AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಸಿಎಂ ಆದೇಶಕ್ಕೆ ಡೋಂಟ್ ಕೇರ್; ವೀಕೆಂಡ್ ಕರ್ಫ್ಯೂ ನಡುವೆ ಬೆಳಗಾವಿಯಲ್ಲಿ ನಾಟಿ ಕೋಳಿಗೆ ಮುಗಿಬಿದ್ದ ಜನ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರ ಕೆಲ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಇಂದಿನಿಂದಲೇ (ಆಗಸ್ಟ್ 7) ವೀಕೆಂಡ್ ಕರ್ಫ್ಯೂ ಆರಂಭವಾಗಲಿದೆ.

ಕೊಡಗಿನಲ್ಲಿ ಸಿಎಂ ಆದೇಶಕ್ಕೆ ಡೋಂಟ್ ಕೇರ್; ವೀಕೆಂಡ್ ಕರ್ಫ್ಯೂ ನಡುವೆ ಬೆಳಗಾವಿಯಲ್ಲಿ ನಾಟಿ ಕೋಳಿಗೆ ಮುಗಿಬಿದ್ದ ಜನ
ಚೆಕ್​ಪೋಸ್ಟ್​ನಲ್ಲಿ ಆರೋಗ್ಯ ಸಿಬ್ಬಂದಿ ಇಲ್ಲದೆ ವಾಹನಗಳು ರಾಜಾರೋಷವಾಗಿ ಓಡಾಡುತ್ತಿವೆ
TV9 Web
| Edited By: |

Updated on: Aug 07, 2021 | 10:02 AM

Share

ಮಡಿಕೇರಿ: ಮಹಾರಾಷ್ಟ್ರ, ಕೇರಳದಲ್ಲಿ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಅಲ್ಲಿಂದ ಬರುವ ಪ್ರವಾಸಿಗರಿಗೆ ಆರ್​ಟಿಪಿಸಿಆರ್​ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಕೇರಳ, ಕೊಡಗು ಗಡಿಯಲ್ಲಿ ತಪಾಸಣೆ ನಡೆಸಿ ರಾಜ್ಯಕ್ಕೆ ಪ್ರವೇಶಿಸಲು ಅವಕಾಶ ನೀಡಬೇಕೆಂದು ರಾಜ್ಯ ಸರ್ಕಾರ ತಿಳಿಸಿದೆ. ಆದರೆ ಕೇರಳ, ಕೊಡಗು ಗಡಿಯಲ್ಲಿ ಯಾವುದೇ ತಪಾಸಣೆ ನಡೆಯುತ್ತಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ. ಕೊಡಗು ಜಿಲ್ಲೆಯ ಕುಶಾಲನಗರ ಬಳಿಯ ಕೊಪ್ಪ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ಮಾಡಲು ಆರೋಗ್ಯ ಇಲಾಖೆ ಸಿಬ್ಬಂದಿ ಕಾಣೆಯಾಗಿದ್ದು, ಕೇರಳದಿಂದ ವಾಹನಗಳು ರಾಜಾರೋಷವಾಗಿ ಆಗಮಿಸುತ್ತಿವೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರ ಕೆಲ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ. ಇಂದಿನಿಂದಲೇ (ಆಗಸ್ಟ್ 7) ವೀಕೆಂಡ್ ಕರ್ಫ್ಯೂ ಆರಂಭವಾಗಲಿದೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಿದ್ದರೂ ಜನ ನಿರ್ಲಕ್ಷ್ಯ ತೋರಿದ್ದಾರೆ. ರವಿವಾರ ಪೇಟೆಯಲ್ಲಿ ಭರ್ಜರಿಯಾಗಿ ನಾಟಿ ಕೋಳಿಗಳು ಮರಾಟವಾಗುತ್ತಿದ್ದು, ಮಾಸ್ಕ್ ಧರಿಸದೇ, ದೈಹಿಕ ಅಂತರ ಪಾಲಿಸದೇ ಖರೀದಿಗೆ ಜನ ಮುಗಿಬಿದ್ದಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಹಿನ್ನೆಲೆ ಜಿಲ್ಲೆಯ 6 ಚೆಕ್​ಪೋಸ್ಟ್​ಗಳಲ್ಲಿ ತಪಾಸಣೆ ನಡೆಯುತ್ತಿದೆ. ಮಹಾರಾಷ್ಟ್ರದಿಂದ ಬರುವವರಿಗೆ 72 ಗಂಟೆಯೊಳಗಿನ ಕೊರೊನಾ ನೆಗೆಟಿವ್ ವರದಿ ಇದ್ದರೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.

ಕಲಬುರಗಿಯಲ್ಲಿ ವೀಕೆಂಡ್ ಕರ್ಪ್ಯೂ ಜಾರಿಯಿರುವ ಹಿನ್ನೆಲೆ ಮಾರುಕಟ್ಟೆಗೆ ಹೆಚ್ಚಿನ ಜನರು ಬಂದಿಲ್ಲ. ಹೀಗಾಗಿ ವ್ಯಾಪಾರವಿಲ್ಲದೆ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ. ಇನ್ನು ವಿಜಯಪುರ ಜಿಲ್ಲೆಯ 11 ಗಡಿಗಳಲ್ಲಿ ಚೆಕ್​ಪೋಸ್ಟ್ ನಿರ್ಮಾಣವಾಗಿವೆ. ಕೊರೊನಾ ನೆಗೆಟಿವ್ ವರದಿ ಇದ್ದರೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಸ್ಥಳದಲ್ಲಿಯೇ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಇನ್ನುಳಿದವರು ಕಡ್ಡಾಯವಾಗಿ ವರದಿ ತರಬೇಕಾಗಿದೆ.

ಇದನ್ನೂ ಓದಿ

ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: 65 ವರ್ಷ ಪ್ರಾಯದ ವ್ಯಕ್ತಿ ಬಂಧನ

ವೀಕೆಂಡ್​ ಕರ್ಫ್ಯೂ: ಯಾವ ಯಾವ ಜಿಲ್ಲೆಗಳಲ್ಲಿ ಏನು ಕ್ರಮ? ಮನೆಯಿಂದ ಹೊರಬರುವ ಮುನ್ನ ಗಮನಿಸಿ

(Health Department Staff are not doing health checks in kodagu and Belagavi People are over buying poultry)

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?