AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಬೈಕ್ ಸ್ಕಿಡ್ ಆಗಿ ಬಿದ್ದವರ ಮೇಲೆ ಹರಿದ ಲಾರಿ, ಮದುವೆ ಆಮಂತ್ರಣ ಕೊಡುತ್ತಿದ್ದ ವರ ಮಸಣ ಸೇರಿದ

ಎಲ್ಲವೂ ಅಂದುಕೊಂಡಂತೆ ಆಗಿದ್ರೆ, ಆ ಯುವಕ ಎರಡೇ ವಾರದಲ್ಲಿ ಹಸಮಣೆ ಏರಬೇಕಿತ್ತು. ತನ್ನ ಬಾಳ ಸಂಗಾತಿ ಜೊತೆ ಸಪ್ತಪದಿ ತುಳಿದು ಹೊಸ ಜೀವನಕ್ಕೆ ಕಾಲಿಡಬೇಕಿತ್ತು. ಇದಕ್ಕಾಗಿ ತನ್ನ ಮದುವೆ ಇನ್ವಿಟೇಷನ್ ಹಿಡಿದು ಮಡಿಕೇರಿಯತ್ತ ಬೈಕ್ ಏರಿದ್ದ. ಆದ್ರೆ ದುರ್ವಿಧಿ ಆತನನ್ನು ಮಸಣಕ್ಕೆ ಕರೆದೊಯ್ದಿದೆ.

Accident: ಬೈಕ್ ಸ್ಕಿಡ್ ಆಗಿ ಬಿದ್ದವರ ಮೇಲೆ ಹರಿದ ಲಾರಿ, ಮದುವೆ ಆಮಂತ್ರಣ ಕೊಡುತ್ತಿದ್ದ ವರ ಮಸಣ ಸೇರಿದ
ಬೈಕ್ ಸ್ಕಿಡ್ ಆಗಿ ಬಿದ್ದವರ ಮೇಲೆ ಹರಿದ ಲಾರಿ, ಮದುವೆ ಆಮಂತ್ರಣ ಕೊಡುತ್ತಿದ್ದ ವರ ಮಸಣ ಸೇರಿದ
TV9 Web
| Edited By: ಆಯೇಷಾ ಬಾನು|

Updated on: Sep 08, 2021 | 8:46 AM

Share

ಕೊಡಗು: ಮಡಿಕೇರಿಯ ಸಂಪಿಗೆ ಕಟ್ಟೆ ಬಳಿ ಭೀಕರ ಅಪಘಾತವೊಂದು ನಡೆದಿದೆ. ಬೈಕ್ ಸ್ಕಿಡ್ ಆಗಿ ಬಿದ್ದ ತಕ್ಷಣ ಲಾರಿಯೊಂದು ಹರಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಬ್ಯಾಗ್ನಲ್ಲಿ ಸಿಕ್ಕ ಆಮಂತ್ರಣ ಪತ್ರಿಕೆಯಲ್ಲಿದ್ದ ದೂರವಾಣಿ ಸಂಖ್ಯೆಗೆ ಕರೆ ಮಾಡಿದ ಬಳಿಕ ಮೃತರ ಗುರುತು ಪತ್ತೆಯಾಗಿದೆ. ಹಸೆಮಣೆ ಏರಬೇಕಿದ್ದ ಯುವಕ ಮಸಣ ಸೇರಿದ್ದಾನೆ. ಮೈಸೂರಿನ ಯುವ ವಕೀಲ ವಿಶ್ವನಾಥ್ ಮತ್ತು ಆತನ ಸಂಬಂಧಿ ದಿನೇಶ್ ಮೃತರು.

ವಕೀಲ ವಿಶ್ವನಾಥ್, ಮದುವೆ ಆಮಂತ್ರಣ ನೀಡಲು ಪಿರಿಯಾಪಟ್ಟಣಕ್ಕೆ ಬಂದು ಅಲ್ಲಿ ತನ್ನ ಸೋದರ ಮಾವನ ಕುಟುಂಬವನ್ನ ಆಮಂತ್ರಿಸಿದ್ದ. ಬಳಿಕ ಭಾವಮೈದ ದಿನೇಶ್ನನ್ನು ಬೈಕ್ ಹತ್ತಿಸಿಕೊಂಡು ಮಡಿಕೇರಿಯಲ್ಲಿದ್ದ ಸಂಬಂಧಿಕರ ಮನೆಗೆ ಹೋಗಿದ್ರು. ಮಡಿಕೇರಿ ಸಮೀಪ ದಟ್ಟ ಮಂಜು ಆವರಿಸಿದೆ. ಈ ವೇಳೆ ಲಾರಿಯೊಂದನ್ನು ಓವರ್ ಟೇಕ್ ಮಾಡಲು ವಿಶ್ವನಾಥ್ ಯತ್ನಿಸಿದ್ದಾರೆ. ಆಗ ಲಾರಿಗೆ ಬೈಕ್ ತಾಗಿ ಇಬ್ಬರೂ ಕೆಳಕ್ಕುರುಳಿದ್ದಾರೆ. ಈ ವೇಳೆ ವಿಶ್ವನಾಥ್ ಮತ್ತು ದಿನೇಶ್ ಮೇಲೆ ಲಾರಿ ಹರಿದಿದೆ. ತಕ್ಷಣ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತವೆಸಗಿದ ಲಾರಿ ಚಾಲಕನನ್ನು ಬಂಧಿಸಿ ಮೊಕದ್ದಮೆ ದಾಖಲಿಸಲಾಗಿದೆ. ಮಡಿಕೇರಿ ರಸ್ತೆಗಳು ತೀರಾ ಅಪಾಯಕಾರಿ ತಿರುವುಗಳಿಂದ ಕೂಡಿವೆ. ಅದ್ರಲ್ಲೂ ದಟ್ಟ ಮಂಜು ಇದ್ರೆ ಅಪಾಯ ಕಟ್ಟಿಟ್ಟ ಬುತ್ತಿ. ಹೀಗಾಗಿ ಕೊಡಗಿನಲ್ಲಿ ಸ್ವಲ್ಪ ಎಚ್ಚರಿಕೆ ತಪ್ಪಿದ್ರೂ ಸಾವಿನ ಮನೆ ಸೇರ್ತಿರಿ ಅನ್ನೋದನ್ನ ಮಾತ್ರ ಯಾರೂ ಮರೆಯುವಂತಿಲ್ಲ.

ಇದನ್ನೂ ಓದಿ: ದೆಹಲಿ-ಮೀರತ್​ ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ಅಪಘಾತ; ಐವರು ದುರ್ಮರಣ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು