AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿಕೇರಿ ರಾಜಾಸೀಟು ಕಾಮಗಾರಿಯಲ್ಲಿ ಕೋಟ್ಯಂತರ ರೂ. ಅಕ್ರಮ ಆರೋಪ: ತನಿಖೆಗೆ ಮುಂದಾದ ಲೋಕಾಯುಕ್ತ

ಮಡಿಕೇರಿ ಪ್ರವಾಸ ಹಮ್ಮಿಕೊಳ್ಳುವವರಿಗೆ ಇದು ಖುಷಿಯ ಸುದ್ದಿ.‌ ಐತಿಹಾಸಿಕ ರಾಜಾಸೀಟ್ ಪ್ರವಾಸಿಗರಿಗಾಗಿ ನಳನಳಿಸುತ್ತಾ ಇದೆ. ಐದು ಕೋಟಿ ರೂಪಾಯಿ ವೆಚ್ಚದ ಕಾಮಗಾರಿ‌ ಸಂಪೂರ್ಣವಾಗಿದ್ದು ಪ್ರವಾಸಿಗರನ್ನು ಮಂಜಿನ ನಗರಿ ಕೈ ಬೀಸಿ ಕರೆಯುತ್ತಿದೆ. ಆದರೆ ಕಾಮಗಾರಿಯಲ್ಲಿ ಒಂದೂವರೆ ಕೋಟಿ ರೂಪಾಯಿಯಷ್ಟು ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಲೋಕಾಯುಕ್ತ ತನಿಖೆ ಶುರುವಾಗಿದೆ.

ಮಡಿಕೇರಿ ರಾಜಾಸೀಟು ಕಾಮಗಾರಿಯಲ್ಲಿ ಕೋಟ್ಯಂತರ ರೂ. ಅಕ್ರಮ ಆರೋಪ: ತನಿಖೆಗೆ ಮುಂದಾದ ಲೋಕಾಯುಕ್ತ
ಮಡಿಕೇರಿ ರಾಜಾಸೀಟು ಕಾಮಗಾರಿಯಲ್ಲಿ ಕೋಟ್ಯಂತರ ರೂ. ಅಕ್ರಮ ಆರೋಪ: ತನಿಖೆಗೆ ಮುಂದಾದ ಲೋಕಾಯುಕ್ತ
Gopal AS
| Edited By: |

Updated on: Nov 04, 2024 | 7:53 AM

Share

ಮಡಿಕೇರಿ, ನವೆಂಬರ್ 4: ಮಡಿಕೇರಿ ರಾಜಾಸೀಟು ಪ್ರವಾಸಿಗರ ನೆಚ್ಚಿನ ತಾಣ. ಮಡಿಕೇರಿಗೆ ಬಂದಮೇಲೆ‌ ಒಂದು ಬಾರಿಯಾದರೂ ರಾಜಾಸೀಟ್​ಗೆ ಭೇಟಿ ನೀಡಿ ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸುತ್ತಾ, ಸುಂದರ ಸೂರ್ಯಾಸ್ತವನ್ನು ವೀಕ್ಷಣೆ ಮಾಡುವುದು ಅಂದರೆ ಖುಷಿ. ಈ ಸಂಭ್ರಮವನ್ನು ಹೆಚ್ಚು ಮಾಡಲೆಂದೇ ಕೊಡಗು ಜಿಲ್ಲಾಡಳಿತ, ಪ್ರವಾಸೋದ್ಯಮ‌ ಇಲಾಖೆ ಮತ್ತು ತೋಟಗಾರಿಕಾ ಇಲಾಖೆ ಜತೆಗೂಡಿ ‘ಗ್ರೇಟರ್ ರಾಜಾಸೀಟ್’ ಅಭಿವೃದ್ಧಿ ಪಡಿಸಿವೆ. ಐದು ಕೋಟಿ ರೂ. ವೆಚ್ಚದ ಈ ಕಾಮಗಾರಿ ಬಹುತೇಕ ಸಂಪೂರ್ಣವಾಗಿದ್ದು ಈಗಾಗಲೇ ಲೋಕಾರ್ಪಣೆಗೊಂಡಿದೆ. ಆದರೆ, ಕಾಮಗಾರಿಯಲ್ಲಿ ಸುಮಾರು ಒಂದೂವರೆ ಕೋಟಿ ರೂಪಾಯಿಯಷ್ಟು ಅಕ್ರಮ ನಡೆದಿದೆ ಎಂದು ಅಂತ ಸಾಮಾಜಿಕ ಕಾರ್ಯಕರ್ತರೊಬ್ಬರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಮಾಡದೇ ಇರುವ ಕಾಮಗಾರಿಗೆ ಲಕ್ಷ ಲಕ್ಷ ರೂಪಾಯಿ ಬಿಲ್ ಮಾಡಿಸಿರುವುದು, ಕಳಪೆ ದರ್ಜೆಯ ಸಲಕರಣೆಗಳನ್ನು ದುಬಾರಿ ಬಿಲ್ ಪಾವತಿಸಿ ತಂದಿರುವುದು, ಹಿರಿಯ ಅಧಿಕಾರಿಗಳ ಸಹಿಯನ್ನೇ ಮಾಡದೆ ಬಿಲ್ ಮಂಜೂರು ಮಾಡಿಸಿಕೊಂಡಿರುವುದು ಸೇರಿದಂತೆ ಹತ್ತು ಹಲವು ಆರೋಪಗಳನ್ನು ಲೋಕಾಯುಕ್ತಕ್ಕೆ ನೀಡಿದ ದೂರಿನಲ್ಲಿ ಸಾಮಾಜಿಕ ಕಾರ್ಯಕರ್ತರಾದ ತೆನ್ನಿರ ಮಹಿನಾ ಉಲ್ಲೇಖಿಸಿದ್ದಾರೆ.

In Madikeri Greater Raja's Seat project work, crores of Rs Irregularity found, Lokayukta to investigate

ಸದ್ಯ ಮಹಿನಾ ಅವರು ದಾಖಲೆಗಳ ಸಮೇತ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಈ ದೂರನ್ನು ಕೈಗೆತ್ತಿಕೊಂಡಿರುವ ಅಧಿಕಾರಿಗಳು ಈಗಾಲೇ ತನಿಖೆ ಶುರು ಮಾಡಿದ್ದಾರೆ. ಆದರೆ, ಯಾವಾಗ ವಿಚಾರಣೆ ಶುರುವಾಯಿತೋ ಕಾಮಗಾರಿಯ ಉಸ್ತುವಾರಿ ಹೊತ್ತಿದ್ದ ಮುಖ್ಯ ಎಂಜಿನಿಯರ್ ಏಕಾಏಕಿ ಫೈಲ್​ಗಳನ್ನ ಈಗಾಗಲೇ ನಿವೃತ್ತರಾಗಿರುವ ಮುಖ್ಯ ಎಂಜಿನಿಯರ್​ಗಳ ಮನೆಗೆ ಕೊಂಡೊಯ್ದು ಅದಕ್ಕೆ ಬಲವಂತದಿಂದ ಸಹಿ ಮಾಡಿದ್ದಾರೆ ಎಂದೂ ಆರೋಪಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೊಡಗು ಜಿಲ್ಲಾಧಿಕಾರಿ ಹಾರಿಕೆಯ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: 4 ಮಕ್ಕಳು ಹೆತ್ತರೆ 1 ಲಕ್ಷ ರೂ ಬಹುಮಾನ: ಕೊಡವ ಜನಾಂಗಕ್ಕೆ ಕೊಡವ ಸಮಾಜದ ವಿಶಿಷ್ಟ ಆಫರ್

ಒಟ್ಟಿನಲ್ಲಿ ಕೊಡಗು ಪ್ರವಾಸೋದ್ಯಮ ದಿನದಿಂದ ದಿನಕ್ಕೆ ಅಭಿವೃದ್ಧಿ ಆಗುತ್ತಿದೆ. ಪ್ರವಾಸಿಗರ ಮನ ತಣಿಸಲು ಹೊಸ ಹೊಸ ಯೋಜನೆಗಳು ಅನುಷ್ಠಾಗೊಳುತ್ತಿವೆ. ಪ್ರವಾಸೋದ್ಯಮದ ಜತೆಗೆ ಕೊಡಗಿನ‌ ಅಭಿವೃದ್ಧಿಯೂ ಆಗುತ್ತಿದೆ. ಆದರೆ, ಇಲ್ಲಿಯೂ ಅಕ್ರಮ, ಭ್ರಷ್ಟಾಚಾರದ ವಾಸನೆ ಬಂದಿರುವುದು ವಿಪರ್ಯಾಸ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ