ಭಾರಿ ಮಳೆಗೆ ಕುಸಿದುಬಿದ್ದ ಸೇತುವೆ; ಎರಡು ಗ್ರಾಮಗಳ‌ ಮಧ್ಯೆ ಸಂಪರ್ಕ ಕಡಿತ

karnataka monsoon: ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಯಿಂದಾಗಿ ಹೆಮ್ಮತ್ತಾಳು-ಮುಕ್ಕೋಡ್ಲು ಮಧ್ಯೆಯ ಸಂಪರ್ಕ‌ ಸೇತುವೆ ಕುಸಿತವಾಗಿದೆ.

ಭಾರಿ ಮಳೆಗೆ ಕುಸಿದುಬಿದ್ದ ಸೇತುವೆ; ಎರಡು ಗ್ರಾಮಗಳ‌ ಮಧ್ಯೆ ಸಂಪರ್ಕ ಕಡಿತ
ಸೇತುವೆ
Follow us
| Updated By: preethi shettigar

Updated on:Aug 07, 2021 | 10:50 AM

ಕೊಡಗು: ಜುಲೈ ತಿಂಗಳಲ್ಲಿ ಕರ್ನಾಟಕದಾದ್ಯಂತ ಅಬ್ಬರಿಸಿದ ಮಳೆಯಿಂದಾಗಿ ಜನಜೀವನ ದುಸ್ತರಗೊಂಡಿದೆ. ಕಳೆದ ಕೆಲ ದಿನಗಳಿಂದ ಮಳೆ ಆರ್ಭಟ (Karnataka Rain) ಕೊಂಚ ತಗ್ಗಿದಂತೆ ಕಾಣುತ್ತಿತ್ತಾದರೂ ಈಗ ಆರಂಭವಾಗಿರುವ ಆಶ್ಲೇಷಾ ಮಳೆ ಮತ್ತೆ ಜೋರಾಗಿ ಸುರಿಯಲಾರಂಭಿಸಿದೆ. ಈ ಬಾರಿಯಂತೂ ಮೇ ತಿಂಗಳಿನಿಂದಲೇ ಮಳೆಗಾಲದ ವಾತಾವರಣವಿತ್ತಾದ್ದರಿಂದ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಭಾಗದಲ್ಲಿ ಭೂಮಿ ಒಣಗಲು ಅವಕಾಶವೇ ಸಿಕ್ಕಿಲ್ಲ ಎಂಬಂತಾಗಿ ಕೃಷಿಕರು ಅತಿಯಾದ ಮಳೆಯಿಂದ (Heavy Rain) ಕಂಗಾಲಾಗಿದ್ದಾರೆ. ಅದರಂತೆ ಮಳೆಯ ಆರ್ಭಟಕ್ಕೆ ಕೊಡಗು ಜಿಲ್ಲೆಯ ಜನರು ತತ್ತರಿಸಿದ್ದು, ಹಲವು ಕಡೆ ಸಂಪರ್ಕ ಕಡಿತವಾಗಿದೆ. ಹೀಗಿರುವಾಗಲೇ ಜಿಲ್ಲೆಯ ಮಡಿಕೇರಿ ತಾಲೂಕಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಯಿಂದಾಗಿ ಹೆಮ್ಮತ್ತಾಳು-ಮುಕ್ಕೋಡ್ಲು ಮಧ್ಯೆಯ ಸಂಪರ್ಕ‌ ಸೇತುವೆ ಕುಸಿತವಾಗಿದೆ.

ಗದಗ: ಮಲಪ್ರಭಾ ನದಿ ಪ್ರವಾಹಕ್ಕೆ ತತ್ತರಿಸಿದ ರೈತರು ಜಿಲ್ಲೆಯ ರೋಣ, ಗಾಡಗೋಳಿ, ಹೊಳೆಮಣ್ಣೂರ ತಾಲೂಕಿನ ರೈತರು ಬೆಳೆ ಕಳೆದುಕೊಂಡಿದ್ದು, ಕಳೆದ ವರ್ಷ ಪರಿಹಾರ ನೀಡುವುದಾಗಿ ಅಧಿಕಾರಿಗಳು ನೂರಾರು ರೂಪಾಯಿ ಖರ್ಚು ಮಾಡಿಸಿ ನೈಯಾಪೈಸೆ ಪರಿಹಾರ ನೀಡಿಲ್ಲ. ಈ ವರ್ಷವೂ ಇತ್ತ ನಮ್ಮ ಗೋಳು ಕೇಳಲು ಯಾರು ಬಂದಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲಪ್ರಭಾ ನದಿ ತೀರದ ನೂರಾರು ಎಕರೆಯಲ್ಲಿನ ಹೆಸರು, ಗೋವಿನ ಜೋಳ, ಕಬ್ಬು, ಸೂರ್ಯಕಾಂತಿ ಸೇರಿ ಹಲವು ಬೆಳೆ ಹಾನಿಯಾಗಿದೆ. ಸೌಜನ್ಯಕ್ಕೂ ರೋಣ ತಾಲೂಕಿನ ತಹಶಿಲ್ದಾರ್ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ಇತ್ತ ಭೇಟಿ ನೀಡಿಲ್ಲ. ಉಸ್ತುವಾರಿ ಸಚಿವ ಸಿ. ಸಿ. ಪಾಟೀಲ್ ತವರು ಕ್ಷೇತ್ರದಲ್ಲೇ ನಿರ್ಲಕ್ಷ್ಯ ವಹಿಸಿದ್ದಾರೆ. ಅವರು ತಮ್ಮ ಸ್ಥಾನದ ಭದ್ರತೆಗಾಗಿ ಬೆಂಗಳೂರು, ದೆಹಲಿಗೆ ಹೋಗಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯ: ಕೆಆರ್​ಎಸ್​ ಡ್ಯಾಂ ಭರ್ತಿಗೆ 7 ಅಡಿ ಬಾಕಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಹಿನ್ನಲೆಯಲ್ಲಿ ಕೆಆರ್​ಎಸ್​ ಡ್ಯಾಂ ಭರ್ತಿಗೆ 7 ಅಡಿ ಬಾಕಿ ಇದೆ. ಒಳ ಹರಿವು 21,454 ಕ್ಯೂಸೆಕ್​ಗೆ ಏರಿಕೆಯಾದರೆ, 5437 ಕ್ಯೂಸೆಕ್ ಹೊರ ಹರಿವು ಉಂಟಾಗಿದೆ. ಸಧ್ಯ ನೀರಿನ ಮಟ್ಟ 117.54 ಅಡಿಗೆ ಏರಿಕೆಯಾಗಿದ್ದು, ಡ್ಯಾಂ ಗರಿಷ್ಠ ಮಟ್ಟ 124.80 ಅಡಿಯಾಗಿದೆ.

ಇದನ್ನೂ ಓದಿ: Karnataka Rain: ಅಬ್ಬರಿಸಲಾರಂಭಿಸಿದ ಆಶ್ಲೇಷಾ; ಮಲೆನಾಡು, ಕರಾವಳಿ ಭಾಗದಲ್ಲಿ ಮತ್ತೆ ಮಳೆ

ಭಾರೀ ಮಳೆಗೆ ಬೆಳಗಾವಿ ಜಿಲ್ಲೆಯ ಬಹುತೇಕ ಸೇತುವೆಗಳು ಜಲಾವೃತ

Published On - 10:46 am, Sat, 7 August 21

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್