AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯಲ್ಲಿ 3 ಕೋಟಿ ರೂ.ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ, 7 ಪೆಡ್ಲರ್​ಗಳ ಬಂಧನ

ಇತ್ತೀಚೆಗೆ ಥೈಲ್ಯಾಂಡ್​ನಿಂದ ಹೈಡ್ರೋ ಗಾಂಜಾ ತರಿಸಿಕೊಳ್ಳುತ್ತಿದ್ದ ಆರೋಪಿಯನ್ನು ಬೆಂಗಳೂರು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದರು. ಇದೀಗ ಕೊಡಗು ಜಿಲ್ಲಾ‌ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಥೈಲ್ಯಾಂಡ್​ನಿಂದ ಕೊಡಗಿಗೆ ತಂದಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಮಡಿಕೇರಿಯಲ್ಲಿ 3 ಕೋಟಿ ರೂ.ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ, 7 ಪೆಡ್ಲರ್​ಗಳ ಬಂಧನ
ಹೈಡ್ರೋ ಗಾಂಜಾ ವಶಪಡಿಸಿಕೊಂಡ ಕೊಡಗು ಜಿಲ್ಲಾ‌ ಪೊಲೀಸರು, ಬಂಧಿತ ಆರೋಪಿಗಳು
Gopal AS
| Edited By: |

Updated on: Oct 02, 2024 | 7:37 PM

Share

ಕೊಡಗು, ಅ.02: ಕೊಡಗು ಜಿಲ್ಲಾ‌ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಥೈಲ್ಯಾಂಡ್​ನಿಂದ ಕೊಡಗಿಗೆ ತಂದಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಕೇರಳ ಹಾಗೂ ಕೊಡಗು ಮೂಲದ‌ ಮೆಹರೂಫ್, ರವೂಫ್, ನಾಸಿರುದ್ದೀನ್,, ವಾಜೀದ್, ಯಾಹಿಯಾ, ಅಕಾನಾಸ್ ಹಾಗೂ ರಿಯಾಜ್ ಸೇರಿ ಏಳು ಮಂದಿ ಪೆಡ್ಲರ್​ಗಳನ್ನು ಬಂಧಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ‌ದ ಮೂಲಕ ತರಲಾಗಿದ್ದ ಹೈಡ್ರೋ ಗಾಂಜಾ ಇದಾಗಿದ್ದು, ಮಡಿಕೇರಿ ನಗರದ ವಿರಾಜಪೇಟೆ ರಸ್ತೆಯ ಬಳಿ ಆರೋಪಿಗಳನ್ನು ಹೆಡಮುರಿ ಕಟ್ಟಲಾಗಿದೆ. ಈ ಕುರಿತು ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ಕಳೆದ ಸೆ.10 ರಂದು ಬೆಂಗಳೂರು ಬ್ಯಾಡರಹಳ್ಳಿ ಠಾಣೆ ಪೊಲೀಸರು ಇನ್​​ಸ್ಟಾಗ್ರಾಂ ಮೂಲಕ ಆರ್ಡರ್ ಮಾಡಿ ಥೈಲ್ಯಾಂಡ್​ನಿಂದ ಹೈಡ್ರೋ ಗಾಂಜಾ ತರಿಸಿಕೊಳ್ಳುತ್ತಿದ್ದ ಆರೋಪಿ ತೌನೇಶ್ ಎಂಬಾತನನ್ನು ಬಂಧಿಸಿದ್ದರು. ಅಂಧ್ರಹಳ್ಳಿಯ ಕಾಲೇಜೊಂದರ ಬಳಿ ಮಾರಾಟ ಮಾಡುತ್ತಿದ್ದಾಗ ಆರೋಪಿಯನ್ನು ಸೆರೆ ಹಿಡಿದು, ಆತನಿಂದ 1.22 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಯುಪಿ, ಬಿಹಾರಿ ಯುವಕರ ಪುಂಡಾಟ; ಗಾಂಜಾ ಮತ್ತಿನಲ್ಲಿ ಇಬ್ಬರಿಗೆ ಚಾಕು ಇರಿತ

ಸಿಂಥೆಟಿಕ್ ಪೇಪರ್​​ನಲ್ಲಿ ಸುತ್ತಿ ಬಿಸ್ಕೆಟ್ ಬಾಕ್ಸ್​ನಲ್ಲಿ ಗಾಂಜಾ ತರಲಾಗುತ್ತಿತ್ತು

ಇನ್ನು ಈ ಗಾಂಜಾವನ್ನು ವಿಮಾನ ನಿಲ್ದಾಣದಲ್ಲಿ ಯಾಮಾರಿಸಿ ತರಿಸಿಕೊಳ್ಳಲಾಗುತ್ತಿತ್ತು. ಸಿಂಥೆಟಿಕ್ ಪೇಪರ್​​ನಲ್ಲಿ ಸುತ್ತಿ ಬಿಸ್ಕೆಟ್ ಬಾಕ್ಸ್​ನಲ್ಲಿ ಗಾಂಜಾ ತರಲಾಗುತ್ತಿತ್ತು. ಈ ಗಾಂಜಾವನ್ನು ಸಿಂಥೆಟಿಕ್ ಪೇಪರ್​​ನಲ್ಲಿ ಸುತ್ತುವುದರಿಂದ ವಾಸನೆ ಕೂಡ ಬರುತ್ತಿರಲಿಲ್ಲ. ಜೊತೆಗೆ, ಸ್ಕ್ಯಾನ್ ಮಾಡಿದಾಗಲೂ ಗಾಂಜಾ ಇದೆ ಎಂಬುದು ಗೊತ್ತಾಗುತ್ತಿರಲಿಲ್ಲ. ಬಟ್ಟೆ ವ್ಯಾಪಾರಿಯಾಗಿರುವ ತೌನೇಶ್ 2020 ರಿಂದಲೇ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನುವುದು ತನಿಖೆಯಿಂದ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು