AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಲವ್ಯ ಪ್ರಶಸ್ತಿ ವಿಜೇತೆ, ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ ಏಷ್ಯಾ ಕಪ್ ಟೂರ್ನಮೆಂಟ್​ಗೆ ಆಯ್ಕೆ

ಸುಂಟಿಕೊಪ್ಪ ನಿವಾಸಿ ಪಟ್ಟೆಮನೆ ನವನೀತಾ ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದು ಏಷ್ಯಾ ಕಪ್ ಟೂರ್ನಮೆಂಟ್​ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಏಕಲವ್ಯ ಪ್ರಶಸ್ತಿ ವಿಜೇತೆ, ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ ಏಷ್ಯಾ ಕಪ್ ಟೂರ್ನಮೆಂಟ್​ಗೆ ಆಯ್ಕೆ
ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ
TV9 Web
| Edited By: ಆಯೇಷಾ ಬಾನು|

Updated on:Sep 16, 2021 | 10:40 AM

Share

ಮಡಿಕೇರಿ: ರಾಷ್ಟ್ರೀಯ ಕ್ರೀಡಾ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ. ಇದೀಗ ಇವರ ಸಾಲಿಗೆ ಕೊಡಗಿನ ಮತ್ತೊಬ್ಬ ಕ್ರೀಡಾಪಟು ಸೇರ್ಪಡೆಯಾಗಿದ್ದಾರೆ. ಸುಂಟಿಕೊಪ್ಪ ನಿವಾಸಿ ಪಟ್ಟೆಮನೆ ನವನೀತಾ ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದು ಏಷ್ಯಾ ಕಪ್ ಟೂರ್ನಮೆಂಟ್​ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದೇ 27 ರಿಂದ ಅಕ್ಟೋಬರ್ 3 ರವರೆಗೆ ಜೋರ್ಡಾನ್​ನ ಅಮನ್​ನಲ್ಲಿ ಏಷ್ಯಾಕಪ್​ ಪಂದ್ಯಾವಳಿ ನಡೆಯಲಿದೆ. ಭಾರತ ಕೊರಿಯಾ ಜಪಾನ್ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಎ ಗುಂಪಿನಲ್ಲಿವೆ. ಭಾರತ ತಂಡ ತನ್ನ ಮೊದಲ ಪಂದ್ಯವನ್ನು ತಾ. 27 ರಂದು ಜಪಾನ್ ವಿರುದ್ಧ ಸೆಣಸಲಿದೆ. ಮಡಿಕೇರಿ ತಾಲೂಕಿನ ಸುಂಟಿಕೊಪ್ಪ ಬಳಿಯ ಗದ್ದೆಹಳ್ಳ ನಿವಾಸಿಯಾಗಿರೋ ಪಟ್ಟೆಮನೆ ಉದಯ್​ಕುಮಾರ್​ ಗಿರಿಜಾ ದಂಪತಿಯ ಪುತ್ರಿಯಾಗಿರೋ ನವನೀತಾ ಸದ್ಯ ರೈಲ್ವೇ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದಾರೆ.

ಇವರು ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿಗೂ ಭಾಜನರಾಗಿದ್ದಾರೆ. ಇದೇ ಸುಂಟಿಕೊಪ್ಪ ಊರಿನ ಅಂಕಿತಾ ಸುರೇಶ್​ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಹಾಕಿ ತಂಡದ ಸಹಾಯಕ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ: ತೊಡೆಗೆ ಗಾಯವಾಗಿರದಿದ್ದರೆ ಟೊಕಿಯೋ ಒಲಂಪಿಕ್ಸ್​ನಲ್ಲಿ ಬಜರಂಗ್ ಪೂನಿಯಾ ಚಿನ್ನ ಗೆಲ್ಲುವುದನ್ನು ಯಾರೂ ತಡೆಯುತ್ತಿರಲಿಲ್ಲ!

Published On - 10:39 am, Thu, 16 September 21

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ