AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ನಂಬಿ ಜೋಳ ಬೆಳೆದ ರೈತರು ಕಂಗಾಲು; ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತರ ಮನವಿ

ಕಳೆದ ವರ್ಷದ ಮಳೆ ಮತ್ತು ಜೋಳದ ಬೆಲೆಯನ್ನು ನಂಬಿ ಈ ವರ್ಷವೂ ಜೋಳ ಬೆಳೆದ ಕೊಡಗಿನ ರೈತರು ಇದೀಗ ಕೈ ಸುಟ್ಟು ಕೊಂಡಿದ್ದಾರೆ. ಸಹಸ್ರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆ, ಫಸಲು ಬಿಡದೆ ನಿಷ್ಪ್ರಯೋಜಕವಾಗಿದೆ. ಹಾಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದ ರೈತ ಇದೀಗ ಆಕಾಶ ನೋಡುವಂತಾಗಿದೆ.

ಮಳೆ ನಂಬಿ ಜೋಳ ಬೆಳೆದ ರೈತರು ಕಂಗಾಲು; ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತರ ಮನವಿ
ಕೊಡಗಿನಲ್ಲಿ ಬೆಳೆ ನಾಶ
Gopal AS
| Edited By: |

Updated on: Oct 04, 2023 | 5:08 PM

Share

ಕೊಡಗು, ಅ.04: ಜಿಲ್ಲೆಯ ಸೋಮವಾರಪೇಟೆ(Somwarpet) ಮತ್ತು ಕುಶಾಲನಗರ (Kushalnagar) ಪ್ರದೇಶದಲ್ಲಿ ಜೋಳ ಬೆಳೆದ ರೈತರ ಪರಿಸ್ಥಿತಿ ಹೇಳತೀರದಂತಾಗಿದೆ. ಹೌದು, ಈ ಭಾಗದಲ್ಲಿ ಸುಮಾರು 4000 ಹೆಕ್ಟೇರ್ ಪ್ರದೇಶದಲ್ಲಿ ಜೋಳ(Maize) ಬೆಳೆಯಲಾಗಿದೆ. ಒಂದಷ್ಟು ಮಂದಿಗೆ ನೀರಿನ ಸೌಲಭ್ಯವಿದ್ದರೆ, ಬಹುತೇಕ ಮಂದಿ ಮಳೆಯನ್ನೇ ಆಶ್ರಯಿಸಿದ್ದಾರೆ. ಆದ್ರೆ, ಈ ಬಾರಿ ಆಗಸ್ಟ್​​ನಲ್ಲಿ ಮಳೆ ಇಲ್ಲದ್ದರಿಂದ ಇದೀಗ ಜೋಳ, ಫಸಲು ಬಿಟ್ಟಿಲ್ಲ. ಇದರಿಂದ ಈ ಭಾಗದಲ್ಲಿ ಶೇಕಡಾ 50 ರಷ್ಟು ಬೆಳೆ ನಾಶವಾಗಿದೆ ಎಂದು ರೈತರು ಅಳಲನ್ನು ತೋಡಿಕೊಂಡಿದ್ದಾರೆ.

ಸಾಮಾನ್ಯವಾಗಿ ಕೊಡಗಿನಲ್ಲಿ ಆಗಸ್ಟ್​ ತಿಂಗಳಲ್ಲಿ ಉತ್ತಮ ಮಳೆಯಾಗುತ್ತದೆ. ಇದೇ ಮಳೆಯಿಂದ ಕೃಷಿ ಚಟುವಟಿಕೆಗಳು ನಡೆಯುವುದಲ್ಲದೆ, ಅಂತರ್ಜಲವೂ ವೃದ್ಧಿಸುತ್ತದೆ. ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ಉತ್ತಮ ಮಳೆಯಾಗಿತ್ತಲ್ಲದೆ, ಬೆಲೆಯೂ ಉತ್ತಮವಾಗಿ ರೈತರಿಗೆ ಸಾಕಷ್ಟು ಲಾಭ ಬಂದಿತ್ತು. ಆದ್ರೆ, ಈ ವರ್ಷ ಆಗಸ್ಟ್ ​ತಿಂಗಳಲ್ಲಿ ಮಳೆಯ ಸುಳಿವೇ ಇಲ್ಲ. ಹಾಗಾಗಿ ಜೋಳದ ಗಿಡಗಳಲ್ಲಿ ಫಸಲು ಬಿಟ್ಟಿಲ್ಲ. ಬಿಟ್ಟ ಫಸಲು ಕೂಡ ಬಲಿಯದೆ ಅಲ್ಲಲ್ಲಿ ಸುರುಟಿ ಹೋಗುತ್ತಿವೆ. ಇನ್ನೇನು ಇನ್ನು 20 ದಿನಗಳಲ್ಲಿ ಕಟಾವು ಮಾಡಬೇಕಿದೆ. ಆದ್ರೆ, ಕಾಯಿ ಬಲಿಯದೇ ಇರುವುದರಿಂದ ರೈತರಿಗೆ ಬಹಳಷ್ಟು ನಷ್ಟವಾಗಿದೆ.

ಇದನ್ನೂ ಓದಿ:Chamarajanagar News: ಹಳೆ ದ್ವೇಷಕ್ಕೆ ಟೊಮೆಟೊ ಬೆಳೆ ನಾಶ, ಮುಗಿಲು ಮುಟ್ಟಿದ ಅನ್ನದಾತನ ಆಕ್ರಂದನ

ಲಕ್ಷಾಂತರ ರೂ ಸಾಲ ಮಾಡಿ ಜೋಳ ಬೆಳೆದ ರೈತರೀಗ ಕಂಗಾಲು

ಹೌದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೆ ಪರಿಸ್ಥಿತಿ ಎದುರಾಗಿದೆ. ಕಷ್ಟಪಟ್ಟು ಬೆಳೆದ ಬೆಲೆ ಕೈಗೆ ಬಂದಿಲ್ಲ. ಅದರಂತೆ ಕೊಡಗು ಜಿಲ್ಲೆಯಲ್ಲಿ ಉತ್ತಮ ಬೆಳೆಯೇನೋ ಬಂದಿದೆ. ಆದರೆ, ಒಳಗಡೆ ಜೋಳವೇ ಬಂದಿಲ್ಲ. ಸರ್ಕಾರವೇನೋ ಕುಶಾಲನಗರ, ಸೋಮವಾರಪೇಟೆ ತಾಲ್ಲೂಕನ್ನ ಬರ ಪೀಡಿತ ಎಂದು ಘೋಷಣೆ ಮಾಡಿದೆ. ಅದರಂತೆ ಲಕ್ಷಾಂತರ ರೂ ಸಾಲ ಮಾಡಿ ಜೋಳ ಬೆಳೆದ ರೈತರು ಇದೀಗ ಆಕಾಶ ನೋಡುವಂತಾಗಿದೆ. ಇಲ್ಲಿ ಫಸಲು ನಾಶದ ಸೂಕ್ತ ಅಧ್ಯಯಯನ ನಡೆಸಿ ರೈತರಿಗೆ ಪರಿಹಾರ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ