AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡವ ಸಂಸ್ಕೃತಿ ಅಭಿವೃದ್ದಿಗೆ ಸರ್ಕಾರ ನಿರಾಸಕ್ತಿ; ಅನುದಾನ ಬಿಡುಗಡೆ ಮಾಡಲು ಸಾಹಿತ್ಯ ಪ್ರೇಮಿಗಳ ಮನವಿ

ಕೊಡಗು ಅಂದ್ರೆ ಅದು ಬಹಳ ವಿಶಿಷ್ಟ ಸಂಸ್ಕೃತಿಗಳ ತವರೂರು. ಈ ಸಂಸ್ಕೃತಿಗಳ ಉಳಿವು ಮತ್ತು ಅಭಿವೃದ್ಧಿಗಾಗಿಯೇ ಇಲ್ಲಿ ಎರಡು ಅಕಾಡೆಮಿಗಳಿವೆ. ಆದ್ರೆ, ಈ ಅಕಾಡೆಮಿಗೆ ಅಧ್ಯಕ್ಷರನ್ನ ಆಯ್ಕೆ ಮಾಡಿರುವ ರಾಜ್ಯ ಸರ್ಕಾರ, ಅದರ ನಂತರ ಹೆಚ್ಚು ಆಸಕ್ತಿ ತೋರುತ್ತಿಲ್ಲ. ಅತ್ತ ಸದಸ್ಯರ ನೇಮಕವಾಗದೆ, ಇತ್ತ ಅನುದಾನವೂ ಇಲ್ಲದೆ ಅಕಾಡೆಮಿಗಳು ನಿರಾಶೆ ಮೂಡಿಸಿವೆ.

ಕೊಡವ ಸಂಸ್ಕೃತಿ ಅಭಿವೃದ್ದಿಗೆ ಸರ್ಕಾರ ನಿರಾಸಕ್ತಿ; ಅನುದಾನ ಬಿಡುಗಡೆ ಮಾಡಲು ಸಾಹಿತ್ಯ ಪ್ರೇಮಿಗಳ ಮನವಿ
ಕೊಡವ ಸಂಸ್ಕೃತಿ ಅಭಿವೃದ್ದಿಗೆ ಸರ್ಕಾರ ನಿರಾಸಕ್ತಿ
Gopal AS
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jun 21, 2024 | 10:11 PM

Share

ಕೊಡಗು, ಜೂ.21: ಕೊಡಗು(Kodagu) ಜಿಲ್ಲೆಯಲ್ಲಿ ಕೊಡವ ಭಾಷೆ ಮಾತನಾಡುವ 21 ಮೂಲ ನಿವಾಸಿಗಳ ಸಾಹಿತ್ಯ ಹಾಗೂ ಸಂಸ್ಕೃತಿ ಅಧ್ಯಯನ ಮತ್ತು ಅಭಿವೃದ್ಧಿಗೆ ಅಂತ ಸುಮಾರು 3 ದಶಕಗಳ ಹಿಂದೆ ಕೊಡವ ಸಾಹಿತ್ಯ ಅಕಾಡೆಮಿ ಸ್ಥಾಪಿಸಲಾಗಿದೆ. ಅಂದಿನಿಂದಲೂ ಈ ಅಕಾಡೆಮಿ ತನ್ನದೇ ಆದ ಇತಿ ಮಿತಿಯಲ್ಲಿ ಅತ್ಯುತ್ತಮವಾಗಿಯೇ ಕಾರ್ಯನಿರ್ವಹಿಸಿಕೊಂಡು ಬಂದಿದೆ. ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಕಾಡೆಮಿಗಳ ಅಧ್ಯಕ್ಷ ಹಾಗೂ ಸದಸ್ಯರ ನೇಮಕ ನೆನೆಗುದಿಗೆ ಬಿದ್ದಿತ್ತು. ಆದ್ರೆ, ಇದೀಗ ತಿಂಗಳ ಹಿಂದೆ ಕೊಡಗಿನ ಎರಡು ಅಕಾಡೆಮಿಗಳಿಗೆ ಅಧ್ಯಕ್ಷರನ್ನ ಆಯ್ಕೆ ಮಾಡಿ ಆದೇಶ ಹೊರಡಿಸಿದೆ.

ಕೊಡವ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ಸದಸ್ಯರ ಆಯ್ಕೆಯಲ್ಲಿ ಸರ್ಕಾರ ಹಿಂದೇಟು

ಕೊಡವ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಗೆ ಅಜ್ಜನಿಕಂಡ ಮಹೇಶ್ ನಾಚಯ್ಯ ಅಧ್ಯಕ್ಷರಾದ್ರೆ, ಗೌಡ ಸಾಹಿತ್ಯ ಹಾಗೂ ಸಂಸ್ಕೃತಿಕ ಅಕಾಡೆಮಿಗೆ ಸದಾನಂದ ಮಾವಾಜಿ ಅಧ್ಷಕ್ಷರಾಗಿದ್ದಾರೆ. ಅರೆಭಾಷೆ ಅಕಾಡೆಮಿಗೆ ಆರು ಸದಸ್ಯರನ್ನ ಕೂಡ ನೇಮಕ ಮಾಡಿದೆ. ಆದ್ರೆ, ಉಳಿದ ನಾಲ್ವರು ಸದಸ್ಯರ ಆಯ್ಕೆ ಬಗ್ಗೆ ಇನ್ನೂ ಗೊಂದಲವಿದೆ. ಇತ್ತ ಕೊಡವ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿಯಲ್ಲಿ ಕೇವಲ ಅಧ್ಯಕ್ಷರ ಆಯ್ಕೆ ಮಾತ್ರ ಆಗಿದೆ. ಉಳಿದ 10 ಸದಸ್ಯರ ಆಯ್ಕೆ ಇನ್ನೂ ಆಗಿಲ್ಲ. ಇವರ ಆಯ್ಕೆಯಾಗದೆ ಅಧ್ಯಕ್ಷರೊಬ್ಬರೆ ಏನೂ ಮಾಡಲಾಗದೆ ಕುಳಿತಿದ್ದಾರೆ.

ಇದನ್ನೂ ಓದಿ:ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆ: ಕೈಬೀಸಿ ಕರೆಯುತ್ತಿವೆ ಪ್ರವಾಸಿ ತಾಣಗಳು, ಪ್ರವಾಸೋದ್ಯಮಕ್ಕೆ ಜೀವ

ಶೀಘ್ರವೇ ಸದಸ್ಯರ ನೇಮಕ ಮಾಡಿಕೊಡುವಂತೆ ಅವರು ವಿನಂತಿಸುತ್ತಿದ್ದಾರೆ. ಅದೂ ಅಲ್ಲದೆ ಈ ಅಕಾಡೆಮಿಗೆ ಅನುದಾನವನ್ನು ಕೂಡ ಬಿಡುಗಡೆ ಮಾಡದೆ ಇರುವುದು ಅಕಾಡೆಮಿಯನ್ನು ಇದ್ದೂ ಇಲ್ಲದಂತಾಗಿಸಿದೆ. ಅಕಾಡೆಮಿಗಳ ಸದಸ್ಯರ ನೇಮಕ ಸಂಬಂಧ ಈಗಾಗಲೆ ಬೆಂಗಳೂರಿನಲ್ಲಿ ಸಭೆ ನಡೆದಿದ್ದು, ಅಧಿಕೃತ ಪ್ರಕಟಣೆ ಹೊರ ಬರಬೇಕಿದೆ ಎನ್ನಲಾಗಿದೆ. ಆದರೂ ಯಾವುದಕ್ಕೂ ಜಿಲ್ಲೆಯ ಇಬ್ಬರು ಶಾಸಕರು ಹೆಚ್ಚಿನ ಆಸಕ್ತಿ ತೋರಿ ಎರಡು ಅಕಾಡಮೆಗಳಿಗೆ ಸದಸ್ಯರ ಆಯ್ಕೆ, ಹಾಗೆಯೇ ಅನುದಾನ ಬಿಡುಗಡೆ ಮಾಡುವಂತೆ ಸಾಹಿತ್ಯ ಪ್ರೇಮಿಗಳು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ