AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿಯಲ್ಲಿ 3 ಕೋಟಿ ರೂ.ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ, 7 ಪೆಡ್ಲರ್​ಗಳ ಬಂಧನ

ಇತ್ತೀಚೆಗೆ ಥೈಲ್ಯಾಂಡ್​ನಿಂದ ಹೈಡ್ರೋ ಗಾಂಜಾ ತರಿಸಿಕೊಳ್ಳುತ್ತಿದ್ದ ಆರೋಪಿಯನ್ನು ಬೆಂಗಳೂರು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದರು. ಇದೀಗ ಕೊಡಗು ಜಿಲ್ಲಾ‌ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಥೈಲ್ಯಾಂಡ್​ನಿಂದ ಕೊಡಗಿಗೆ ತಂದಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಮಡಿಕೇರಿಯಲ್ಲಿ 3 ಕೋಟಿ ರೂ.ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ, 7 ಪೆಡ್ಲರ್​ಗಳ ಬಂಧನ
ಹೈಡ್ರೋ ಗಾಂಜಾ ವಶಪಡಿಸಿಕೊಂಡ ಕೊಡಗು ಜಿಲ್ಲಾ‌ ಪೊಲೀಸರು, ಬಂಧಿತ ಆರೋಪಿಗಳು
Gopal AS
| Edited By: |

Updated on: Oct 02, 2024 | 7:37 PM

Share

ಕೊಡಗು, ಅ.02: ಕೊಡಗು ಜಿಲ್ಲಾ‌ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಥೈಲ್ಯಾಂಡ್​ನಿಂದ ಕೊಡಗಿಗೆ ತಂದಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಕೇರಳ ಹಾಗೂ ಕೊಡಗು ಮೂಲದ‌ ಮೆಹರೂಫ್, ರವೂಫ್, ನಾಸಿರುದ್ದೀನ್,, ವಾಜೀದ್, ಯಾಹಿಯಾ, ಅಕಾನಾಸ್ ಹಾಗೂ ರಿಯಾಜ್ ಸೇರಿ ಏಳು ಮಂದಿ ಪೆಡ್ಲರ್​ಗಳನ್ನು ಬಂಧಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ‌ದ ಮೂಲಕ ತರಲಾಗಿದ್ದ ಹೈಡ್ರೋ ಗಾಂಜಾ ಇದಾಗಿದ್ದು, ಮಡಿಕೇರಿ ನಗರದ ವಿರಾಜಪೇಟೆ ರಸ್ತೆಯ ಬಳಿ ಆರೋಪಿಗಳನ್ನು ಹೆಡಮುರಿ ಕಟ್ಟಲಾಗಿದೆ. ಈ ಕುರಿತು ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

ಕಳೆದ ಸೆ.10 ರಂದು ಬೆಂಗಳೂರು ಬ್ಯಾಡರಹಳ್ಳಿ ಠಾಣೆ ಪೊಲೀಸರು ಇನ್​​ಸ್ಟಾಗ್ರಾಂ ಮೂಲಕ ಆರ್ಡರ್ ಮಾಡಿ ಥೈಲ್ಯಾಂಡ್​ನಿಂದ ಹೈಡ್ರೋ ಗಾಂಜಾ ತರಿಸಿಕೊಳ್ಳುತ್ತಿದ್ದ ಆರೋಪಿ ತೌನೇಶ್ ಎಂಬಾತನನ್ನು ಬಂಧಿಸಿದ್ದರು. ಅಂಧ್ರಹಳ್ಳಿಯ ಕಾಲೇಜೊಂದರ ಬಳಿ ಮಾರಾಟ ಮಾಡುತ್ತಿದ್ದಾಗ ಆರೋಪಿಯನ್ನು ಸೆರೆ ಹಿಡಿದು, ಆತನಿಂದ 1.22 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಯುಪಿ, ಬಿಹಾರಿ ಯುವಕರ ಪುಂಡಾಟ; ಗಾಂಜಾ ಮತ್ತಿನಲ್ಲಿ ಇಬ್ಬರಿಗೆ ಚಾಕು ಇರಿತ

ಸಿಂಥೆಟಿಕ್ ಪೇಪರ್​​ನಲ್ಲಿ ಸುತ್ತಿ ಬಿಸ್ಕೆಟ್ ಬಾಕ್ಸ್​ನಲ್ಲಿ ಗಾಂಜಾ ತರಲಾಗುತ್ತಿತ್ತು

ಇನ್ನು ಈ ಗಾಂಜಾವನ್ನು ವಿಮಾನ ನಿಲ್ದಾಣದಲ್ಲಿ ಯಾಮಾರಿಸಿ ತರಿಸಿಕೊಳ್ಳಲಾಗುತ್ತಿತ್ತು. ಸಿಂಥೆಟಿಕ್ ಪೇಪರ್​​ನಲ್ಲಿ ಸುತ್ತಿ ಬಿಸ್ಕೆಟ್ ಬಾಕ್ಸ್​ನಲ್ಲಿ ಗಾಂಜಾ ತರಲಾಗುತ್ತಿತ್ತು. ಈ ಗಾಂಜಾವನ್ನು ಸಿಂಥೆಟಿಕ್ ಪೇಪರ್​​ನಲ್ಲಿ ಸುತ್ತುವುದರಿಂದ ವಾಸನೆ ಕೂಡ ಬರುತ್ತಿರಲಿಲ್ಲ. ಜೊತೆಗೆ, ಸ್ಕ್ಯಾನ್ ಮಾಡಿದಾಗಲೂ ಗಾಂಜಾ ಇದೆ ಎಂಬುದು ಗೊತ್ತಾಗುತ್ತಿರಲಿಲ್ಲ. ಬಟ್ಟೆ ವ್ಯಾಪಾರಿಯಾಗಿರುವ ತೌನೇಶ್ 2020 ರಿಂದಲೇ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನುವುದು ತನಿಖೆಯಿಂದ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು