AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೆರಡು ಬಾರಿ ಸೆರೆ, ಮನೆಗಳ ಬಾಗಿಲು ಮುರಿದು ಪುಂಡಾಟ: ಕಾದಾಟದಲ್ಲಿ ಮೃತಪಟ್ಟ ಮಾರ್ತಾಂಡ ಆನೆಗಿತ್ತು ಭಯಂಕರ ಇತಿಹಾಸ

ಮಡಿಕೇರಿಯ ದುಬಾರೆ ಆನೆ ಶಿಬಿರದಲ್ಲಿ, ಕಂಜನ್ ಆನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಮೇ 19ರಂದು ಸಾವನ್ನಪ್ಪಿದ ಮಾರ್ತಾಂಡ ಆನೆಯನ್ನು ಮೂರು ವರ್ಷಗಳ ಹಿಂದೆ ಇದೇ ದಿನ ಸೆರೆಹಿಡಿಯಲಾಗಿತ್ತು. ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಂತಾಪ ಸೂಚಿಸಿದ್ದು, ಘಟನೆ ಬೆನ್ನಲ್ಲೇ ಪ್ರವಾಸಿ ಮಾರ್ಗಸೂಚಿ ಪಾಲಿಸಲು ಸೂಚಿಸಲಾಗಿದೆ.

ಎರಡೆರಡು ಬಾರಿ ಸೆರೆ, ಮನೆಗಳ ಬಾಗಿಲು ಮುರಿದು ಪುಂಡಾಟ: ಕಾದಾಟದಲ್ಲಿ ಮೃತಪಟ್ಟ ಮಾರ್ತಾಂಡ ಆನೆಗಿತ್ತು ಭಯಂಕರ ಇತಿಹಾಸ
ಕಾದಾಟದಲ್ಲಿ ಮೃತಪಟ್ಟ ಮಾರ್ತಾಂಡ ಆನೆಗಿತ್ತು ಭಯಂಕರ ಇತಿಹಾಸ
ಗೋಪಾಲ್​ ಸೋಮಯ್ಯ
| Edited By: |

Updated on: May 19, 2026 | 2:41 PM

Share

ಮಡಿಕೇರಿ, ಮೇ 19: ಕುಶಾಲನಗರದ ದುಬಾರೆ ಕ್ಯಾಂಪ್​​ನಲ್ಲಿ ಕಾದಾಟದ ವೇಳೆ ಆನೆ ಕಂಜನ್​​ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಆನೆ ಮಾರ್ತಾಂಡ ಚಿಕಿತ್ಸೆ ಫಲಿಸದೆ ಇಂದು (ಮೇ 19  ಮೃತಪಟ್ಟಿದೆ. ಮೂರು ವರ್ಷಗಳ ಹಿಂದೆ ಮೇ 19ರಂದೇ ಮಾರ್ತಾಂಡನನ್ನು ಸೆರೆಹಿಡಿಯಲಾಗಿತ್ತು.  ಕಾಕತಾಳೀಯ ಎಂಬಂತೆ ಅದೇ ತಾರೀಕಿನಂದು ಆನೆಯೀಗ ಮೃತಪಟ್ಟಿದೆ. 2023ರಲ್ಲಿ ಸೆರೆಯಾಗಿ ಪಳಗಿದ ಬಳಿಕ ಮಾರ್ತಾಂಡ ಶಾಂತ ಸ್ವಭಾವದಿಂದ ಇರುತ್ತಿತ್ತು ಎನ್ನಲಾಗಿದೆ. ಡಾ‌. ಚಿಟ್ಟಿಯಪ್ಪ ನೇತೃತ್ವದಲ್ಲಿ ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ದುಬಾರೆ ಅರಣ್ಯದಲ್ಲಿಯೇ ಅಂತ್ಯ ಸಂಸ್ಕಾರಕ್ಕೆ ನಿರ್ಧರಿಸಲಾಗಿದೆ.

2022ರ ಜೂನ್ 29ರಂದು ಸಕಲೇಶಪುರ ತಾಲೂಕಿನ ಕರೆಗರ್ಜೆ ಬಳಿ ಮಾರ್ತಾಂಡ ಆನೆಯನ್ನು ಮೊದಲ ಬಾರಿ ಅರಣ್ಯ ಇಲಾಖೆ ಸೆರೆ ಹಿಡಿತ್ತು. ಆ ಬಳಿಕ ರೇಡಿಯೊ ಕಾಲರ್ ಅಳವಡಿಸಿ ಬಂಡಿಪುರಕ್ಕೆ ಬಿಡಲಾಗಿತ್ತು. ಒಂದೇ ತಿಂಗಳಲ್ಲಿ ನೂರಾರು ಕಿಲೋ ಮೀಟರ್ ಸಾಗಿ ಮರಳಿ ಹಾಸನಕ್ಕೆ ಮರಳಿದ್ದ ಮಾರ್ತಾಂಡ, ಕೆಲ ತಿಂಗಳು ಸೈಲೆಂಟ್ ಆಗಿ ಮರೆಯಾಗಿತ್ತು. ಆ ಬಳಿಕ ಭತ್ತ ಅರಸಿ ಊರೂರು ಅಲೆಯಲು ಶುರುಮಾಡಿದ್ದು, ಮನೆಯ ಬಾಗಿಲು ಮತ್ತು ಕಿಟಕಿಗಳನ್ನು ಮುರಿದು ಭತ್ತ ತಿನ್ನಲು ಶುರು ಮಾಡಿತ್ತು. ಹೀಗಾಗಿ ಎರಡನೇ ಬಾರಿಗೆ 2023ರ ಮೇ 19ರಂದು ಮಾರ್ತಾಂಡ ಆನೆಯನ್ನು ಸಕಲೇಶಪುರ ತಾಲೂಕಿನ ಒಸ್ಸೂರು ಬಳಿಯ ಕಾಫಿತೋಟದಲ್ಲಿ ಸೆರೆ ಹಿಡಿಯಲಾಗಿತ್ತು.

ಇದನ್ನೂ ಓದಿ: ಕಾದಾಟದ ವೇಳೆ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಚಿಕಿತ್ಸೆ ಫಲಿಸದೆ ಸಾವು

ಈಶ್ವರ ಖಂಡ್ರೆ ಸಂತಾಪ

ದುಬಾರೆ ಆನೆ ಶಿಬಿರದಲ್ಲಿ ಮಾರ್ತಾಂಡ ಆನೆ ಮೃತಪಟ್ಟಿರುವ ಬಗ್ಗೆ ಅರಣ್ಯ ಸಚಿವ ಈಶ್ವರ್​​ ಖಂಡ್ರೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅನಿರೀಕ್ಷಿತವಾದ ಮತ್ತು ಊಹಿಸಲೂ ಆಗದ ದುರ್ಘಟನೆಯಲ್ಲಿ ಒಬ್ಬ ಪ್ರವಾಸಿ ಮಹಿಳೆ ಮತ್ತು ಒಂದು ಆನೆ ಮೃತಪಟ್ಟಿರುವುದು ಅತ್ಯಂತ ದುಃಖದ ಸಂಗತಿ . ಹಾಸನ ಜಿಲ್ಲೆಯಲ್ಲಿ ಸೆರೆ ಹಿಡಿಯಲಾಗಿದ್ದ ಮಾರ್ತಾಂಡ ಆನೆ 4,500 ಕೆ.ಜಿ. ತೂಕವಿತ್ತು ಎಂದು ತಿಳಿಸಿದ್ದಾರೆ. ಅಲ್ಲದೆ ಹಾಸನ ಜಿಲ್ಲೆ ಯಸಳೂರಿನ ಬಳಿ 2014ರಲ್ಲಿ ಸೆರೆ ಹಿಡಿಯಲಾಗಿದ್ದ 26 ವರ್ಷದ ಕಂಜನ್ ಆನೆ 3 ಬಾರಿ ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು. ಆದರೆ ಇನ್ನು ಮುಂದೆ ದಸರಾಗೆ ಈ ಆನೆಯನ್ನು ಬಳಸದಂತೆ ಸೂಚಿಸಿರುವುದಾಗಿಯೂ ಅವರು ತಿಳಿಸಿದ್ದಾರೆ.

ಮಾರ್ಗಸೂಚಿ ಕಡ್ಡಾಯ ಪಾಲನೆಗೆ ಸೂಚನೆ

ಇನ್ನು ದುಬಾರೆಯಲ್ಲಿ ಪ್ರವಾಸಿ‌ ಮಹಿಳೆ ಮತ್ತು ಸಾಕಾನೆ ಸಾವು ವಿಚಾರ ಸಂಬಂಧ ಮಾರ್ಗಸೂಚಿ ಕಡ್ಡಾಯ ಪಾಲನೆಗೆ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಸೂಚಿಸಿದ್ದಾರೆ. ಘಟನೆ ಕುರಿತು ಜಿಲ್ಲಾಡಳಿತದ ಜೊತೆ ಸಚಿವರು ಚರ್ಚಿಸಿದ್ದು, ಪ್ರವಾಸಿ ಮಾರ್ಗಸೂಚಿಯಲ್ಲಿ ಲೋಪವಾಗಿದೆಯೇ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರವಾಸಿಗರು ಅರಣ್ಯ ಇಲಾಖೆಯ ನಿಯಮಗಳನ್ನು ಕಡ್ಡಾಯ ಪಾಲಿಸಬೇಕು. ಕಾಡು ಪ್ರಾಣಿಗಳಿಂದ ಅಂತರ ಕಾಯ್ದುಕೊಳ್ಳಬೇಕು. ಪ್ರವಾಸಿಗರ ಸುರಕ್ಷತೆ ಬಗ್ಗೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ