AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kodagu News: 66 ತೇಗದ ಮರ ಕಡಿಯಲು ಅನುಮತಿ ನೀಡಿದ್ದ ನಾಲ್ವರು ಅಧಿಕಾರಿಗಳು ಅಮಾನತು

66 ತೇಗದ ಮರ ಕಡಿಯಲು ಅನುಮತಿ ನೀಡಿದ್ದ ನಾಲ್ವರನ್ನು ಅಮಾನತು ಮಾಡಿ ಅರಣ್ಯ ಮತ್ತು ಪರಿಸರ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದೆ. ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ವಲಯ ಅರಣ್ಯ ವ್ಯಾಪ್ತಿಯಲ್ಲಿ ತೇಗದ ಮರ ಕಡಿಯಲು ಅನುಮತಿ ನೀಡಿದ್ದರು.

Kodagu News: 66 ತೇಗದ ಮರ ಕಡಿಯಲು ಅನುಮತಿ ನೀಡಿದ್ದ ನಾಲ್ವರು ಅಧಿಕಾರಿಗಳು ಅಮಾನತು
ಪ್ರಾತಿನಿಧಿಕ ಚಿತ್ರ
Gopal AS
| Updated By: ಗಂಗಾಧರ​ ಬ. ಸಾಬೋಜಿ|

Updated on:Jun 28, 2023 | 8:32 PM

Share

ಕೊಡಗು: 66 ತೇಗದ ಮರ (Teak Trees) ಕಡಿಯಲು ಅನುಮತಿ ನೀಡಿದ್ದ ನಾಲ್ವರನ್ನು ಅಮಾನತು (Suspend) ಮಾಡಿ ಅರಣ್ಯ ಮತ್ತು ಪರಿಸರ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದೆ. ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ವಲಯ ಅರಣ್ಯ ವ್ಯಾಪ್ತಿಯಲ್ಲಿ ತೇಗದ ಮರ ಕಡಿಯಲು ಅನುಮತಿ ನೀಡಿದ್ದರು. ಎಸಿಎಫ್ ಹೆಚ್.ಸೀಮಾ, ಆರ್​ಎಫ್​ಒಗಳಾದ ಅಶೋಕ ಪರಮಾನಂದ, ಬಿ.ಎಂ.ಶಂಕರ್, ಪತ್ರಾಂಕಿತ ವ್ಯವಸ್ಥಾಪಕಿ ಕೆ.ಎ.ಅನಿತಾ ಅಮಾನತುಗೊಳಗಾದ ಅಧಿಕಾರಿಗಳು.

2022ರಲ್ಲಿ ಅಕ್ರಮವಾಗಿ 66 ತೇಗದ ಮರ ಕಡಿಯಲು ಅನುಮತಿ ನೀಡಿದ್ದರು. ಪ್ರಕರಣ ಸಂಬಂಧ ಕಳೆದ ವಾರ ಡಿಸಿಎಫ್​ ಚಕ್ರಪಾಣಿ ಅಮಾನತಾಗಿದ್ದರು. ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿತ್ತು.

ಇದನ್ನೂ ಓದಿ: Kodagu News: ಅಧಿಕಾರದಲ್ಲಿದ್ದಾಗ 6ರ ಬದಲು 66 ಮರ ಕಡಿಯಲು ಅಕ್ರಮವಾಗಿ ಅನುಮತಿ ನೀಡಿದ್ದ ಐಎಫ್​ಎಸ್​ ಅಧಿಕಾರಿ ಸಸ್ಪೆಂಡ್

66 ತೇಗದ ಮರಗಳನ್ನ ಕಡಿದುರುಳಿಸಲು ಅನುಮತಿ

ಡಿಸಿಎಫ್ ಚಕ್ರಪಾಣಿ ರಮೇಶ್ ಅವರ ಸಹಿಯನ್ನ ನಕಲು ಮಾಡಿ ಆರು ಮರಗಳ ಬದಲು ಸಂಪೂರ್ಣ ಬೆಳೆದು ನಿಂತಿರುವ ಭರ್ತಿ 66 ತೇಗದ ಮರಗಳನ್ನ ಕಡಿದುರುಳಿಸಲು ಅನುಮತಿ ನೀಡಿದ್ದರು. ಈ ಒಂದೊಂದು ಮರವೂ ಎರಡು ಮೀಟರ್​ಗಿಂತಲೂ ದಪ್ಪವಿದ್ದು. 60 ವರ್ಷಕ್ಕೂ ಅಧಿಕ ಹಳೆಯದ್ದಾಗಿದ್ದವು. ಹಾಗಾಗಿ ಈ 66 ಮರಗಳು ಎಷ್ಟೋ ಕೋಟಿ ರೂಪಾಯಿಗೆ ಬೆಲೆ ಬಾಳುತ್ತಿದ್ದವು. ಇಂತಹ ಮರಗಳನ್ನು ಕಡಿದುರುಳಿಸಲು ಈ ಅಧಿಕಾರಿ ಅನುಮತಿ ನೀಡಿದ್ದರು.

ಚಕ್ರಪಾಣಿ ಅವರು ಉದ್ದೇಶಪೂರ್ವಕವಾಗಿಯೇ 66 ಮರಗಳನ್ನ ಕಡಿಯಲು ಅನಮತಿ ನೀಡಿರುವುದು ಬೆಳಕಿಗೆ ಬರುವುದು ಮಾತ್ರವಲ್ಲದೇ, ಇಷ್ಟೊಂದು ಅಗಾಧ ಮರಗಳನ್ನ ಕಡಿಯಲು ಅನುಮತಿ ನೀಡುವಾಗಿ ಕಂದಾಯ ಇಲಾಖೆಯಿಂದಾಗಲಿ ಇತರ ಇಲಾಖೆಯಿಂದಾಗಲಿ ಸರ್ವೆ ಅಥವಾ ಇತರ ಯಾವುದೇ ನೀತಿ ನಿಯಮಗಳನ್ನು ಕೂಡ ಪಾಲಿಸಿರುವುದಿಲ್ಲ. ಅದೂ ಅಲ್ಲದೆ ತನಿಖೆಯ ಸಂದರ್ಭ ದಾಖಲಾತಿಗಳನ್ನ ಮನಸೋ ಇಚ್ಛೆ ತಿದ್ದಿ ಸಾಕ್ಷ್ಯ ನಾಶ ಮಾಡಲು ಪ್ರಯತ್ನಿಸಿದ ಆರೋಪ ಇವರ ಮೇಲೆ ಬರುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:31 pm, Wed, 28 June 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ