ವಿಷಾಹಾರ ಸೇವನೆ ಶಂಕೆ: ಒಂದೇ ಕುಟುಂಬದ ನಾಲ್ವರು ಅಸ್ವಸ್ಥ, ಓರ್ವ ಸಾವು

ಕೊಡಗು: ರಾತ್ರಿ ಊಟ ಸೇವಿಸದ ನಂತರ ಅಸ್ವಸ್ಥರಾಗಿದ್ದ ಒಂದೇ ಕುಟುಂಬದ ಐವರ ಪೈಕಿ ಓರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸೋಮವಾರಪೇಟೆ ತಾಲೂಕಿನ ಕಂಡಕೆರೆ ಗ್ರಾಮದ ಸಂತೋಷ್(30) ಮೃತ ಯುವಕ. ಫೆ.2ರ ಭಾನುವಾರ ರಾತ್ರಿ ಮನೆಯಲ್ಲಿ ಕೋಳಿ ಮಾಂಸದ ಸಾಂಬಾರ್, ಇಡ್ಲಿ ಸೇವಿಸಿದ್ದರು. ನಂತರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡಿದ್ದ ಮಣಿ, ಶಶಿಧರ್, ಸಾವಿತ್ರಿ, ವಿನೋದ್, ಸಂತೋಷ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಲ್ಲಿ ಸಾವಿತ್ರಿ ಹೊರತುಪಡಿಸಿ ಉಳಿದವರೆಲ್ಲರೂ ದಿವ್ಯಾಂಗರು. ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ. ಉಳಿದ […]

ವಿಷಾಹಾರ ಸೇವನೆ ಶಂಕೆ: ಒಂದೇ ಕುಟುಂಬದ ನಾಲ್ವರು ಅಸ್ವಸ್ಥ, ಓರ್ವ ಸಾವು

Updated on: Feb 05, 2020 | 4:24 PM

ಕೊಡಗು: ರಾತ್ರಿ ಊಟ ಸೇವಿಸದ ನಂತರ ಅಸ್ವಸ್ಥರಾಗಿದ್ದ ಒಂದೇ ಕುಟುಂಬದ ಐವರ ಪೈಕಿ ಓರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸೋಮವಾರಪೇಟೆ ತಾಲೂಕಿನ ಕಂಡಕೆರೆ ಗ್ರಾಮದ ಸಂತೋಷ್(30) ಮೃತ ಯುವಕ.

ಫೆ.2ರ ಭಾನುವಾರ ರಾತ್ರಿ ಮನೆಯಲ್ಲಿ ಕೋಳಿ ಮಾಂಸದ ಸಾಂಬಾರ್, ಇಡ್ಲಿ ಸೇವಿಸಿದ್ದರು. ನಂತರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡಿದ್ದ ಮಣಿ, ಶಶಿಧರ್, ಸಾವಿತ್ರಿ, ವಿನೋದ್, ಸಂತೋಷ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಲ್ಲಿ ಸಾವಿತ್ರಿ ಹೊರತುಪಡಿಸಿ ಉಳಿದವರೆಲ್ಲರೂ ದಿವ್ಯಾಂಗರು. ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ. ಉಳಿದ ನಾಲ್ವರು ಅಸ್ವಸ್ಥರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us