AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Powerless: ರಾಜ್ಯ ಸರ್ಕಾರದಿಂದ ಅನುದಾನ ಕಡಿತ -ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿಗಳು ಕಗ್ಗತ್ತಲಲ್ಲಿ

ಕೊಡಗು ಜಿಲ್ಲೆಯ ಅಂಗನವಾಡಿಗಳು ಗಂಭೀರ ಸಮಸ್ಯೆಗೆ ಸಿಲುಕಿದೆ. ಇಲಾಖೆಯ ಪ್ರಧಾನ ಕಚೇರಿಯಲ್ಲಿ ಬಿಎಸ್​ಎನ್​ಎಲ್​ ಬಿಲ್ ಪಾವತಿ ಮಾಡದ್ದರಿಂದ ಇಂಟರ್​ನೆಟ್​ ಸಂಪರ್ಕವನ್ನೂ ಕಡಿತ ಮಾಡಿರುವ ಪ್ರಸಂಗ ನಡೆದಿದೆ. ಕಚೇರಿಯಲ್ಲಿ ಕನಿಷ್ಟ ಜೆರಾಕ್ಸ್​ ಮಾಡಲು ಪೇಪರ್ ಖರೀದಿಸುವುದಕ್ಕೂ ಹಣ ಇಲ್ಲವಾದಂತಾಗಿದೆ

Powerless: ರಾಜ್ಯ ಸರ್ಕಾರದಿಂದ ಅನುದಾನ ಕಡಿತ -ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿಗಳು ಕಗ್ಗತ್ತಲಲ್ಲಿ
ಸರ್ಕಾರದಿಂದ ಅನುದಾನ ಕಡಿತ: ಕೊಡಗು ಜಿಲ್ಲೆಯ ಅಂಗನವಾಡಿಗಳು ಕಗ್ಗತ್ತಲಲ್ಲಿ
Follow us
Gopal AS
| Updated By: ಸಾಧು ಶ್ರೀನಾಥ್​

Updated on: Nov 03, 2023 | 4:55 PM

ಕೊಡಗು ಜಿಲ್ಲೆಯ (Kodagu) ಅಂಗನವಾಡಿಗಳು ಕಗ್ಗತ್ತಲಲ್ಲಿವೆ. ಜಿಲ್ಲೆಯ ಬಹುತೇಕ ಅಂಗನವಾಡಿಗಳ ವಿದ್ಯುತ್ (Electricity) ಸಂಪರ್ಕವನ್ನೇ ಚೆಸ್ಕಾಂ ಕಡಿತಗೊಳಿಸಿದೆ. ಕಳೆದ ಹಲವು ತಿಂಗಳಿಂದ ಚೆಸ್ಕಾಂಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (Directorate of Women And Child Development Department) ವಿದ್ಯುತ್ ಬಿಲ್​ ಪಾವತಿಸಿಲ್ಲ. ಹಾಗಾಗಿ ಚೆಸ್ಕಾಂ ಅಂಗನವಾಡಿಗಳ (Anganwadi) ವಿದ್ಯುತ್ (Electricity) ಸಂಪರ್ಕ ಕಡಿತ ಮಾಡಿರುವುದೇ ಅಲ್ಲದೆ ಹಲವು ಅಂಗನವಾಡಿಗಳ (anganwadi) ಮೀಟರ್​ಗಳನ್ನೇ ಹೊತ್ತೊಯ್ದಿದೆ!

ಇದರಿಂದಾಗಿ ಕತ್ತಲಲ್ಲೇ ಮಕ್ಕಳು ಪಾಠ ಕೇಳುವಂತಾಗಿದೆ. ಅಂಗನವಾಡಿಗಳ ದೈನಂದಿನ ಖರ್ಚು ವೆಚ್ಚಕ್ಕೆಂದು ಈ ಹಿಂದೆ ಇಲಾಖೆ ಪ್ರತಿ ಅಂಗನವಾಡಿಗೆ ತಲಾ 3500 ರೂ ನೀಡುತ್ತಿತ್ತು. ಅದರಲ್ಲೇ ವಿದ್ಯುತ್ ಬಿಲ್ ಪಾವತಿಯಾಗುತ್ತಿತ್ತು. ಆದ್ರೆ 2022ರ ಆಗಸ್ಟ್​ ನಿಂದಲೇ ಈ ಅನುದಾನ ಅಂಗನವಾಡಿಗಳಿಗೆ ಬರುತ್ತಿಲ್ಲ. ಹಾಗಾಗಿ ವಿದ್ಯುತ್ ಬಿಲ್ ಪಾವತಿಸಲು ಸಾಧ್ಯವಾಗುತ್ತಿಲ್ಲ. ಅದೂ ಅಲ್ಲದೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಕಳೆದ ಜನವರಿಯಿಂದ ಬೇರೆ ಯಾವುದೇ ಅನುದಾನ ಬರುತ್ತಿಲ್ಲ.

ಇದರಿಂದಾಗಿ ಈ ಇಲಾಖೆ ಗಂಭೀರ ಸಮಸ್ಯೆಗೆ ಸಿಲುಕಿದೆ. ಇಲಾಖೆಯ ಪ್ರಧಾನ ಕಚೇರಿಯಲ್ಲಿ ಬಿಎಸ್​ಎನ್​ಎಲ್​ ಬಿಲ್ ಪಾವತಿ ಮಾಡದ್ದರಿಂದ ಇಂಟರ್​ನೆಟ್​ ಸಂಪರ್ಕವನ್ನೂ ಕಡಿತ ಮಾಡಿರುವ ಪ್ರಸಂಗ ನಡೆದಿದೆ. ಕಚೇರಿಯಲ್ಲಿ ಕನಿಷ್ಟ ಜೆರಾಕ್ಸ್​ ಮಾಡಲು ಪೇಪರ್ ಖರೀದಿಸುವುದಕ್ಕೂ ಹಣ ಇಲ್ಲವಾದಂತಾಗಿದೆ ಅಂತ ಅಲ್ಲಿನ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಇಲಾಖೆಗೆ ನೀಡುತ್ತಿದ್ದ ಅನುದಾನ ನಿಲ್ಲಿಸಿದ್ದೇ ಈ ಎಲ್ಲಾ ಎಡವಟ್ಟುಗಳಿಗೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ