AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀರ್ಥೋದ್ಭವಕ್ಕೆ ತಲಕಾವೇರಿ ಸಕಲ ರೀತಿ ಸಜ್ಜು, ವಿಸ್ಮಯ ಕಣ್ತುಂಬಿಕೊಳ್ಳಲು ಜನ ಕಾತುರ

Talacauvery Theerthodbhava 2023: ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ತುಲಾ ಲಘ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಪ್ರಧಾನ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಮಧ್ಯ ರಾತ್ರಿ ತೀರ್ಥೋದ್ಭವವಾಗುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

ತೀರ್ಥೋದ್ಭವಕ್ಕೆ ತಲಕಾವೇರಿ ಸಕಲ ರೀತಿ ಸಜ್ಜು, ವಿಸ್ಮಯ ಕಣ್ತುಂಬಿಕೊಳ್ಳಲು ಜನ ಕಾತುರ
ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಸಿದ್ಧತೆ
Gopal AS
| Edited By: |

Updated on:Oct 17, 2023 | 9:06 PM

Share

ಕೊಡಗು, ಅ.17: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ (Talacauvery Theerthodbhava) ಕ್ಷಣಗಣನೆ ಆರಂಭವಾಗಿದೆ. ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಕಾವೇರಿ, ತೀರ್ಥರೂಪಿಣಿಯಾಗಿ ಆವಿರ್ಭವಿಸಲಿದ್ದಾಳೆ. ಕರ್ಕಾಟಕ ಲಗ್ನ ತುಲಾ ಸಂಕ್ರಮಣ ಪುಣ್ಯ ಕಾಲದಲ್ಲಿ ತೀರ್ಥೋದ್ಭವ ನಡೆಯಲಿದೆ. ಜೀವ ನದಿಯನ್ನ ಕಣ್ತುಂಬಿಸಿಕೊಳ್ಳಲು ಸಹಸ್ರಾರು ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.

ತುಲಾ ಮಾಸದ ಮೊದಲ ದಿನ ಅಂದರೆ ತುಲಾ ಸಂಕ್ರಮಣದ ದಿನ ಪ್ರತಿ ವರ್ಷ ಕಾವೇರಿ ಕೊಡಗಿನ ಮಡಿಕೇರಿ ತಾಲೂಕಿನ ತಲಕಾವೇರಿಯ ಭ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸಿ ಭಕ್ತರಿಗೆ ದರ್ಶನ ನೀಡುತ್ತಾಳೆ. ಈ ಪವಿತ್ರ ಘಳಿಗೆಯನ್ನು ಕಣ್ತುಂಬಿಸಿಕೊಳ್ಳಲು ದೇಶದ ಮೂಲೆ ಮೂಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ತುಲಾ ಲಘ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಪ್ರಧಾನ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಮಧ್ಯ ರಾತ್ರಿ ತೀರ್ಥೋದ್ಭವವಾಗುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹಾಗಾಗಿ ಬೆಳಗ್ಗೆಯಿಂದಲೇ ನಿತ್ಯ ಪೂಜಾಕರ್ಮಗಳು ನಡೆಯುತ್ತದೆ. ಸಂಜೆ 4 ಗಂಟೆಯ ಬಳಿಕ ಬ್ರಹ್ಮ ಕುಂಡಿಕೆ ಬಳಿಗೆ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿದೆ. ಕಲ್ಯಾಣಿಯ ಮೇಲ್ಭಾಗದಲ್ಲಿ ಭಕ್ತರಿಗೆ ಪವಿತ್ರ ತೀರ್ಥ ಹಂಚಲು ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ:Bhagandeshwara e-Prasada: ಇನ್ನು ಮನೆ ಬಾಗಿಲಿಗೇ ಬರಲಿದೆ ಭಗಂಡೇಶ್ವರ, ತಲಕಾವೇರಿ ದೇಗುಲಗಳ ಪ್ರಸಾದ

ಇಂದು ಸಂಜೆ 4 ಗಂಟೆಯ ಬಳಿಕ ಭಾಗಮಂಡಲದಿಂದ ತಲಕಾವೇರಿಗೆ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಆದರೆ ಭಕ್ತರ ಪ್ರಯಾಣಕ್ಕೆ ಉಚಿತ ಕೆಎಸ್​ಆರ್​ಟಿಸಿ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರ ಸ್ವಾಗತಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ನಿಯಂತ್ರಣಕ್ಕೆ ಬ್ಯಾರಿಕೇಡ್​ಗಳನ್ನ ಹಾಕಲಾಗಿದೆ. ಅಲ್ಲಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಕಟ್ಟೆಚ್ಚರವಹಿಸಲಾಗುತ್ತದೆ. ಭದ್ರತೆಗಾಗಿ ಕೆಎಸ್​ಆರ್​ಪಿ ಮತ್ತು ಡಿಎಆರ್​ ಪೊಲೀಸರನ್ನ ನಿಯೋಜಿಸಲಾಗಿದೆ. ತಲಕಾವೇರಿಗೆ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸಲಾದೆ. ಭಕ್ತರಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ. ಅಲ್ಲದೆ ಈ ಬಾರಿ ತೀರ್ಥ ಕೊಂಡೊಯ್ಯಲು ಪ್ಲಾಸ್ಟಿಕ್ ಬಿಂದಿಗೆ ಬಾಟಲಿ ಡಬ್ಬಗಳನ್ನು ತರುವುದನ್ನು ನಿಷೇಧಿಸಲಾಗಿದೆ.

ಜಿಲ್ಲಾಡಳಿತ, ಪೊಲೀಸ್​ ಇಲಾಖೆ ಮತ್ತು ದೇವಸ್ಥಾನ ಸಮಿತಿ ಒಟ್ಟಾಗಿ ಕಾವೇರಿ ಜಾತ್ರೆಯನ್ನು ಯಶಸ್ಸುಗೊಳಿಸಲು ಸಜ್ಜಾಗಿದೆ. ಆದರೆ ಕಳೆದೆರಡು ದಿನಗಳಿಂದ ಮಧ್ಯಾಹ್ನದ ವೇಳೆ ತಲಕಾವೇರಿಯಲ್ಲಿ ಮಳೆ ಅಬ್ಬರಿಸುತ್ತಿದೆ. ಹಾಗಾಗಿ ತೀರ್ಥೋದ್ಭವದ ವೇಳೆ ಮಳೆ ಬಂದರೆ ಸ್ವಲ್ಪ ಸಮಸ್ಯೆಯಾಗುವ ಸಾಧ್ಯತೆ ಇದೆ. ಜೀವನದಿ ತೀರ್ಥ ರೂಪದಲ್ಲಿ ದರ್ಶನ ನೀಡುವ ಈ ವಿಸ್ಮಯ ವೀಕ್ಷಿಸಲು ಜಿಲ್ಲಾ ಉಸ್ತುವಾರಿ ಸಚಿವ ಎನ್ ಬೋಸರಾಜು, ಕಾವೇರಿಕೊಳ್ಳದ ಶಾಸಕರು, ಸಂಸದರು ಸೇರಿದಂತೆ ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ.

ಕೊಡುಗುಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:51 am, Tue, 17 October 23