ಏಕಲವ್ಯ ಪ್ರಶಸ್ತಿ ವಿಜೇತೆ, ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ ಏಷ್ಯಾ ಕಪ್ ಟೂರ್ನಮೆಂಟ್​ಗೆ ಆಯ್ಕೆ

ಸುಂಟಿಕೊಪ್ಪ ನಿವಾಸಿ ಪಟ್ಟೆಮನೆ ನವನೀತಾ ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದು ಏಷ್ಯಾ ಕಪ್ ಟೂರ್ನಮೆಂಟ್​ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಏಕಲವ್ಯ ಪ್ರಶಸ್ತಿ ವಿಜೇತೆ, ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ ಏಷ್ಯಾ ಕಪ್ ಟೂರ್ನಮೆಂಟ್​ಗೆ ಆಯ್ಕೆ
ಕೊಡಗಿನ ಸ್ಟಾರ್​ ಬಾಸ್ಕೆಟ್​​ಬಲ್ ಆಟಗಾರ್ತಿ ನವನೀತಾ
Follow us
| Updated By: ಆಯೇಷಾ ಬಾನು

Updated on:Sep 16, 2021 | 10:40 AM

ಮಡಿಕೇರಿ: ರಾಷ್ಟ್ರೀಯ ಕ್ರೀಡಾ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ. ಇದೀಗ ಇವರ ಸಾಲಿಗೆ ಕೊಡಗಿನ ಮತ್ತೊಬ್ಬ ಕ್ರೀಡಾಪಟು ಸೇರ್ಪಡೆಯಾಗಿದ್ದಾರೆ. ಸುಂಟಿಕೊಪ್ಪ ನಿವಾಸಿ ಪಟ್ಟೆಮನೆ ನವನೀತಾ ರಾಷ್ಟ್ರೀಯ ಬಾಸ್ಕೆಟ್ ಬಾಲ್ ತಂಡಕ್ಕೆ ಆಯ್ಕೆಯಾಗಿದ್ದು ಏಷ್ಯಾ ಕಪ್ ಟೂರ್ನಮೆಂಟ್​ನಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದೇ 27 ರಿಂದ ಅಕ್ಟೋಬರ್ 3 ರವರೆಗೆ ಜೋರ್ಡಾನ್​ನ ಅಮನ್​ನಲ್ಲಿ ಏಷ್ಯಾಕಪ್​ ಪಂದ್ಯಾವಳಿ ನಡೆಯಲಿದೆ. ಭಾರತ ಕೊರಿಯಾ ಜಪಾನ್ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಎ ಗುಂಪಿನಲ್ಲಿವೆ. ಭಾರತ ತಂಡ ತನ್ನ ಮೊದಲ ಪಂದ್ಯವನ್ನು ತಾ. 27 ರಂದು ಜಪಾನ್ ವಿರುದ್ಧ ಸೆಣಸಲಿದೆ. ಮಡಿಕೇರಿ ತಾಲೂಕಿನ ಸುಂಟಿಕೊಪ್ಪ ಬಳಿಯ ಗದ್ದೆಹಳ್ಳ ನಿವಾಸಿಯಾಗಿರೋ ಪಟ್ಟೆಮನೆ ಉದಯ್​ಕುಮಾರ್​ ಗಿರಿಜಾ ದಂಪತಿಯ ಪುತ್ರಿಯಾಗಿರೋ ನವನೀತಾ ಸದ್ಯ ರೈಲ್ವೇ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದಾರೆ.

ಇವರು ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿಗೂ ಭಾಜನರಾಗಿದ್ದಾರೆ. ಇದೇ ಸುಂಟಿಕೊಪ್ಪ ಊರಿನ ಅಂಕಿತಾ ಸುರೇಶ್​ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತ ಹಾಕಿ ತಂಡದ ಸಹಾಯಕ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ: ತೊಡೆಗೆ ಗಾಯವಾಗಿರದಿದ್ದರೆ ಟೊಕಿಯೋ ಒಲಂಪಿಕ್ಸ್​ನಲ್ಲಿ ಬಜರಂಗ್ ಪೂನಿಯಾ ಚಿನ್ನ ಗೆಲ್ಲುವುದನ್ನು ಯಾರೂ ತಡೆಯುತ್ತಿರಲಿಲ್ಲ!

Published On - 10:39 am, Thu, 16 September 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!