ಮಡಿಕೇರಿಯಲ್ಲಿ 3 ಕೋಟಿ ರೂ.ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ, 7 ಪೆಡ್ಲರ್​ಗಳ ಬಂಧನ

ಇತ್ತೀಚೆಗೆ ಥೈಲ್ಯಾಂಡ್​ನಿಂದ ಹೈಡ್ರೋ ಗಾಂಜಾ ತರಿಸಿಕೊಳ್ಳುತ್ತಿದ್ದ ಆರೋಪಿಯನ್ನು ಬೆಂಗಳೂರು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದರು. ಇದೀಗ ಕೊಡಗು ಜಿಲ್ಲಾ‌ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಥೈಲ್ಯಾಂಡ್​ನಿಂದ ಕೊಡಗಿಗೆ ತಂದಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಮಡಿಕೇರಿಯಲ್ಲಿ 3 ಕೋಟಿ ರೂ.ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ, 7 ಪೆಡ್ಲರ್​ಗಳ ಬಂಧನ
ಹೈಡ್ರೋ ಗಾಂಜಾ ವಶಪಡಿಸಿಕೊಂಡ ಕೊಡಗು ಜಿಲ್ಲಾ‌ ಪೊಲೀಸರು, ಬಂಧಿತ ಆರೋಪಿಗಳು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 02, 2024 | 7:37 PM

ಕೊಡಗು, ಅ.02: ಕೊಡಗು ಜಿಲ್ಲಾ‌ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಥೈಲ್ಯಾಂಡ್​ನಿಂದ ಕೊಡಗಿಗೆ ತಂದಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಕೇರಳ ಹಾಗೂ ಕೊಡಗು ಮೂಲದ‌ ಮೆಹರೂಫ್, ರವೂಫ್, ನಾಸಿರುದ್ದೀನ್,, ವಾಜೀದ್, ಯಾಹಿಯಾ, ಅಕಾನಾಸ್ ಹಾಗೂ ರಿಯಾಜ್ ಸೇರಿ ಏಳು ಮಂದಿ ಪೆಡ್ಲರ್​ಗಳನ್ನು ಬಂಧಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ‌ದ ಮೂಲಕ ತರಲಾಗಿದ್ದ ಹೈಡ್ರೋ ಗಾಂಜಾ ಇದಾಗಿದ್ದು, ಮಡಿಕೇರಿ ನಗರದ ವಿರಾಜಪೇಟೆ ರಸ್ತೆಯ ಬಳಿ ಆರೋಪಿಗಳನ್ನು ಹೆಡಮುರಿ ಕಟ್ಟಲಾಗಿದೆ. ಈ ಕುರಿತು ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ಕಳೆದ ಸೆ.10 ರಂದು ಬೆಂಗಳೂರು ಬ್ಯಾಡರಹಳ್ಳಿ ಠಾಣೆ ಪೊಲೀಸರು ಇನ್​​ಸ್ಟಾಗ್ರಾಂ ಮೂಲಕ ಆರ್ಡರ್ ಮಾಡಿ ಥೈಲ್ಯಾಂಡ್​ನಿಂದ ಹೈಡ್ರೋ ಗಾಂಜಾ ತರಿಸಿಕೊಳ್ಳುತ್ತಿದ್ದ ಆರೋಪಿ ತೌನೇಶ್ ಎಂಬಾತನನ್ನು ಬಂಧಿಸಿದ್ದರು. ಅಂಧ್ರಹಳ್ಳಿಯ ಕಾಲೇಜೊಂದರ ಬಳಿ ಮಾರಾಟ ಮಾಡುತ್ತಿದ್ದಾಗ ಆರೋಪಿಯನ್ನು ಸೆರೆ ಹಿಡಿದು, ಆತನಿಂದ 1.22 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಯುಪಿ, ಬಿಹಾರಿ ಯುವಕರ ಪುಂಡಾಟ; ಗಾಂಜಾ ಮತ್ತಿನಲ್ಲಿ ಇಬ್ಬರಿಗೆ ಚಾಕು ಇರಿತ

ಸಿಂಥೆಟಿಕ್ ಪೇಪರ್​​ನಲ್ಲಿ ಸುತ್ತಿ ಬಿಸ್ಕೆಟ್ ಬಾಕ್ಸ್​ನಲ್ಲಿ ಗಾಂಜಾ ತರಲಾಗುತ್ತಿತ್ತು

ಇನ್ನು ಈ ಗಾಂಜಾವನ್ನು ವಿಮಾನ ನಿಲ್ದಾಣದಲ್ಲಿ ಯಾಮಾರಿಸಿ ತರಿಸಿಕೊಳ್ಳಲಾಗುತ್ತಿತ್ತು. ಸಿಂಥೆಟಿಕ್ ಪೇಪರ್​​ನಲ್ಲಿ ಸುತ್ತಿ ಬಿಸ್ಕೆಟ್ ಬಾಕ್ಸ್​ನಲ್ಲಿ ಗಾಂಜಾ ತರಲಾಗುತ್ತಿತ್ತು. ಈ ಗಾಂಜಾವನ್ನು ಸಿಂಥೆಟಿಕ್ ಪೇಪರ್​​ನಲ್ಲಿ ಸುತ್ತುವುದರಿಂದ ವಾಸನೆ ಕೂಡ ಬರುತ್ತಿರಲಿಲ್ಲ. ಜೊತೆಗೆ, ಸ್ಕ್ಯಾನ್ ಮಾಡಿದಾಗಲೂ ಗಾಂಜಾ ಇದೆ ಎಂಬುದು ಗೊತ್ತಾಗುತ್ತಿರಲಿಲ್ಲ. ಬಟ್ಟೆ ವ್ಯಾಪಾರಿಯಾಗಿರುವ ತೌನೇಶ್ 2020 ರಿಂದಲೇ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನುವುದು ತನಿಖೆಯಿಂದ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ