ಕೊಡಗು ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ಮಳೆ ಆರ್ಭಟ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಹಿನ್ನೆಲೆ ಸಂಪರ್ಕ ಕಟ್ ಆಗಿದ್ದು, ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತವಾಗಿದೆ.

ಕೊಡಗು ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ಮಳೆ ಆರ್ಭಟ: ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ
Edited By:

Updated on: Aug 29, 2022 | 7:08 AM

ಕೊಡಗು: ಸಂಪಾಜೆ ವ್ಯಾಪ್ತಿಯಲ್ಲಿ ಭಾರಿ ಮಳೆಯಿಂದಾಗಿ ಎರಡು ಕಡೆ ಭೂ ಕುಸಿತ (Landslide) ಉಂಟಾಗಿರುವಂತಹ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಹಿನ್ನೆಲೆ ಸಂಪರ್ಕ ಕಟ್ ಆಗಿದ್ದು, ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲುಗಟ್ಟಿ ವಾಹನಗಳು ನಿಂತಿವೆ. ಮಣ್ಣಿನೊಂದಿಗೆ ರಸ್ತೆ ಮೇಲೆ‌ ಮರಗಳು ಬಂದು ಬಿದಿದ್ದು, ರಸ್ತೆಯಲ್ಲಿ ಬಿದ್ದಿರುವ ಮರವನ್ನು ಪ್ರಯಾಣಿಕರು ತೆರವುಗೊಳಿಸಿದರು.

ಮಳೆಯಿಂದಾಗಿ ಕುಸಿದ ಮನೆ ಗೋಡೆ:

ಮೈಸೂರು: ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ ಮುಂದುವರೆದಿದ್ದು, ನಂಜನಗೂಡು ತಾಲೂಕಿನ ಆಲಂಬೂರು ಮುಂಟಿ ಗ್ರಾಮದಲ್ಲಿ ಮನೆ ಗೋಡೆ ಕುಸಿದಿದೆ. ಗೌರಮ್ಮ ಬಸವೇಗೌಡ ಎಂಬುವರ ಮನೆ ಗೋಡೆ ಕುಸಿದಿದ್ದು, ಅದೃಷ್ಟವಶಾತ್​ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸೂಕ್ತ ಪರಿಹಾರ ನೀಡುವಂತೆ ಕುಟುಂಬಸ್ಥರಿಂದ ಮನವಿ ಮಾಡಲಾಗಿದೆ. ನಂಜನಗೂಡು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನಂದಿ ಹಿಲ್ಸ್ ಬಿಟ್ಟು ಶ್ರೀನಿವಾಸ ಸಾಗರ ಜಲಾಶಯದತ್ತ ಜನವೂ ಜನ: ಧುಮ್ಮಿಕ್ಕುತ್ತಿರುವ ನೀರಲ್ಲಿ ಮಿಂದು ಎಂಜಾಯ್, ಫೋಟೋಗಳಿವೆ

ಆಗಾಗ ಬಿಡುವು ನೀಡಿ ಸುರಿಯುತ್ತಿರುವ ಜಡಿ ಮಳೆ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಬೆಳಗ್ಗೆ 4:30ರಿಂದಲೇ ಜಿಟಿ ಜಿಟಿ ಮಳೆ ಆರಂಭವಾಗಿದೆ. ನಗರ ಸೇರಿ ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ. ಬಯಲುಸೀಮೆಯ ಭೂಮಿಗೆ ಮಳೆ ತಂಪೆರೆದಿದೆ. ಆಗಾಗ ಬಿಡುವು ನೀಡಿ ಜಡಿ ಮಳೆ ಸುರಿಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Loading...
Unable to load recommendations.
Follow Us