AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನಲ್ಲಿ ಭಾರಿ ಮಳೆಗೆ ಬಿರುಕುಬಿಟ್ಟ ಮನೆ! ಚಿಕ್ಕಮಗಳೂರಿನಲ್ಲಿ ಕೊಚ್ಚಿ ಹೋದ ಬಾಲಕಿಗೆ ಮುಂದುವರೆದ ಶೋಧ

ಬೃಹತ್ ಮರ ಬಿದ್ದು ಸುರೇಶ್ ಎಂಬುವರ ಮನೆಗೆ ಹಾನಿಯಾಗಿದೆ. ಇನ್ನು ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಬಳಿ ಕುರ್ಚಿ ಗ್ರಾಮದಲ್ಲಿ ಬಾವಿ ಕುಸಿದು ಹೋಗಿದೆ.

ಕೊಡಗಿನಲ್ಲಿ ಭಾರಿ ಮಳೆಗೆ ಬಿರುಕುಬಿಟ್ಟ ಮನೆ! ಚಿಕ್ಕಮಗಳೂರಿನಲ್ಲಿ ಕೊಚ್ಚಿ ಹೋದ ಬಾಲಕಿಗೆ ಮುಂದುವರೆದ ಶೋಧ
ಮನೆ ಮೇಲೆ ಬೃಹತ್ ಮರ ಬಿದ್ದಿದೆ. ಮನೆ ಬಳಿಯಿದ್ದ ಬಾವಿ ಕುಸಿದು ಬಿದ್ದಿದೆ
TV9 Web
| Edited By: |

Updated on:Jul 06, 2022 | 8:18 AM

Share

ಕೊಡಗು: ಜಿಲ್ಲೆಯಾದ್ಯಂತ ಮಳೆ (Rain) ಅವಾಂತರ ಮುಂದುವರಿದಿದ್ದು, ಸೋಮವಾರಪೇಟೆ ತಾಲೂಕಿನ ಶಿವರಳ್ಳಿಯಲ್ಲಿ ಮರ ಬಿದ್ದು ಮನೆ ಗೋಡೆಗಳು (Walls) ಬಿರುಕುಬಿಟ್ಟಿವೆ. ಬೃಹತ್ ಮರ ಬಿದ್ದು ಸುರೇಶ್ ಎಂಬುವರ ಮನೆಗೆ ಹಾನಿಯಾಗಿದೆ. ಇನ್ನು ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಬಳಿ ಕುರ್ಚಿ ಗ್ರಾಮದಲ್ಲಿ ಬಾವಿ ಕುಸಿದು ಹೋಗಿದೆ. ಬಾವಿ ಕುಸಿತಗೊಂಡಿದ್ದರಿಂದ ಬೃಹತ್ ಹೊಂಡ ಸೃಷ್ಟಿಯಾಗಿದ್ದು, ಕಾಳಯ್ಯ ಎಂಬುವರ ಮನೆಗೆ ಹಾನಿಯಾಗಿದೆ.

ಬಾಲಕಿಗಾಗಿ ಮುಂದುವರಿದ ಶೋಧ: ಹಳ್ಳದಲ್ಲಿ ಕೊಚ್ಚಿಹೋಗಿದ್ದ ಬಾಲಕಿಗಾಗಿ ಶೋಧ ಕಾರ್ಯ ಮುಂದುವರಿದಿದೆ. 2 ದಿನದಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ನಡೆಸುತ್ತಿದೆ. ಇನ್ನು ಬಾಲಕಿ ಮೃತದೇಹ ಪತ್ತೆಯಾಗಿಲ್ಲ. ಶಾಲೆಯಿಂದ ಮನೆಗೆ ಬರುವಾಗ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ಬಾಲಕಿ ಕೊಚ್ಚಿ ಹೋಗಿದ್ದಳು. 1ನೇ ತರಗತಿ ಸುಪ್ರೀತಾ ಹಳ್ಳದಲ್ಲಿ ಕೊಚ್ಚಿಹೋಗಿರುವ ಬಾಲಕಿ.

ಗುಡ್ಡ ಕುಸಿತ: ಉತ್ತರ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆ ಹಿನ್ನೆಲೆ ಗೋಕರ್ಣ ಕ್ರಾಸ್​ ಬಳಿಯ ಮಾದನಗೇರಿಯ ಬಳಲೆ ಗುಡ್ಡ ಕುಸಿದಿದೆ. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದಾಗಿ ಗುಡ್ಡ ಕುಸಿದಿದೆ. ಗುಡ್ಡ ಕುಸಿತದಿಂದ ರಾ. ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದು, ಹೆದ್ದಾರಿಯಲ್ಲಿ ಬಿದ್ದ ಮಣ್ಣು ತೆರವುಗೊಳಿಸುತ್ತಿದೆ.

ಇದನ್ನೂ ಓದಿ
Image
International Kissing Day 2022: ಇಂದು ವಿಶ್ವ ಚುಂಬನ ದಿನ; ಮುದ್ದಿಸಿ, ಮುದ್ದು ಮಾಡಿಸಿಕೊಳ್ಳಿ, ಸುಖವಾಗಿರಿ
Image
Chandrashekhar Guruji Murder: ಗುರೂಜಿಗೂ ತನಗೂ ಯಾವುದೇ ಸಂಬಂಧವಿಲ್ಲವೆಂದ ಹಂತಕ ಮಹಾಂತೇಶ್ ಪತ್ನಿ ವನಜಾಕ್ಷಿ
Image
Samantha: ಸಮಂತಾ-ನಾಗ ಚೈತನ್ಯ ವಿಚ್ಛೇದನಕ್ಕೆ ಅಸಲಿ ಕಾರಣ ಬಹಿರಂಗ ಆಗುವ ಸಮಯ ಬಂತಾ? ಹೆಚ್ಚಿತು ಕೌತುಕ
Image
Amavasya: ಅಮಾವಾಸ್ಯೆ ದಿನ ಚಂದ್ರ ಮತ್ತು ಸೂರ್ಯ ಒಂದೇ ವೇಳೆಯಲ್ಲಿ ಉದಯಿಸುತ್ತಾರೆ, ಹೀಗಾಗಿ ಈ ದಿನ ಅನಾಹುತಗಳು ಹೆಚ್ಚು

ಇದನ್ನೂ ಓದಿ: Chandrashekhar Guruji Murder: ಗುರೂಜಿಗೂ ತನಗೂ ಯಾವುದೇ ಸಂಬಂಧವಿಲ್ಲವೆಂದ ಹಂತಕ ಮಹಾಂತೇಶ್ ಪತ್ನಿ ವನಜಾಕ್ಷಿ

ಕಬಿನಿ ಜಲಾಶಯದ ಒಳ ಹರಿವು ಹೆಚ್ಚಳ: ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಕೇರಳದ ವಯನಾಡು, ಕಬಿನಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಿದ ಹಿನ್ನೆಲೆ 15 ಸಾವಿರ ಕ್ಯೂಸೆಕ್ ನೀರು ಹೆಚ್ಚಾಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 74.00 ಅಡಿ, ಜಲಾಶಯದ ಇಂದಿನ ಒಳಹರಿವು 15,019 ಕ್ಯೂಸೆಕ್.

Published On - 8:05 am, Wed, 6 July 22