AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಲವ್ಯ ಪ್ರಶಸ್ತಿ ವಿಜೇತೆ, ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ ಏಷ್ಯಾ ಕಪ್ ಟೂರ್ನಮೆಂಟ್​ಗೆ ಆಯ್ಕೆ

ಸುಂಟಿಕೊಪ್ಪ ನಿವಾಸಿ ಪಟ್ಟೆಮನೆ ನವನೀತಾ ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದು ಏಷ್ಯಾ ಕಪ್ ಟೂರ್ನಮೆಂಟ್​ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಏಕಲವ್ಯ ಪ್ರಶಸ್ತಿ ವಿಜೇತೆ, ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ ಏಷ್ಯಾ ಕಪ್ ಟೂರ್ನಮೆಂಟ್​ಗೆ ಆಯ್ಕೆ
ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ
TV9 Web
| Updated By: ಆಯೇಷಾ ಬಾನು|

Updated on:Sep 16, 2021 | 10:40 AM

Share

ಮಡಿಕೇರಿ: ರಾಷ್ಟ್ರೀಯ ಕ್ರೀಡಾ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ. ಇದೀಗ ಇವರ ಸಾಲಿಗೆ ಕೊಡಗಿನ ಮತ್ತೊಬ್ಬ ಕ್ರೀಡಾಪಟು ಸೇರ್ಪಡೆಯಾಗಿದ್ದಾರೆ. ಸುಂಟಿಕೊಪ್ಪ ನಿವಾಸಿ ಪಟ್ಟೆಮನೆ ನವನೀತಾ ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದು ಏಷ್ಯಾ ಕಪ್ ಟೂರ್ನಮೆಂಟ್​ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದೇ 27 ರಿಂದ ಅಕ್ಟೋಬರ್ 3 ರವರೆಗೆ ಜೋರ್ಡಾನ್​ನ ಅಮನ್​ನಲ್ಲಿ ಏಷ್ಯಾಕಪ್​ ಪಂದ್ಯಾವಳಿ ನಡೆಯಲಿದೆ. ಭಾರತ ಕೊರಿಯಾ ಜಪಾನ್ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಎ ಗುಂಪಿನಲ್ಲಿವೆ. ಭಾರತ ತಂಡ ತನ್ನ ಮೊದಲ ಪಂದ್ಯವನ್ನು ತಾ. 27 ರಂದು ಜಪಾನ್ ವಿರುದ್ಧ ಸೆಣಸಲಿದೆ. ಮಡಿಕೇರಿ ತಾಲೂಕಿನ ಸುಂಟಿಕೊಪ್ಪ ಬಳಿಯ ಗದ್ದೆಹಳ್ಳ ನಿವಾಸಿಯಾಗಿರೋ ಪಟ್ಟೆಮನೆ ಉದಯ್​ಕುಮಾರ್​ ಗಿರಿಜಾ ದಂಪತಿಯ ಪುತ್ರಿಯಾಗಿರೋ ನವನೀತಾ ಸದ್ಯ ರೈಲ್ವೇ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದಾರೆ.

ಇವರು ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿಗೂ ಭಾಜನರಾಗಿದ್ದಾರೆ. ಇದೇ ಸುಂಟಿಕೊಪ್ಪ ಊರಿನ ಅಂಕಿತಾ ಸುರೇಶ್​ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಹಾಕಿ ತಂಡದ ಸಹಾಯಕ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ: ತೊಡೆಗೆ ಗಾಯವಾಗಿರದಿದ್ದರೆ ಟೊಕಿಯೋ ಒಲಂಪಿಕ್ಸ್​ನಲ್ಲಿ ಬಜರಂಗ್ ಪೂನಿಯಾ ಚಿನ್ನ ಗೆಲ್ಲುವುದನ್ನು ಯಾರೂ ತಡೆಯುತ್ತಿರಲಿಲ್ಲ!

Published On - 10:39 am, Thu, 16 September 21

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?