AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ ಹುಲಿ ಉಪಟಳ: 15ಕ್ಕೇರಿದ ಸಾವಿನ ಸಂಖ್ಯೆ.. ಇಂದು ಸಹ ಬಾಲಕ ಹುಲಿ ಬಾಯಿಗೆ ತುತ್ತು

ಈ ಹುಲಿ ದಾಳಿಯಿಂದಾಗಿ 12 ದಿನದಲ್ಲಿ 12 ಜಾನುವಾರು ಮತ್ತು ಇಬ್ಬರು ಮನುಷ್ಯರು ಬಲಿಯಾಗಿದ್ದರು. ಆದರೆ ಇಂದು ಸಹ ಹುಲಿ ದಾಳಿಯಿಂದಾಗಿ ಒಬ್ಬ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರ ಪರಿಸ್ಥಿತಿ ತೀರ ಗಂಭೀರವಾಗಿದೆ.

ಮಡಿಕೇರಿ ಹುಲಿ ಉಪಟಳ: 15ಕ್ಕೇರಿದ ಸಾವಿನ ಸಂಖ್ಯೆ.. ಇಂದು ಸಹ ಬಾಲಕ ಹುಲಿ ಬಾಯಿಗೆ ತುತ್ತು
ಆಸ್ಪತ್ರೆ ಎದುರು ಮಡಿಕೇರಿ ಪೊಲೀಸ್​
ಪೃಥ್ವಿಶಂಕರ
|

Updated on:Mar 08, 2021 | 11:48 AM

Share

ಮಡಿಕೇರಿ: ಕೆಲವು ದಿನಗಳಿಂದ ಸಾರ್ವಜನಿಕರಿಗೆ ಭೀತಿ ಹುಟ್ಟಿಸಿದ್ದ ಹುಲಿಯನ್ನು ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ, ಹುಲಿ ದಾಳಿಯಿಂದಾಗಿ 10 ವರ್ಷದ ಬಾಲಕ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ಗಾಯಾಳು ವ್ಯಕ್ತಿಯನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ.

ಇದಕ್ಕೂ ಮೊದಲು ಇಂದು ಮುಂಜಾನೆ ಬೆಳ್ಳೂರು ಗ್ರಾಮದಲ್ಲಿ ಜಾನುವಾರುಗಳ ಮೇಲೆ ಹುಲಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಒಂದು ಹಸು ಸಾವನ್ನಪ್ಪಿ, ಮತ್ತೊಂದು ಹಸುವಿನ ಸ್ಥಿತಿ ಗಂಭೀರವಾಗಿತ್ತು. ಈ ಹುಲಿ ದಾಳಿಯಿಂದಾಗಿ 12 ದಿನದಲ್ಲಿ 12 ಜಾನುವಾರು ಮತ್ತು ಇಬ್ಬರು ವ್ಯಕ್ತಿಗಳು ಬಲಿಯಾಗಿದ್ದರು.

ಆದರೆ ಇಂದು ಸಹ ಹುಲಿ ದಾಳಿಯಿಂದಾಗಿ ಒಬ್ಬ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರ ಪರಿಸ್ಥಿತಿ ತೀರ ಗಂಭೀರವಾಗಿದೆ. ಇಷ್ಟಾದರೂ ಹುಲಿ ಸೆರೆ ಹಿಡಿಯಲು ಸಾಧ್ಯವಾಗದ ಹಿನ್ನೆಲೆಯಿಂದಾಗಿ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕುತ್ತಿದ್ದಾರೆ.

ಹುಲಿ ಸೆರೆಗೆ ಕಾರ್ಯಾಚರಣೆ ಹಲವು ಜೀವಗಳನ್ನು ಬಲಿ ಪಡೆದ ಹುಲಿಯ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಶುರು ಮಾಡಿಕೊಂಡಿತ್ತು. ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿಯಲ್ಲಿ ಕಾರ್ಯಾಚರಣೆಗೆ ಇಳಿದಿತ್ತು. ಮತ್ತಿಗೋಡು ಶಿಬಿರದಿಂದ ಸಾಕಾನೆಗಳನ್ನು ಕರೆಸಿಕೊಳ್ಳಲಾಗಿತ್ತು. ಅಭಿಮನ್ಯು, ಗೋಪಾಲಸ್ವಾಮಿ ಎಂಬ ಎರಡು ಸಾಕಾನೆಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು. ಆದರೆ ಆ ಕಾರ್ಯಾಚರಣೆಯ ವೇಳೆ ಇಂದು ಸಹ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ:Tiger Attack | ಹೆಚ್ಚುತ್ತಿದೆ ಹುಲಿ ದಾಳಿ ಭೀತಿ: ಬಲಿಯಾಗುತ್ತಿವೆ ರೈತರ ಸಾಕು ಪ್ರಾಣಿಗಳು

Published On - 11:47 am, Mon, 8 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್