AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕೊಡಗಿನಲ್ಲಿ ಭಾರಿ ಮಳೆ, ಶಾಲೆಗಳಿಗೆ ಇಂದು ರಜೆ, ಸಿಎಂ ಬೊಮ್ಮಾಯಿ ಜಿಲ್ಲೆಗೆ ದೌಡು

ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಕೆಲವೊಂದು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದಲ್ಲಿರುವ ಕೆಪಿಎಸ್ ಶಾಲೆ, ವಿರಾಜಪೇಟೆಯ ಸಂತ ಅನ್ನಮ್ಮ ಪ್ರಾರ್ಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Karnataka Rain: ಕೊಡಗಿನಲ್ಲಿ ಭಾರಿ ಮಳೆ, ಶಾಲೆಗಳಿಗೆ ಇಂದು ರಜೆ, ಸಿಎಂ ಬೊಮ್ಮಾಯಿ ಜಿಲ್ಲೆಗೆ ದೌಡು
ಕೊಡಗಿನಲ್ಲಿ ಮಳೆ
TV9 Web
| Edited By: Rakesh Nayak Manchi|

Updated on:Jul 12, 2022 | 7:24 AM

Share

ಕೊಡಗು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಕೆಲವೊಂದು ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದಲ್ಲಿರುವ ಕೆಪಿಎಸ್ ಶಾಲೆ, ವಿರಾಜಪೇಟೆಯ ಸಂತ ಅನ್ನಮ್ಮ ಪ್ರಾರ್ಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಆಡಳಿತ ಮಂಡಳಿಗಳು ಶಾಲೆಗಳಿಗೆ ರಜೆ ಘೋಷಣೆ ಮಾಡಿವೆ. ಇನ್ನೊಂದೆಡೆ ಮಳೆ ಹೆಚ್ಚಾಗುತ್ತಿರುವ ಕೊಡಗು ಜಿಲ್ಲೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಬಹುತೇಕ ಕಡೆ ಧಾರಾಕಾರ ಮಳೆ: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಶಾಲೆಗಳಿಗೆ ಸೂಚಿಸಿದ ಶಿಕ್ಷಣ ಇಲಾಖೆ

ಕೊಡಗಿನಲ್ಲಿ ಮಳೆರಾಯನ ಆರ್ಭಟಕ್ಕೆ ಅವಾಂತರಗಳೇ ಸೃಷ್ಟಿಯಾಗಿದ್ದು, ಭೂಕುಸಿತ ಉಂಟಾಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಮಳೆಯಿಂದ ಹಾನಿಗೊಳಗಾದ ಹಾಗೂ ಭೂಕುಸಿತ ಉಂಟಾದ ಸ್ಥಳಗಳಿಗೆ ಸಿಎಂ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಡಿಕೇರಿಗೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ, ಮಳೆಹಾನಿ ಪ್ರದೇಶಗಳನ್ನ ವೀಕ್ಷಣೆ ಮಾಡಲಿದ್ದಾರೆ. ಇವರೊಂದಿಗೆ ಕಂದಾಯ ಸಚಿವ ಆರ್.ಅಶೋಕ್ ಸಾಥ್ ನೀಡಲಿದ್ದಾರೆ.

ಮಳೆಯಿಂದ ಉಂಟಾದ ಹಾನಿಗಳಿಗೆ ಪರಿಹಾರ ನೀಡುವ ಕ್ರಮಗಳ ಕುರಿತು ಜಿಲ್ಲಾಡಳಿತದ ಜೊತೆ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಡಳಿತದೊಂದಿಗೆ ಚರ್ಚೆ ನಡೆಸಲಿದ್ದಾರೆ. ಅಲ್ಲದೆ ಸಂತ್ರಸ್ತರ ಜೊತೆಗೆ ಮಾತಾಡಿ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಲಿದ್ದಾರೆ. ಬಳಿಕ ಮಧ್ಯಾಹ್ನ 2.30ಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲಿಯೂ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆ; ಜಮೀನುಗಳಿಗೆ ನೀರು ನುಗ್ಗಿ 200 ಎಕರೆಗೂ ಹೆಚ್ಚು ಬೆಳೆ ನಾಶ

ಬಂಗಾಳಕೊಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಮುಂದಿನ 4 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರವಾಳಿ ಭಾಗಕ್ಕೆ ರೆಡ್ ಅಲರ್ಟ್ ಮುಂದುವರೆದಿದ್ದು, ಧಾರವಾಡ, ಹಾವೇರಿ, ಕಲಬುರಗಿ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಬಾಗಲಕೋಟೆ, ದಾವಣಗೆರೆ, ಮೈಸೂರು ಸೇರಿದಂತೆ ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದೆ

ಇದನ್ನೂ ಓದಿ:  Karnataka Rain: ರಾಜ್ಯದಲ್ಲಿ ಇನ್ನೂ 5 ದಿನಗಳ‌ ಕಾಲ ಮಳೆಯಾಗುವ ಸಾಧ್ಯತೆ; ಕರಾವಳಿ ಭಾಗದಲ್ಲಿ ದಾಖಲೆ ಪ್ರಮಾಣದ ಮಳೆ, ವಿವರ ಇಲ್ಲಿದೆ

Published On - 7:24 am, Tue, 12 July 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ