AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಹೊಳೆ ಅಭಯಾರಣ್ಯದಲ್ಲೊಂದು ಶಿಕ್ಷಣ ಕ್ರಾಂತಿ, ಶಿಕ್ಷಣ ವಂಚಿತ ಹಾಡಿ ಮಕ್ಕಳಿಗೆ ಮನೆಯಂಗಳದಲ್ಲೇ ಪಾಠ

ಕಾಡಿನ ಮಕ್ಕಳಿಗೆ ಶಿಕ್ಷಣ ಅನ್ನೋದು ಬಹಳ ದೂರ. ಕಾಡಂಚಲ್ಲಿರೋ ಮಕ್ಕಳಿಗೆ ಅಲ್ಪ ಸ್ವಲ್ಪವಾದ್ರೂ ಶಿಕ್ಷಣ ಸಿಗ್ತಿತ್ತು. ಆದ್ರೆ ಕೊರೊನಾದಿಂದ ಅದೂ ಇಲ್ಲದಂತಾಗಿದೆ. ಆದ್ರೆ ಇದೀಗ ಹಾಡಿ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕಾಗಿ ಗಿರಿಜನ ಅಭಿವೃದ್ಧಿ ಇಲಾಖೆ ಹೊಸ ಐಡಿಯಾ ಮಾಡಿದೆ.

ನಾಗರಹೊಳೆ ಅಭಯಾರಣ್ಯದಲ್ಲೊಂದು ಶಿಕ್ಷಣ ಕ್ರಾಂತಿ, ಶಿಕ್ಷಣ ವಂಚಿತ ಹಾಡಿ ಮಕ್ಕಳಿಗೆ ಮನೆಯಂಗಳದಲ್ಲೇ ಪಾಠ
ಕಾಡಂಚಲ್ಲಿರೋ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು
TV9 Web
| Edited By: |

Updated on: Sep 15, 2021 | 8:13 AM

Share

ಕೊಡಗು: ಶಿಕ್ಷಣದಿಂದ ವಂಚಿತರಾಗಿರೋ ಕೊಡಗು-ಮೈಸೂರು ಗಡಿಯಲ್ಲಿರೋ ನಾಗರಹೊಳೆ ಅಭಯಾರಣ್ಯದಲ್ಲಿರೋ ಹಾಡಿ ಮಕ್ಕಳಿಗೆ ಪಾಠ ಹೇಳಿಕೊಡಲು ಗಿರಿಜನ ಅಭಿವೃದ್ಧಿ ಇಲಾಖೆ ಹೊಸ ಪ್ಲ್ಯಾನ್ ಮಾಡಿದೆ. ಐಟಿಡಿಪಿ ತಾಲೂಕು ಅಧಿಕಾರಿ ಗುರುಶಾಂತಪ್ಪ ನೇತೃತ್ವದಲ್ಲಿ ಹಾಡಿಯಲ್ಲಿ ಶಿಕ್ಷಣ ಕ್ರಾಂತಿಗೆ ಯೋಜನೆ ಹಾಕಲಾಗಿದೆ. ಕಾಡಿನೊಳಗೆ ಇರೋ ಹಾಡಿಗೆ ತೆರಳೋ ಶಿಕ್ಷಕರು ಹಾಡಿಯಲ್ಲಿರೋ ಮನೆ ಅಂಗಳದಲ್ಲೇ ಮಕ್ಕಳಿಗೆ ಪಾಠ ಹೇಳಿಕೊಡ್ತಾರೆ.

ಗಿರಿಜನ ಅಭಿವೃದ್ಧಿ ಇಲಾಖೆ ಈ ಯೋಜನೆಯಿಂದ ಕಾಡಿನೊಳಗೆ ಇರೋ ಹಾಡಿಯ ಮಕ್ಕಳಿಗೆ ತಮ್ಮದೇ ವಾತಾವರಣದಲ್ಲಿ ಕಲಿಯಲು ಸುಲಭವಾಗಲಿದೆ. ಪ್ರಕೃತಿಯ ಜೊತೆಗೆ ಆಟ-ಪಾಠದೊಂದಿಗೆ ಕಲಿಯೋ ಮಕ್ಕಳು ಶಿಕ್ಷಣದಿಂದ ವಂಚಿತರಾಗೋದು ತಪ್ಪುತ್ತೆ. ಹೀಗೆ ವಿರಾಜಪೇಟೆ ತಾಲೂಕಿನಾದ್ಯಂತ 300 ಕ್ಕೂ ಅಧಿಕ ಹಾಡಿ ಮಕ್ಕಳಿದ್ದು ಅವರಿಗೆಲ್ಲಾ ಶಿಕ್ಷಣ ಕಲಿಸಲಾಗ್ತಾ ಇದೆ. ವಿಪರ್ಯಾಸ ಅಂದ್ರೆ ಈ ಮಕ್ಕಳ ಬಳಿ ಆಧುನಿಕ ಮೊಬೈಲ್ಗಳಿಲ್ಲ. ಹಾಗಾಗಿ ಆನ್ಲೈನ್ ಕ್ಲಾಸ್ಗಳು ನಡೆಯುವುದೇ ಇಲ್ಲ. ಇದನ್ನು ಸರಿಪಡಿಸಲು ಗಿರಿಜನ ಕಲ್ಯಾಣ ಇಲಾಖೆ ಶಿಕ್ಷಕರನ್ನೇ ಹಾಡಿಗೆ ಕಳುಹಿಸಿ ಪಾಠ ಕಲಿಸುತ್ತಿದೆ.

ಕೊರೊನಾದಿಂದಾಗಿ ಶಾಲೆಯಿಂದ ದೂರ ಉಳಿದಿರೋ ಹಾಡಿ ಮಕ್ಕಳಿಗೆ ಆನ್ಲೈನ್ ಶಿಕ್ಷಣ ದೂರದ ಮಾತು. ಹೀಗಾಗಿ ಗಿರಿಜನ ಕಲ್ಯಾಣ ಇಲಾಖೆ ಕೈಗೊಂಡಿರೋ ಈ ಯೋಜನೆಗೆ ಎಲ್ಲೆಡೆಯಿಂದ ಪ್ರಶಂಸೆ ಕೇಳಿಬರ್ತಿದೆ.

education to haadi community

ಕಾಡಂಚಲ್ಲಿರೋ ಮಕ್ಕಳು

education to haadi community

ಗಿರಿಜನ ಅಭಿವೃದ್ಧಿ ಇಲಾಖೆ ಹೊಸ ಐಡಿಯಾ

ಇದನ್ನೂ ಓದಿ: ಬೋಟಿನಲ್ಲಿ ಪಾಠ ಶಾಲೆ; ವರ್ಷಕ್ಕೆ 6 ತಿಂಗಳು ಪ್ರವಾಹದಲ್ಲಿ ಮುಳುಗುವ ಪ್ರದೇಶದಲ್ಲಿ ಯುವಕರಿಂದ ‘ಶಿಕ್ಷಣದ ನಾವೆಗೆ’ ಚಾಲನೆ

ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ; ಪೊಲೀಸರ ಲಾಠಿಚಾರ್ಜ್ ವೇಳೆ ಇಬ್ಬರಿಗೆ ಗಾಯ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!