಗೆ ಸಾಕಾನೆಗಳನ್ನು ಬಳಸಿಕೊಳ್ಳಲಾಗಿದ್ದು, ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು ಮತ್ತು ಮಹೇಂದ್ರ ಹಾಗೂ ದುಬಾರೆ ಆನೆ ಶಿಬಿರದಿಂದ ಅಜ್ಜಯ್ಯ, ಪ್ರಶಾಂತ ಮತ್ತು ವಿಕ್ರಮ ಆನೆಗಳನ್ನು ಕರೆಸಿಕೊಳ್ಳಲಾಗಿದೆ.

ಇದನ್ನೂ ಓದಿ: ಹನಿ ಟ್ಯ್ರಾಪ್ ಮೂಲಕ​ ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ: ಹೆಣ್ಣಾನೆಗಳಿಗೆ ರೇಡಿಯೋ ಕಾಲರ್ ಅವಳವಡಿಕೆ

ಈ ಆನೆಗಳನ್ನು ತಾತ್ಕಾಲಿಕವಾಗಿ ಸ್ಥಾಪಿಸಿರುವ ಬೇಲೂರು ವಲಯದ, ಬಿಕ್ಕೋಡು ಸಸ್ಯಕ್ಷೇತ್ರದ ಕ್ಯಾಂಪ್‌ನಲ್ಲಿ ಇರಿಸಲಾಗಿದೆ. ಈ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸೂಚನೆಗಳನ್ನು ಪಾಲಿಸಿ ಸಾರ್ವಜನಿಕರು ಸಹಕರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದರು.

ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗೆ ಗ್ರಾಮದ ಬಳಿ ದೇವರಾಯ ಗೌಡ ಎಂಬುವರ ಮನೆ ಆವರಣದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಅರಣ್ಯ ಸಿಬ್ಬಂದಿಯೊಂದಿಗೆ ಉರಗ ಪ್ರೇಮಿ ಮಹೇಶ ನಾಯ್ಕ ಕಾಡಿಗೆ ಬಿಟ್ಟುಬಂದಿದ್ದಾರೆ. ಅಂಕೋಲಾ ಅರಣ್ಯ ವ್ಯಾಪ್ತಿಯಲ್ಲಿ ನಡೆದ ಘಟನೆ ಕಂಡುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:05 pm, Tue, 16 May 23

ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ